AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಸಚಿವರ‌ ಉಸ್ತುವಾರಿ ಕ್ಷೇತ್ರದಲ್ಲೇ ಬಸ್ಸುಗಳು ಠುಸ್! ಇದೇನು ಬಸ್ಸೋ‌ ಉಗಿಬಂಡಿಯೋ ಎಂದು ಜನರ ಪ್ರಶ್ನೆ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಸ್ತುವಾರಿ ಕ್ಷೇತ್ರ ರಾಮನಗರದಲ್ಲೇ‌ ಬಸ್ಸುಗಳ ಸ್ಥಿತಿ ಅದೋಗತಿ ತಲುಪಿದೆ. ಬಸ್ಸು, ಬಸ್ ಸ್ಟ್ಯಾಂಡ್​ನಿಂದ ಹೊರಟರೆ ಸಾಕು, ಇಡೀ ದಾರಿಯುದ್ದಕ್ಕೂ ಕರಿ ಹೊಗೆ ಸೂಸುತ್ತಾ, ಸುತ್ತ ಮುತ್ತಲಿನ ಇಡೀ ಪ್ರದೇಶವನ್ನು ಮಾಲಿನ್ಯ ಮಾಡುತ್ತಾ ಹೊರಡುತ್ತದೆ. ಇದರ ಬಗ್ಗೆ ಕೂಡಲೇ ಕ್ರಮವಹಿಸಿ ಎಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 06, 2024 | 5:40 PM

Share

ರಾಮನಗರ, ಫೆ.06: ಆ ಒಂದು ಬಸ್ಸಿನ ಓಡಾಟದಿಂದಾಗಿ ಹಲವು ಗ್ರಾಮಗಳ ಜನ ರೋಸಿಹೋಗಿದ್ದಾರೆ. ಬಿಳಿ ಬಟ್ಟೆ ಧರಿಸಿ ಓಡಾಡೊದಕ್ಕೂ ಹೆದರುತ್ತಿದ್ದಾರೆ. ರಾಮನಗರ(Ramanagara)ದ ಬಸ್ಸು, ಬಸ್ ಸ್ಟ್ಯಾಂಡ್​ನಿಂದ ಹೊರಟರೆ ಸಾಕು, ಇಡೀ ದಾರಿಯುದ್ದಕ್ಕೂ ಕರಿ ಹೊಗೆ ಸೂಸುತ್ತಾ, ಸುತ್ತ ಮುತ್ತಲಿನ ಇಡೀ ಪ್ರದೇಶವನ್ನು ಮಾಲಿನ್ಯ ಮಾಡುತ್ತಾ ಹೊರಡುತ್ತದೆ. ಕೆಎಸ್​ಆರ್​ಟಿಸಿ(KSRTC) ಯ ಕೆಎ 42 ಎಫ್ 0221, ನಂಬರಿನ‌‌ ಈ ಬಸ್ಸು, ಈಗ ಗ್ರಾಮಸ್ಥರ ಹಾಗೂ ದಾರಿಯಲ್ಲಿ‌ನಡೆದುಕೊಂಡು ಹೋಗುವವರ ಪಾಲಿಗೆ ಕಂಟಕಪ್ರಾಯ ಆಗಿದೆ.

ಸಾರಿಗೆ ಸಚಿವರ‌ ಉಸ್ತುವಾರಿ ಕ್ಷೇತ್ರದಲ್ಲೇ ಬಸ್ಸುಗಳು ಠುಸ್!

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಸ್ತುವಾರಿ ಕ್ಷೇತ್ರ ರಾಮನಗರದಲ್ಲೇ‌ ಬಸ್ಸುಗಳ ಸ್ಥಿತಿ ಹೀಗಾದರೆ, ರಾಜ್ಯದ ಸ್ಥಿತಿ ಏನು ಎಂದು ಜನ ಪ್ರಶ್ನಿಸಿದ್ದಾರೆ.‌ ರಾಮನಗರ ಹಾಗೂ ಚನ್ನಪಟ್ಟಣ ಸೇರಿದಂತೆ ಕೆಲವು ಹಳ್ಳಿಗಳಿಗೆ ತೆರಳುವ ಬಹುತೇಕ ಬಸ್ಸುಗಳ ಪರಿಸ್ಥಿತಿ ಹೀಗಿದೆ.‌ ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆಯಲ್ಲಿ ಬಸ್ಸುಗಳ ಗುಣಮಟ್ಟ ಕುಂಠಿತಗೊಂಡಿದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇತ್ತ ವಿಭಾಗೀಯ ನಿಯಂತ್ರಾಧಿಕಾರಿ ಬಸ್ಸುಗಳ‌ ಪರಿಶೀಲನೆ ಸರಿಯಾಗಿ ಮಾಡುತ್ತಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ.

ಇದನ್ನೂ ಓದಿ:ರಾಜ್ಯದಲ್ಲಿ 325 ನೂತನ ಬಸ್ ಖರೀದಿಗೆ ಸದ್ಯದಲ್ಲೇ ಟೆಂಡರ್; ಸಾರಿಗೆ ಸಚಿವ ರಾಮಲಿಂಗರೆಡ್ಡಿ

ರಾಮನಗರ, ಚನ್ನಪಟ್ಟಣ ಹಾಗೂ ಕನಕಪುರ ತೆರಳುವ ಬಸ್ಸುಗಳ ಸಂಖ್ಯೆ ತೀರಾ ಕಡಿಮೆ ಇದೆ. ಅದರಲ್ಲೂ ಬೇರೆ ಬೇರೆ ಹಳ್ಳಿಗಳಿಗೆ ತೆರಳಬೇಕಾದ ಪ್ರಯಾಣಿಕರಿಗೆ ಬಸ್ಸು ಸಿಗುತ್ತಿಲ್ಲ. ಈ ಕಾರಣ ವಿದ್ಯಾರ್ಥಿಗಳಿಗೆ ಸರಿಯಾಗಿ ತಮ್ಮ ಕಾಲೇಜಿಗೆ ತೆರಳಲು ಆಗುತ್ತಿಲ್ಲ‌. ಇಂಥದರ‌ ನಡುವೆ ಇರುವ ಬಸ್ಸುಗಳು ಕೂಡ ಹೊಗೆ ಕಾರುತ್ತಾ, ಡಕೋಟ ಎಕ್ಸಪ್ರೆಸ್ ಸ್ಥಿತಿಗೆ ತಲುಪಿವೆ.‌ ಇದರ ಬಗ್ಗೆ ಕೂಡಲೇ ಕ್ರಮವಹಿಸಿ ಎಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Tue, 6 February 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು