AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಸಚಿವರ‌ ಉಸ್ತುವಾರಿ ಕ್ಷೇತ್ರದಲ್ಲೇ ಬಸ್ಸುಗಳು ಠುಸ್! ಇದೇನು ಬಸ್ಸೋ‌ ಉಗಿಬಂಡಿಯೋ ಎಂದು ಜನರ ಪ್ರಶ್ನೆ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಸ್ತುವಾರಿ ಕ್ಷೇತ್ರ ರಾಮನಗರದಲ್ಲೇ‌ ಬಸ್ಸುಗಳ ಸ್ಥಿತಿ ಅದೋಗತಿ ತಲುಪಿದೆ. ಬಸ್ಸು, ಬಸ್ ಸ್ಟ್ಯಾಂಡ್​ನಿಂದ ಹೊರಟರೆ ಸಾಕು, ಇಡೀ ದಾರಿಯುದ್ದಕ್ಕೂ ಕರಿ ಹೊಗೆ ಸೂಸುತ್ತಾ, ಸುತ್ತ ಮುತ್ತಲಿನ ಇಡೀ ಪ್ರದೇಶವನ್ನು ಮಾಲಿನ್ಯ ಮಾಡುತ್ತಾ ಹೊರಡುತ್ತದೆ. ಇದರ ಬಗ್ಗೆ ಕೂಡಲೇ ಕ್ರಮವಹಿಸಿ ಎಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 06, 2024 | 5:40 PM

Share

ರಾಮನಗರ, ಫೆ.06: ಆ ಒಂದು ಬಸ್ಸಿನ ಓಡಾಟದಿಂದಾಗಿ ಹಲವು ಗ್ರಾಮಗಳ ಜನ ರೋಸಿಹೋಗಿದ್ದಾರೆ. ಬಿಳಿ ಬಟ್ಟೆ ಧರಿಸಿ ಓಡಾಡೊದಕ್ಕೂ ಹೆದರುತ್ತಿದ್ದಾರೆ. ರಾಮನಗರ(Ramanagara)ದ ಬಸ್ಸು, ಬಸ್ ಸ್ಟ್ಯಾಂಡ್​ನಿಂದ ಹೊರಟರೆ ಸಾಕು, ಇಡೀ ದಾರಿಯುದ್ದಕ್ಕೂ ಕರಿ ಹೊಗೆ ಸೂಸುತ್ತಾ, ಸುತ್ತ ಮುತ್ತಲಿನ ಇಡೀ ಪ್ರದೇಶವನ್ನು ಮಾಲಿನ್ಯ ಮಾಡುತ್ತಾ ಹೊರಡುತ್ತದೆ. ಕೆಎಸ್​ಆರ್​ಟಿಸಿ(KSRTC) ಯ ಕೆಎ 42 ಎಫ್ 0221, ನಂಬರಿನ‌‌ ಈ ಬಸ್ಸು, ಈಗ ಗ್ರಾಮಸ್ಥರ ಹಾಗೂ ದಾರಿಯಲ್ಲಿ‌ನಡೆದುಕೊಂಡು ಹೋಗುವವರ ಪಾಲಿಗೆ ಕಂಟಕಪ್ರಾಯ ಆಗಿದೆ.

ಸಾರಿಗೆ ಸಚಿವರ‌ ಉಸ್ತುವಾರಿ ಕ್ಷೇತ್ರದಲ್ಲೇ ಬಸ್ಸುಗಳು ಠುಸ್!

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಸ್ತುವಾರಿ ಕ್ಷೇತ್ರ ರಾಮನಗರದಲ್ಲೇ‌ ಬಸ್ಸುಗಳ ಸ್ಥಿತಿ ಹೀಗಾದರೆ, ರಾಜ್ಯದ ಸ್ಥಿತಿ ಏನು ಎಂದು ಜನ ಪ್ರಶ್ನಿಸಿದ್ದಾರೆ.‌ ರಾಮನಗರ ಹಾಗೂ ಚನ್ನಪಟ್ಟಣ ಸೇರಿದಂತೆ ಕೆಲವು ಹಳ್ಳಿಗಳಿಗೆ ತೆರಳುವ ಬಹುತೇಕ ಬಸ್ಸುಗಳ ಪರಿಸ್ಥಿತಿ ಹೀಗಿದೆ.‌ ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆಯಲ್ಲಿ ಬಸ್ಸುಗಳ ಗುಣಮಟ್ಟ ಕುಂಠಿತಗೊಂಡಿದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇತ್ತ ವಿಭಾಗೀಯ ನಿಯಂತ್ರಾಧಿಕಾರಿ ಬಸ್ಸುಗಳ‌ ಪರಿಶೀಲನೆ ಸರಿಯಾಗಿ ಮಾಡುತ್ತಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.

ಇದನ್ನೂ ಓದಿ:ರಾಜ್ಯದಲ್ಲಿ 325 ನೂತನ ಬಸ್ ಖರೀದಿಗೆ ಸದ್ಯದಲ್ಲೇ ಟೆಂಡರ್; ಸಾರಿಗೆ ಸಚಿವ ರಾಮಲಿಂಗರೆಡ್ಡಿ

ರಾಮನಗರ, ಚನ್ನಪಟ್ಟಣ ಹಾಗೂ ಕನಕಪುರ ತೆರಳುವ ಬಸ್ಸುಗಳ ಸಂಖ್ಯೆ ತೀರಾ ಕಡಿಮೆ ಇದೆ. ಅದರಲ್ಲೂ ಬೇರೆ ಬೇರೆ ಹಳ್ಳಿಗಳಿಗೆ ತೆರಳಬೇಕಾದ ಪ್ರಯಾಣಿಕರಿಗೆ ಬಸ್ಸು ಸಿಗುತ್ತಿಲ್ಲ. ಈ ಕಾರಣ ವಿದ್ಯಾರ್ಥಿಗಳಿಗೆ ಸರಿಯಾಗಿ ತಮ್ಮ ಕಾಲೇಜಿಗೆ ತೆರಳಲು ಆಗುತ್ತಿಲ್ಲ‌. ಇಂಥದರ‌ ನಡುವೆ ಇರುವ ಬಸ್ಸುಗಳು ಕೂಡ ಹೊಗೆ ಕಾರುತ್ತಾ, ಡಕೋಟ ಎಕ್ಸಪ್ರೆಸ್ ಸ್ಥಿತಿಗೆ ತಲುಪಿವೆ.‌ ಇದರ ಬಗ್ಗೆ ಕೂಡಲೇ ಕ್ರಮವಹಿಸಿ ಎಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Tue, 6 February 24

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು