AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಸಲ್ ಇಲ್ಲದೇ ಅರ್ಧ ದಾರಿಯಲ್ಲೇ ನಿಂತ ಬಸ್! ಡೀಸಲ್ ಹಾಕಿಸದಷ್ಟು ಲಾಸ್ ಮಾಡಿಕೊಂಡಿದೆಯಾ KSRTC?

ಶಕ್ತಿ ಯೋಜನೆಯಡಿ ನೂರು ಕೋಟಿ ಮಹಿಳೆಯರನ್ನು ಉಚಿತವಾಗಿ ರಾಜ್ಯವೆಲ್ಲ ಸುತ್ತಾಡಿಸಿದ ಕೀರ್ತಿ ಒಂದೆಡೆಯಾದ್ರೆ, ಇಲಾಖೆಯ ಬೊಕ್ಕಸದಲ್ಲಿ ಡೀಸಲ್ ಗೂ ಕಾಸಿಲ್ಲವಾ ಎಂಬ ಪ್ರಶ್ನೆ ಬಲವಾಗಿ ಮೂಡುತ್ತಿದೆ. ಈ ವಿಚಾರಕ್ಕೆ ಸರ್ಕಾರ ಹಾಗೂ ಸಾರಿಗೆ ಇಲಾಖೆ ಏನು ಉತ್ತರ ಕೊಡಲಿದೆ ಕಾದು ನೋಡಬೇಕು.

ಡೀಸಲ್ ಇಲ್ಲದೇ ಅರ್ಧ ದಾರಿಯಲ್ಲೇ ನಿಂತ ಬಸ್! ಡೀಸಲ್ ಹಾಕಿಸದಷ್ಟು ಲಾಸ್ ಮಾಡಿಕೊಂಡಿದೆಯಾ KSRTC?
ಡೀಸಲ್ ಹಾಕಿಸದಷ್ಟು ಲಾಸ್ ಮಾಡಿಕೊಂಡಿದೆಯಾ KSRTC?
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಸಾಧು ಶ್ರೀನಾಥ್​|

Updated on: Nov 23, 2023 | 12:05 PM

Share

ಐದು ಗ್ಯಾರಂಟಿಗಳೊಲ್ಲೊಂದಾದ ಶಕ್ತಿ ಗ್ಯಾರಂಟಿ ಸ್ಕೀಮ್ ರಾಜ್ಯಕ್ಕೆ ದಯಪಾಲಿಸಿ ವಿರೋಧ ಪಕ್ಷವನ್ನು ಬ್ಯಾಕ್ ಫುಟ್ ಗೆ ತಳ್ಳಿರುವ ಸಿದ್ದರಾಮಯ್ಯ ಸಾರಥ್ಯದ ರಾಜ್ಯ ಕಾಂಗ್ರೆಸ್​​ ಸರಕಾರ, ತನ್ನ ಬಸ್ಸುಗಳಿಗೆ ಡೀಸಲ್ ಹಾಕಿಸದಷ್ಟು ಲಾಸ್ ಮಾಡಿಕೊಂಡಿದೆಯಾ ? ಇಂಥಾದೊಂದು ಅನುಮಾನ ಪ್ರಯಾಣಿಕರಲ್ಲಿ ಮೂಡಿದೆ, ರಾಮನಗರದ (Ramnagar) ಬಸ್ಸೊಂದು ( KSRTC bus) ಡೀಸಲ್ ಇಲ್ಲದೇ ಅರ್ಧ ದಾರಿಯಲ್ಲಿಯೇ ನಿಂತಿರುವ ಘಟನೆ ಇದಕ್ಕೆ ಸಾಕ್ಷಿ ಎಂಬಂತಿದೆ!

ರಾಮನಗರದಿಂದ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಮಂಚನಬೆಲೆ (Manchanabele) ದಾಟಿ ವಾಪಸ್ ಬರುವ ಮುನ್ನವೇ ಅರ್ಧ ದಾರಿಯಲ್ಲಿ ಕೈ ಕೊಟ್ಟಿದೆ. ಬಸ್ಸೇನಾದ್ರೂ ಕೆಟ್ಟು ಹೋಯ್ತಾ ಅಂತ ಪ್ರಯಾಣಿಕರು ಕೇಳಿದಕ್ಕೆ ಡೀಸಲ್ ಟ್ಯಾಂಕ್​​ ಫುಲ್​ ಖಾಲಿ ಅಗಿದೆ ಅಂತಾ ಚಾಲಕ ಮತ್ತು ನಿರ್ವಾಹಕ ಉತ್ತರ ಕೊಟ್ಟಿದ್ದಾರೆ! ಕೆ ಎ f 1662‌ ನಂಬರಿನ ಬಸ್, ಡೀಸಲ್ ಖಾಲಿಯಾದ ಕಾರಣ ಜನ‌ ಇನ್ನೊಂದು ಬಸ್ ಹತ್ತಿ ಹೋಗಿದ್ದಾರೆ. ಆದರೆ ಒಂದು ಕಡೆ ಆರು ತಿಂಗಳ ಶಕ್ತಿ ಯೋಜನೆಯಿಂದಾಗಿ ಸರಕಾರ ಫುಲ್​ ಖುಷ್ ಯಲ್ಲಿದ್ದರೆ, ಮತ್ತೊಂದೆಡೆ ಡೀಸಲ್ ಇಲ್ಲದೆ ಬಸ್ ಸಿಬ್ಬಂದಿ ಪರದಾಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬರ್ತಿದೆ

Also Read: ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಇನ್ನು ಈ ಬಗ್ಗೆ ಡಿಪೋ ಮ್ಯಾನೆಜರ್ ಪ್ರದೀಪ್ ರವರಿಗೆ ಕರೆ ಮಾಡಿ ಕೇಳಿದಕ್ಕೆ ವಿಚಾರ ಗೊತ್ತಿಲ್ಲ, ಡೀಸಲ್ ಖಾಲಿಯಾಗಿರಬೇಕು, ಚೆಕ್ ಮಾಡ್ತೇನೆ,‌ ನಾನು ಹೊರಗಡೆ ಬಂದಿದ್ದೇನೆ ಎಂಬುದಾಗಿ ಉಡಾಫೆ ಉತ್ತರ ನೀಡಿದ್ದಾರೆ.‌ ಚಾಲಕನ ನಿರ್ಲಕ್ಷ್ಯ ದಿಂದ ಡೀಸಲ್ ಹಾಕಿಸಿಕೊಂಡಿಲ್ಲವೋ ಅಥವಾ ಡೀಸಲ್ ಇರಲಿಲ್ಲವೋ ಎಂಬುದಕ್ಕೆ ಸಮರ್ಪಕ ಉತ್ತರ ನೀಡೋದಕ್ಕೆ ಯಾರೂ ಮುಂದೆ ಬಂದಿಲ್ಲ, ಇನ್ನು ಇದಕ್ಕೆ ಪುಷ್ಟಿ ನೀಡುವಂತೆ ರಾಮನಗರದ ಬಸ್ ಡಿಪೋದಲ್ಲಿ ಏಳೆಂಟು ಬಸ್ ಗಳು ಡೀಸಲ್ ಇಲ್ಲದೇ ಆಪರೇಟ್ ಆಗ್ತಾ ಇಲ್ಲ, ಜನರಿಗೆ ಸಾರಿಗೆ ಸೇವೆ ನೀಡ್ತಾ ಇಲ್ಲ ಎಂಬ ಆರೋಪವೂ ಕೇಳಿ ಬಂದಿದೆ. ಎಲ್ಲಾ ಬಸ್ಸು ಗಳು ಬಹಳಷ್ಟು ರಷ್‌ನಿಂದ ಕೂಡಿದ್ದು ಹಲವು ಬಸ್ಸುಗಳು ತಮ್ಮ ಊರಿನ ಕಡೆ ಟ್ರಿಪ್ ಗೆ ಬರ್ತಾ ಇಲ್ಲ ಎಂಬ ಆಕ್ರೋಶವನ್ನು ಪ್ರಯಾಣಿಕರು ಹಾಕ್ತಾ ಇದ್ದಾರೆ.

ಇನ್ನು ಶಕ್ತಿ ಯೋಜನೆಯಡಿ ನೂರು ಕೋಟಿ ಮಹಿಳೆಯರನ್ನು ಉಚಿತವಾಗಿ ರಾಜ್ಯವೆಲ್ಲ ಸುತ್ತಾಡಿಸಿದ ಕೀರ್ತಿ ಒಂದೆಡೆಯಾದ್ರೆ, ಇಲಾಖೆಯ ಬೊಕ್ಕಸದಲ್ಲಿ ಡೀಸಲ್ ಗೂ ಕಾಸಿಲ್ಲವಾ ಎಂಬ ಪ್ರಶ್ನೆ ಬಲವಾಗಿ ಮೂಡುತ್ತಿದೆ. ಈ ವಿಚಾರಕ್ಕೆ ಸರ್ಕಾರ ಹಾಗೂ ಸಾರಿಗೆ ಇಲಾಖೆ ಏನು ಉತ್ತರ ಕೊಡಲಿದೆ ಕಾದು ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು