AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara News: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಕೆಎಸ್​ಆರ್​ಟಿಸಿ ಬಸ್, ಗೂಡ್ಸ್ ವಾಹನ ಡಿಕ್ಕಿ; ಚಾಲಕ ಸಾವು

ಬಸ್ ಮೈಸೂರಿನಿಂದ ಬೆಂಗಳೂರಿಗೆ ‌ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ.

Ramanagara News: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಕೆಎಸ್​ಆರ್​ಟಿಸಿ ಬಸ್, ಗೂಡ್ಸ್ ವಾಹನ ಡಿಕ್ಕಿ; ಚಾಲಕ ಸಾವು
ಅಪಘಾತದ ತೀವ್ರತೆಗೆ ಬಸ್ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ತಲುಪಿದ್ದು, ಅಲ್ಲಿಂದಲೂ ಹೊರಕ್ಕೆ ಚಲಿಸಿದೆ.
ಪ್ರಶಾಂತ್​ ಬಿ.
| Edited By: |

Updated on: Jun 28, 2023 | 5:54 PM

Share

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ (Bengaluru Mysuru expressway) ಮತ್ತೊಂದು ಭೀಕರ ಅಪಘಾತ (Accident) ಸಂಭವಿಸಿದ್ದು, ಕೆಎಸ್​ಆರ್​ಸಿಟಿ ಬಸ್ ಚಾಲಕ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬುಧವಾರ ಕೆಎಸ್​ಆರ್​ಸಿಟಿ ಬಸ್ ಹಾಗೂ ಗೂಡ್ಸ್ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ತಲುಪಿದ್ದು, ಅಲ್ಲಿಂದಲೂ ಹೊರಕ್ಕೆ ಚಲಿಸಿದೆ. ಅದೃಷ್ಟವಶಾತ್, ಬಸ್​​​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಮೈಸೂರಿನಿಂದ ಬೆಂಗಳೂರಿಗೆ ‌ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್​​​ ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ರಚಿಸುವುದಾಗಿ ರಾಜ್ಯ ಸರ್ಕಾರ ಎರಡು ದಿನಗಳ ಹಿಂದೆ ಹೇಳಿತ್ತು. ಎಕ್ಸ್​​ಪ್ರೆಸ್​​ ವೇ ಕಾಮಗಾರಿ ಅವೈಜ್ಞಾನಿಕವಾಗಿ ನಡೆದಿದೆ. ಇದನ್ನು ಪರಿಶೀಲಿಸಲು ತಂಡ ರಚನೆ ಮಾಡುತ್ತೇವೆ. ಅದು ನೀಡುವ ವರದಿಯ ಆಧಾರದಲ್ಲಿ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೋಮವಾರ ಹೇಳಿದ್ದರು.

ಇದನ್ನೂ ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಕಳೆದ ಎರಡ್ಮೂರು ತಿಂಗಳಲ್ಲಿ ಈ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ