ನಡು ರಸ್ತೆಯಲ್ಲೇ ಯೂ ಟರ್ನ್ ಹೊಡೆದ ಕೆಎಸ್​ಆರ್​ಟಿಸಿ ಬಸ್​: ಟೋಲ್​ನಿಂದ ಬಚಾವ್​ ಆಗಲು ಪ್ರಯಾಣಿಕರ ಪ್ರಾಣ ಸಂಕಟಕ್ಕೆ ದೂಡಿದ ಡ್ರೈವರ್​​

ಟೋಲ್ ಉಳಿಸುವ ಕಾರಣಕ್ಕೆ ನಡು ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್​ ಡ್ರೈವರ್​ ಯೂ ಟರ್ನ್ ಮಾಡಿ ರಾಂಗ್ ಸೈಡ್​ನಲ್ಲಿ ಹೋಗಿರುವಂತಹ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಸಮೀಪದಲ್ಲಿ ನಡೆದಿದೆ. ಸದ್ಯ ಸಾಮಾಜಿಕ ಜಾಲಾತಣದಲ್ಲಿ ವಾಹನ ಸವಾರರು ವಿಡಿಯೋ ಹಂಚಿಕೊಂಡಿದ್ದು, ಬಸ್​ ಡ್ರೈವರ್​ ವಿರುದ್ಧ ಕಿಡಿಕಾರಲಾಗಿದೆ.

ರಾಮನಗರ, ಜುಲೈ 31: ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಸಮೀಪದಲ್ಲಿ ನಡು ರಸ್ತೆಯಲ್ಲೇ ಕೆ ಎ 42 F 2233 ನಂಬರಿನ ಕೆಎಸ್​ಆರ್​ಟಿಸಿ ಬಸ್ (KSRTC bus)​​ ಯೂ ಟರ್ನ್ ಮಾಡಲಾಗಿದೆ. ಟೋಲ್ ಉಳಿಸುವ ಕಾರಣಕ್ಕೆ ಯೂ ಟರ್ನ್ ಮಾಡಲಾಗಿದೆ ಎನ್ನಲಾಗುತ್ತಿದ್ದು, ಆದರೆ ಪ್ರಯಾಣಿಕರ ಪ್ರಾಣ ಸಂಕಟಕ್ಕೆ ತಳ್ಳಿದ ಡ್ರೈವರ್​ ವಿರುದ್ಧ ಜನರು ಕಿಡಿಕಾರಿದ್ದಾರೆ. ಜೊತೆಗೆ ಬಸ್ ಹಿಂದೆ ಬರುತ್ತಿದ್ದ ಇತರೆ ವಾಹನ ಸವಾರರಲ್ಲಿಯೂ ಇದು  ಆತಂಕ ಮೂಡಿಸಿದೆ.

ಸದ್ಯ ಸಾಮಾಜಿಕ ಜಾಲಾತಣದಲ್ಲಿ ವಾಹನ ಸವಾರರು ವಿಡಿಯೋ ಹಂಚಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟ್ವಿಟ್ಟರ್​ಗೆ ವಿಡಿಯೋ ಟ್ಯಾಗ್​ ಮಾಡಲಾಗಿದೆ. ಇನ್ನೂ ನಾಳೆಯಿಂದ ಬೈಕ್ ಬ್ಯಾನ್ ಬಗ್ಗೆ ತಯಾರಿ ಪ್ರಾಧಿಕಾರ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್​ವೇ: ಆಗಸ್ಟ್ 1 ರಿಂದ ಬೈಕ್​​, ಆಟೋ ಸಂಚಾರ ನಿರ್ಬಂಧ, ಮಧ್ಯರಾತ್ರಿಯಿಂದಲೇ ಆದೇಶ ಜಾರಿ


ನರಸಿಂಹ ಉಪಾಧ್ಯಾಯ ಎಂಬುವವರು ಈ ಘಟನೆ ಕುರಿತಾಗಿ ಟ್ವೀಟ್​ ಮಾಡಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇನಲ್ಲಿ ಸಂಭವಿಸುತ್ತಿರುವ ಅನೇಕ ಅಪಘಾತಗಳಿಗೆ ಯಾರು ಜವಾಬ್ದಾರರು? ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರನಾ ಅಥವಾ ಇಂತಹ ಅರ್ಥಹೀನ ಚಾಲಕರಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ AI ಕ್ಯಾಮೆರಾ: ಮಿತಿಗಿಂತ ಜಾಸ್ತಿ ವೇಗವಾಗಿ ವಾಹನ ಓಡಿಸಿದ್ರೆ ಬೀಳುತ್ತೆ ಫೈನ್..!

ಇಂದು ಬೆಳಿಗ್ಗೆ 8 ಗಂಟೆಗೆ ಬಿಡದಿ ಬಳಿ ಕೆಎಸ್​ ಆರ್​ಟಿಸಿ ಬಸ್​ ಚಾಲಕ ಯೂ ಟರ್ನ್ ತೆಗೆದುಕೊಂಡು ರಾಂಗ್ ಸೈಡ್​ನಲ್ಲಿ ಹೋಗುತ್ತಿದ್ದಾನೆ ಎಂದು ಕಿಡಿಕಾರಿದ್ದಾರೆ. ಜೊತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೂ ಟ್ಯಾಗ್​ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:57 pm, Mon, 31 July 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us