AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲೇ ಯೂ ಟರ್ನ್ ಹೊಡೆದ ಕೆಎಸ್​ಆರ್​ಟಿಸಿ ಬಸ್​: ಟೋಲ್​ನಿಂದ ಬಚಾವ್​ ಆಗಲು ಪ್ರಯಾಣಿಕರ ಪ್ರಾಣ ಸಂಕಟಕ್ಕೆ ದೂಡಿದ ಡ್ರೈವರ್​​

ಟೋಲ್ ಉಳಿಸುವ ಕಾರಣಕ್ಕೆ ನಡು ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್​ ಡ್ರೈವರ್​ ಯೂ ಟರ್ನ್ ಮಾಡಿ ರಾಂಗ್ ಸೈಡ್​ನಲ್ಲಿ ಹೋಗಿರುವಂತಹ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಸಮೀಪದಲ್ಲಿ ನಡೆದಿದೆ. ಸದ್ಯ ಸಾಮಾಜಿಕ ಜಾಲಾತಣದಲ್ಲಿ ವಾಹನ ಸವಾರರು ವಿಡಿಯೋ ಹಂಚಿಕೊಂಡಿದ್ದು, ಬಸ್​ ಡ್ರೈವರ್​ ವಿರುದ್ಧ ಕಿಡಿಕಾರಲಾಗಿದೆ.

Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 31, 2023 | 5:58 PM

ರಾಮನಗರ, ಜುಲೈ 31: ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಸಮೀಪದಲ್ಲಿ ನಡು ರಸ್ತೆಯಲ್ಲೇ ಕೆ ಎ 42 F 2233 ನಂಬರಿನ ಕೆಎಸ್​ಆರ್​ಟಿಸಿ ಬಸ್ (KSRTC bus)​​ ಯೂ ಟರ್ನ್ ಮಾಡಲಾಗಿದೆ. ಟೋಲ್ ಉಳಿಸುವ ಕಾರಣಕ್ಕೆ ಯೂ ಟರ್ನ್ ಮಾಡಲಾಗಿದೆ ಎನ್ನಲಾಗುತ್ತಿದ್ದು, ಆದರೆ ಪ್ರಯಾಣಿಕರ ಪ್ರಾಣ ಸಂಕಟಕ್ಕೆ ತಳ್ಳಿದ ಡ್ರೈವರ್​ ವಿರುದ್ಧ ಜನರು ಕಿಡಿಕಾರಿದ್ದಾರೆ. ಜೊತೆಗೆ ಬಸ್ ಹಿಂದೆ ಬರುತ್ತಿದ್ದ ಇತರೆ ವಾಹನ ಸವಾರರಲ್ಲಿಯೂ ಇದು  ಆತಂಕ ಮೂಡಿಸಿದೆ.

ಸದ್ಯ ಸಾಮಾಜಿಕ ಜಾಲಾತಣದಲ್ಲಿ ವಾಹನ ಸವಾರರು ವಿಡಿಯೋ ಹಂಚಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟ್ವಿಟ್ಟರ್​ಗೆ ವಿಡಿಯೋ ಟ್ಯಾಗ್​ ಮಾಡಲಾಗಿದೆ. ಇನ್ನೂ ನಾಳೆಯಿಂದ ಬೈಕ್ ಬ್ಯಾನ್ ಬಗ್ಗೆ ತಯಾರಿ ಪ್ರಾಧಿಕಾರ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್​ವೇ: ಆಗಸ್ಟ್ 1 ರಿಂದ ಬೈಕ್​​, ಆಟೋ ಸಂಚಾರ ನಿರ್ಬಂಧ, ಮಧ್ಯರಾತ್ರಿಯಿಂದಲೇ ಆದೇಶ ಜಾರಿ

ನರಸಿಂಹ ಉಪಾಧ್ಯಾಯ ಎಂಬುವವರು ಈ ಘಟನೆ ಕುರಿತಾಗಿ ಟ್ವೀಟ್​ ಮಾಡಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇನಲ್ಲಿ ಸಂಭವಿಸುತ್ತಿರುವ ಅನೇಕ ಅಪಘಾತಗಳಿಗೆ ಯಾರು ಜವಾಬ್ದಾರರು? ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರನಾ ಅಥವಾ ಇಂತಹ ಅರ್ಥಹೀನ ಚಾಲಕರಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ AI ಕ್ಯಾಮೆರಾ: ಮಿತಿಗಿಂತ ಜಾಸ್ತಿ ವೇಗವಾಗಿ ವಾಹನ ಓಡಿಸಿದ್ರೆ ಬೀಳುತ್ತೆ ಫೈನ್..!

ಇಂದು ಬೆಳಿಗ್ಗೆ 8 ಗಂಟೆಗೆ ಬಿಡದಿ ಬಳಿ ಕೆಎಸ್​ ಆರ್​ಟಿಸಿ ಬಸ್​ ಚಾಲಕ ಯೂ ಟರ್ನ್ ತೆಗೆದುಕೊಂಡು ರಾಂಗ್ ಸೈಡ್​ನಲ್ಲಿ ಹೋಗುತ್ತಿದ್ದಾನೆ ಎಂದು ಕಿಡಿಕಾರಿದ್ದಾರೆ. ಜೊತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೂ ಟ್ಯಾಗ್​ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:57 pm, Mon, 31 July 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ