Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಸಲ್ ಇಲ್ಲದೇ ಅರ್ಧ ದಾರಿಯಲ್ಲೇ ನಿಂತ ಬಸ್! ಡೀಸಲ್ ಹಾಕಿಸದಷ್ಟು ಲಾಸ್ ಮಾಡಿಕೊಂಡಿದೆಯಾ KSRTC?

ಶಕ್ತಿ ಯೋಜನೆಯಡಿ ನೂರು ಕೋಟಿ ಮಹಿಳೆಯರನ್ನು ಉಚಿತವಾಗಿ ರಾಜ್ಯವೆಲ್ಲ ಸುತ್ತಾಡಿಸಿದ ಕೀರ್ತಿ ಒಂದೆಡೆಯಾದ್ರೆ, ಇಲಾಖೆಯ ಬೊಕ್ಕಸದಲ್ಲಿ ಡೀಸಲ್ ಗೂ ಕಾಸಿಲ್ಲವಾ ಎಂಬ ಪ್ರಶ್ನೆ ಬಲವಾಗಿ ಮೂಡುತ್ತಿದೆ. ಈ ವಿಚಾರಕ್ಕೆ ಸರ್ಕಾರ ಹಾಗೂ ಸಾರಿಗೆ ಇಲಾಖೆ ಏನು ಉತ್ತರ ಕೊಡಲಿದೆ ಕಾದು ನೋಡಬೇಕು.

ಡೀಸಲ್ ಇಲ್ಲದೇ ಅರ್ಧ ದಾರಿಯಲ್ಲೇ ನಿಂತ ಬಸ್! ಡೀಸಲ್ ಹಾಕಿಸದಷ್ಟು ಲಾಸ್ ಮಾಡಿಕೊಂಡಿದೆಯಾ KSRTC?
ಡೀಸಲ್ ಹಾಕಿಸದಷ್ಟು ಲಾಸ್ ಮಾಡಿಕೊಂಡಿದೆಯಾ KSRTC?
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಸಾಧು ಶ್ರೀನಾಥ್​

Updated on: Nov 23, 2023 | 12:05 PM

ಐದು ಗ್ಯಾರಂಟಿಗಳೊಲ್ಲೊಂದಾದ ಶಕ್ತಿ ಗ್ಯಾರಂಟಿ ಸ್ಕೀಮ್ ರಾಜ್ಯಕ್ಕೆ ದಯಪಾಲಿಸಿ ವಿರೋಧ ಪಕ್ಷವನ್ನು ಬ್ಯಾಕ್ ಫುಟ್ ಗೆ ತಳ್ಳಿರುವ ಸಿದ್ದರಾಮಯ್ಯ ಸಾರಥ್ಯದ ರಾಜ್ಯ ಕಾಂಗ್ರೆಸ್​​ ಸರಕಾರ, ತನ್ನ ಬಸ್ಸುಗಳಿಗೆ ಡೀಸಲ್ ಹಾಕಿಸದಷ್ಟು ಲಾಸ್ ಮಾಡಿಕೊಂಡಿದೆಯಾ ? ಇಂಥಾದೊಂದು ಅನುಮಾನ ಪ್ರಯಾಣಿಕರಲ್ಲಿ ಮೂಡಿದೆ, ರಾಮನಗರದ (Ramnagar) ಬಸ್ಸೊಂದು ( KSRTC bus) ಡೀಸಲ್ ಇಲ್ಲದೇ ಅರ್ಧ ದಾರಿಯಲ್ಲಿಯೇ ನಿಂತಿರುವ ಘಟನೆ ಇದಕ್ಕೆ ಸಾಕ್ಷಿ ಎಂಬಂತಿದೆ!

ರಾಮನಗರದಿಂದ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಮಂಚನಬೆಲೆ (Manchanabele) ದಾಟಿ ವಾಪಸ್ ಬರುವ ಮುನ್ನವೇ ಅರ್ಧ ದಾರಿಯಲ್ಲಿ ಕೈ ಕೊಟ್ಟಿದೆ. ಬಸ್ಸೇನಾದ್ರೂ ಕೆಟ್ಟು ಹೋಯ್ತಾ ಅಂತ ಪ್ರಯಾಣಿಕರು ಕೇಳಿದಕ್ಕೆ ಡೀಸಲ್ ಟ್ಯಾಂಕ್​​ ಫುಲ್​ ಖಾಲಿ ಅಗಿದೆ ಅಂತಾ ಚಾಲಕ ಮತ್ತು ನಿರ್ವಾಹಕ ಉತ್ತರ ಕೊಟ್ಟಿದ್ದಾರೆ! ಕೆ ಎ f 1662‌ ನಂಬರಿನ ಬಸ್, ಡೀಸಲ್ ಖಾಲಿಯಾದ ಕಾರಣ ಜನ‌ ಇನ್ನೊಂದು ಬಸ್ ಹತ್ತಿ ಹೋಗಿದ್ದಾರೆ. ಆದರೆ ಒಂದು ಕಡೆ ಆರು ತಿಂಗಳ ಶಕ್ತಿ ಯೋಜನೆಯಿಂದಾಗಿ ಸರಕಾರ ಫುಲ್​ ಖುಷ್ ಯಲ್ಲಿದ್ದರೆ, ಮತ್ತೊಂದೆಡೆ ಡೀಸಲ್ ಇಲ್ಲದೆ ಬಸ್ ಸಿಬ್ಬಂದಿ ಪರದಾಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬರ್ತಿದೆ

Also Read: ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಇನ್ನು ಈ ಬಗ್ಗೆ ಡಿಪೋ ಮ್ಯಾನೆಜರ್ ಪ್ರದೀಪ್ ರವರಿಗೆ ಕರೆ ಮಾಡಿ ಕೇಳಿದಕ್ಕೆ ವಿಚಾರ ಗೊತ್ತಿಲ್ಲ, ಡೀಸಲ್ ಖಾಲಿಯಾಗಿರಬೇಕು, ಚೆಕ್ ಮಾಡ್ತೇನೆ,‌ ನಾನು ಹೊರಗಡೆ ಬಂದಿದ್ದೇನೆ ಎಂಬುದಾಗಿ ಉಡಾಫೆ ಉತ್ತರ ನೀಡಿದ್ದಾರೆ.‌ ಚಾಲಕನ ನಿರ್ಲಕ್ಷ್ಯ ದಿಂದ ಡೀಸಲ್ ಹಾಕಿಸಿಕೊಂಡಿಲ್ಲವೋ ಅಥವಾ ಡೀಸಲ್ ಇರಲಿಲ್ಲವೋ ಎಂಬುದಕ್ಕೆ ಸಮರ್ಪಕ ಉತ್ತರ ನೀಡೋದಕ್ಕೆ ಯಾರೂ ಮುಂದೆ ಬಂದಿಲ್ಲ, ಇನ್ನು ಇದಕ್ಕೆ ಪುಷ್ಟಿ ನೀಡುವಂತೆ ರಾಮನಗರದ ಬಸ್ ಡಿಪೋದಲ್ಲಿ ಏಳೆಂಟು ಬಸ್ ಗಳು ಡೀಸಲ್ ಇಲ್ಲದೇ ಆಪರೇಟ್ ಆಗ್ತಾ ಇಲ್ಲ, ಜನರಿಗೆ ಸಾರಿಗೆ ಸೇವೆ ನೀಡ್ತಾ ಇಲ್ಲ ಎಂಬ ಆರೋಪವೂ ಕೇಳಿ ಬಂದಿದೆ. ಎಲ್ಲಾ ಬಸ್ಸು ಗಳು ಬಹಳಷ್ಟು ರಷ್‌ನಿಂದ ಕೂಡಿದ್ದು ಹಲವು ಬಸ್ಸುಗಳು ತಮ್ಮ ಊರಿನ ಕಡೆ ಟ್ರಿಪ್ ಗೆ ಬರ್ತಾ ಇಲ್ಲ ಎಂಬ ಆಕ್ರೋಶವನ್ನು ಪ್ರಯಾಣಿಕರು ಹಾಕ್ತಾ ಇದ್ದಾರೆ.

ಇನ್ನು ಶಕ್ತಿ ಯೋಜನೆಯಡಿ ನೂರು ಕೋಟಿ ಮಹಿಳೆಯರನ್ನು ಉಚಿತವಾಗಿ ರಾಜ್ಯವೆಲ್ಲ ಸುತ್ತಾಡಿಸಿದ ಕೀರ್ತಿ ಒಂದೆಡೆಯಾದ್ರೆ, ಇಲಾಖೆಯ ಬೊಕ್ಕಸದಲ್ಲಿ ಡೀಸಲ್ ಗೂ ಕಾಸಿಲ್ಲವಾ ಎಂಬ ಪ್ರಶ್ನೆ ಬಲವಾಗಿ ಮೂಡುತ್ತಿದೆ. ಈ ವಿಚಾರಕ್ಕೆ ಸರ್ಕಾರ ಹಾಗೂ ಸಾರಿಗೆ ಇಲಾಖೆ ಏನು ಉತ್ತರ ಕೊಡಲಿದೆ ಕಾದು ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್