ಸರ್ಕಾರಿ ನೌಕರರನ್ನು ಗುಲಾಮರು ಎಂದ ಕುಮಾರಸ್ವಾಮಿ, ಕ್ಷಮೆಯಾಚಿಸಿದ ಡಿಕೆ ಶಿವಕುಮಾರ್

ಇಂದು(ಜೂ.26) ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೇವೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಜನಸ್ಪಂದನ ಕಾರ್ಯಕ್ರಮ​ ಹಮ್ಮಿಕೊಂಡಿದ್ದು, 24‌‌ ಇಲಾಖೆಗಳ‌ ಕೌಂಟರ್​​​​​​​​​​​​ ಮೂಲಕ ಜನರ ಅರ್ಜಿ ಸ್ವೀಕಾರ ಮಾಡಿ, ಅವರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿ, ‘ಕೇಂದ್ರ ಸಚಿವ ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ಭೇಟಿ ನಿಡಿದ್ದಾಗ ಸರ್ಕಾರಿ ಅಧಿಕಾರಿ ಸಭೆಯಲ್ಲಿ ಅವರಿಗೆ ಗುಲಾಮರು ಎಂದು ಕರೆದಿದ್ದರು. ಇದೀಗ ಕುಮಾರಸ್ವಾಮಿ ಪರವಾಗಿ ಸರ್ಕಾರಿ ಅಧಿಕಾರಿಗಳ ಬಳಿ ಕ್ಷಮೆಯಾಚನೆ ಮಾಡಿದ್ದಾರೆ.

ಸರ್ಕಾರಿ ನೌಕರರನ್ನು ಗುಲಾಮರು ಎಂದ ಕುಮಾರಸ್ವಾಮಿ, ಕ್ಷಮೆಯಾಚಿಸಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 26, 2024 | 3:49 PM

ರಾಮನಗರ, ಜೂ.26: ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಸರ್ಕಾರಿ ನೌಕರರನ್ನು ಗುಲಾಮರು ಎಂದಿದಕ್ಕೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕ್ಷಮೆಯಾಚಿಸಿದ್ದಾರೆ. ಹೌದು, ಮೊನ್ನೆಯಷ್ಟೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದಾಗ ಸರ್ಕಾರಿ ಅಧಿಕಾರಿ ಸಭೆಯಲ್ಲಿ ಅವರಿಗೆ ಗುಲಾಮರು ಎಂದು ಕರೆದಿದ್ದರು. ಇದೀಗ ಡಿಸಿಎಂ ಅದನ್ನು ಪಸ್ತಾಪಿಸಿ ಮಾಜಿ‌ ಶಾಸಕರ ಕಡೆಯಿಂದ ಸರ್ಕಾರಿ ಅಧಿಕಾರಿಗಳ ಬಳಿ ಕ್ಷಮೆಯಾಚನೆ ಮಾಡಿದ್ದಾರೆ.

ಇಂದು(ಜೂ.26) ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೇವೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಜನಸ್ಪಂದನ ಕಾರ್ಯಕ್ರಮ​ ಹಮ್ಮಿಕೊಂಡಿದ್ದು, 24‌‌ ಇಲಾಖೆಗಳ‌ ಕೌಂಟರ್​​​​​​​​​​​​ ಮೂಲಕ ಜನರ ಅರ್ಜಿ ಸ್ವೀಕಾರ ಮಾಡಿ, ಅವರ ಸಮಸ್ಯೆ ಆಲಿಸಿದರು. ಇದೇ ವೇಳೆ ಮಾತನಾಡಿದ ಅವರು, ‘ಸ್ಥಳೀಯ‌‌ ಅಧಿಕಾರಿಗಳನ್ನು ನಾನು ಗುಲಾಮರು ಅಂತ‌ ನಾನು ಕರೆಯಲ್ಲ,
ಸಮಾಜಕ್ಕೆ ಸೇವೆ ಮಾಡುವುದಕ್ಕೆ ಬದುಕನ್ನು ಆಯ್ಕೆ‌ ಮಾಡಿಕೊಂಡಿದ್ದೀರಿ. ಸರಕಾರದ ಕೆಲಸ ದೇವರ ಕೆಲಸ ಎಂದು ಕೆಂಗಲ್ ಹನುಮಂತಯ್ಯನವರು ಬರೆಸಿದ್ದಾರೆ ಎಂದರು.

ಇದನ್ನೂ ಓದಿ:ಕಾವೇರಿ ನದಿ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಆದೇಶ

ಇನ್ನು ಇದು ಸರಕಾರದ ಕಾರ್ಯಕ್ರಮ, ಪಕ್ಷದ ಕಾರ್ಯಕ್ರಮ ಹಾಗಾಗಿ ಜವಾಬ್ದಾರಿ ಇರುವವರನ್ನು ಮಾತ್ರ ವೇದಿಕೆ ಮೇಲೆ ಕೂರಿಸಲು ಹೇಳಿದ್ದೆ. ಅದಕ್ಕೆ ನಮ್ಮ ಪಕ್ಷದ ನಾಯಕರು ಕ್ಷಮಿಸಬೇಕು. ನಾವು ಐದು ಗ್ಯಾರೆಂಟಿಗಾಗಿಯೇ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ಕೊಟ್ಟಿದ್ದೇವೆ. ಅದಕ್ಕೆ ಐದು ಸದಸ್ಯರನ್ನೂ‌ ಮಾಡಲಾಗಿದೆ. ಬೇವೂರಿಗೆ ಬಂದಾಗ, ಬಿ ಕೆ ಪುಟ್ಟರಾಮಯ್ಯ ನೆನಪಾಗುತ್ತಾರೆ. ವಿರೋಧ ಪಕ್ಷದವರಾಗಿ ಅವರು ಕೆಲಸ ಮಾಡಿದ್ದರು ಎಂದು ನೆನಪಿಸಿಕೊಂಡರು.

ಇದೇ ವೇಳೆ ಚನ್ನಪಟ್ಟಣಕ್ಕೆ 100‌ ರಿಂದ 150 ಕೋಟಿ ಗ್ರಾಂಟ್ ತರಿಸಿ‌ ಕೆಲಸ ಮಾಡ್ತೇನೆ, ನೀರಾವರಿ ಬಗ್ಗೆನೂ ಏನೇನು ಕೆಲಸ ಮಾಡಬೇಕು‌ ಮಾಡುತ್ತೇನೆ. 540 ಕೋಟಿ ರೂ. ಡಿಕೆ ಸುರೆಶ್ ರವರ ಯೋಜನೆ ಆಗಿದೆ. ನಮ್ಮ ಇಲಾಖೆಯಿಂದಲೇ ಆ ಹಣ ಬಿಡುಗಡೆ ಮಾಡಿದ್ದೇನೆ. ನಿಮಗಿರುವ ಸೌಲಭ್ಯ ಯಾರಿಗೂ ಮಾಡಿಲ್ಲ. ಇವೆಲ್ಲ ಡಿಕೆ ಸುರೇಶ್​ ಎಮ್​ಪಿ ಹಾಗೂ ನಾನು ಪವರ್ ಮಿನಿಸ್ಟರ್ ಇದ್ದಾಗ ಮಾಡಿದ್ದು, ಯಾರ ಬೇಕಾದರೂ ಈ ಕುರಿತು ಪ್ರಶ್ನೆ ಮಾಡಬಹುದು. ನಮ್ಮ- ನಿಮ್ಮ ಸಂಬಂಧ ದೇವರ ಸಂಬಂಧ ಇದ್ದ ಹಾಗೆ. ನೀವು ಬರೀ ಆಶ್ವಾಸನೆಯಿಂದ ಇದ್ರಿ, ಈಗ ಬರೀ ಆಶ್ವಾಸನೆ ಮಾತ್ರವಲ್ಲ, ಅಲ್ಲೇ ನಿಮ್ಮ ಕಷ್ಟವನ್ನು ಕೇಳಲು ಬರುತ್ತೀನಿ ಎಂದು ಹೇಳಿದರು. ಇನ್ನು ಡಿಸಿಎಂ ಡಿ‌ಕೆ‌ ಶಿವಕುಮಾರ್ ಜೊತೆಗೆ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸಾಥ್ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಎಸ್‌ಪಿ ಕಾರ್ತಿಕ್ ರೆಡ್ಡಿ ಉಪಸ್ಥಿತಿ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us