AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ತಡರಾತ್ರಿವರೆಗೂ ವಕೀಲರ ಪ್ರತಿಭಟನೆ, ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​

ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ನಿನ್ನೆ ತಡರಾತ್ರಿ ಕೂಡ ವಕೀಲರು ರಾಮನಗರ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಸದ್ಯ ಈಗ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. 40 ವಕೀಲರ ವಿರುದ್ಧ ಎಫ್​ಐಆರ್ ದಾಖಲು ವಿಚಾರ ಸಂಬಂಧ ರಾಮನಗರದ ಐಜೂರು ಠಾಣೆ ಪಿಎಸ್​​ಐ ಸಸ್ಪೆಂಡ್​​ ಮಾಡಲಾಗಿದೆ.

ರಾಮನಗರದಲ್ಲಿ ತಡರಾತ್ರಿವರೆಗೂ ವಕೀಲರ ಪ್ರತಿಭಟನೆ, ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​
ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Feb 21, 2024 | 10:38 AM

Share

ರಾಮನಗರ, ಫೆ.21: 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ನಡೆಸುತ್ತಿರುವ ಪ್ರತಿಭಟನೆ (Ramanagar Lawyers Protest) ಇಡೀ ಜಿಲ್ಲೆಯಲ್ಲಿ ಬೆಂಕಿ ಹತ್ತಿಸಿದೆ. ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಮತ್ತೊಂದೆಡೆ ಈ ಪ್ರಕರಣದಲ್ಲಿ ಮೇಜರ್ ಬೆಳವಣಿಗೆಯಾಗಿದ್ದು ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ (Tanveer Hussain) ಅಮಾನತು ಮಾಡಲಾಗಿದೆ.

ರಾಮನಗರದ 40 ವಕೀಲರ ವಿರುದ್ಧ ಐಜೂರು ಪೊಲೀಸ್ ಠಾಣೆ ಪಿಎಸ್​ಐ ಆಗಿದ್ದ ತನ್ವೀರ್ ಹುಸೇನ್​ ಅವರು ಎಫ್​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರ (ಫೆ.19) ಪ್ರತಿಭಟನೆ ಆರಂಭಿಸಿದರು. ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡಿತ್ತು. ಧರಣಿನಿರತ ವಕೀಲರಿಗೆ ಪ್ರತಿಪಕ್ಷ ನಾಯಕ ಆರ್ ಅಶೋಕ, ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರು ಕೂಡ ಸಾಥ್ ನೀಡಿದ್ದರು. ತಡ ರಾತ್ರಿ ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಬಂದು ದರಣಿ ನಡೆಸುತ್ತಿದ್ದ ವಕೀಲರಿಗೆ ಕೈ ಜೋಡಿಸಿದ್ದರು. ಇದಾದ ಬಳಿಕ ಈ ವಿಚಾರ ದೊಡ್ಡ ಮಟ್ಟಿಗೆ ಚರ್ಚೆ ಆಗಲು ಆರಂಭವಾಯಿತು. ಈ ವಿಚಾರ ಸಂಬಂಧ ಜೆಡಿಎಸ್, ಬಿಜೆಪಿ ಸದಸ್ಯರು ಸರ್ಕಾರದ ಉತ್ತರಕ್ಕಾಗಿ ಒತ್ತಾಯಿಸಿದ್ದು ಇಂದು ವಿಧಾನಸಭೆಯಲ್ಲಿ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ವಕೀಲ ಚಾಂದ್ ಪಾಷಾ ವಿರುದ್ಧ ಕಠಿಣ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.

ಮತ್ತೊಂದೆಡೆ ಫೆ.19ರಂದು ಶುರುವಾದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು ತಡರಾತ್ರಿ ಕೂಡ ಧರಣಿ ನಡೆದಿದೆ. ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ವಕೀಲರು ತಡರಾತ್ರಿ ವರೆಗೂ ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಈಗ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಖುದ್ದು ವಕೀಲರಾದರೂ ರಾಮನಗರ ವಕೀಲರ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡದಿರುವುದು ಆಶ್ಚರ್ಯ: ಸಿಪಿ ಯೋಗೇಶ್ವರ್

ವಕೀಲರ ಆಕ್ರೋಶಕ್ಕೆ ಕಾರಣವೇನು?

ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದನ್ನು ಪ್ರಶ್ನಿಸಿ ಚಾನ್ ಪಾಷಾ ಎಂಬಾತ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ. ವಕೀಲ ಮತ್ತು ಎಸ್‌ಡಿಪಿಐ ಕಾರ್ಯಕರ್ತನೂ ಆಗಿರೋ ಚಾನ್ ಪಾಷಾ, ಫೇಸ್​ಬುಕ್​ನಲ್ಲಿ ನ್ಯಾಯಾಧೀಶರ ಆದೇಶವನ್ನೇ ಪ್ರಶ್ನಿಸಿ ಅವಾಚ್ಯ ಪದ ಬಳಸಿ ಪೋಸ್ಟ್ ಹಾಕಿದ್ದ. ಚಾನ್‌ ಪಾಷಾ ವಿರುದ್ಧ ದೂರು ದಾಖಲಾಗ್ತಿದ್ದಂತೆ ಫೇಸ್​ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದ. ಪೊಲೀಸರು ಚಾನ್ ಪಾಷಾನನ್ನು ಬಂಧಿಸಿದ್ರು.

ವಕೀಲ ಚಾನ್ ಪಾಷಾ ಮಾಡಿರೋ ಅವಹೇಳನಕಾರಿ ಪೋಸ್ಟ್ ವಿಚಾರ ಇಷ್ಟಕ್ಕೆ ಮುಗಿದಿಲ್ಲ. ಚಾನ್ ಪಾಷಾ ವಿರುದ್ಧ ವಕೀಲರ ಗುಂಪೊಂದು ರಾಮನಗರ ಜಿಲ್ಲಾ ವಕೀಲರ ಸಂಘಕ್ಕೆ ದೂರು ಕೊಟ್ಟಿತ್ತು. ನನ್ನ ವಿರುದ್ಧ ಕೊಟ್ಟಿರೋ ಸುಳ್ಳು ದೂರು ಅಂತಾ ಮನವರಿಕೆ ಮಾಡಲು ಚಾನ್ ಪಾಷಾ ತನ್ನ ಆಪ್ತರ ಜೊತೆಗೆ ವಕೀಲರ ಸಂಘದ ಕಚೇರಿಗೆ ತೆರಳಿದ್ದ ವೇಳೆ ಜಟಾಪಟಿ ನಡೆದಿದೆ. ಈ ವೇಳೆ ತನ್ನ ಹಾಗೂ ತನ್ನ ಜೊತೆ ಬಂದಿದ್ದವರ ಮೇಲೆ ಹಲ್ಲೆ ಮಾಡಿ, ಧಾರ್ಮಿಕವಾಗಿ ನಿಂದಿಸಿದ್ದಾರೆ ಅಂತಾ 40 ವಕೀಲರ ವಿರುದ್ಧ ರಾಮನಗರ ಠಾಣೆಗೆ ದೂರು ನೀಡಿದ್ರು. ಇದರಂತೆ ಬರೋಬ್ಬರಿ 40 ವಕೀಲರ ವಿರುದ್ಧ ರಾಮನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ವಕೀಲರ ಮೇಲೆ ಎಫ್​ಐಆರ್ ದಾಖಲಿಸಿರೋ ಪಿಎಸ್​ಐ ತನ್ವೀರ್ ಹುಸೇನ್ ಅಮಾನತು ಮಾಡುವಂತೆ ಪಟ್ಟು ಹಿಡಿದ ವಕೀಲರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸ್ತಿದ್ದರು.

ರಾಮನಗರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:00 am, Wed, 21 February 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ