AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ ಯಾರನ್ನು ಬಿಡಲ್ಲ: ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಆರ್​ಟಿಓ!

ತಪ್ಪು ಮಾಡಿದವರನ್ನು ಕಾಲ ಯಾರನ್ನು ಬಿಡುವುದಿಲ್ಲ ಅಂತಾರೆ ಅಲ್ವಾ ಅದರಂತೆ ಇನ್ನೇನು ಇಂದು ಕೊನೆ ದಿನ ಕೆಲಸ ಮುಗಿಸಿ ನಿವೃತ್ತಿ ಜೀವನ ಕಳೆಯಬೇಕಿದ್ದ ರಾಮನಗರ ಆರ್​ಟಿಓ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತಿ ದಿನವಾದ ಇಂದೇ ಆರ್​ಟಿಓ ಶಿವಕುಮಾರ್​ನನ್ನು ಲೋಕಾಯುಕ್ತ ಬಂಧಿಸಿದೆ.

ಕಾಲ ಯಾರನ್ನು ಬಿಡಲ್ಲ: ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಆರ್​ಟಿಓ!
ರಾಮನಗರ ಆರ್ ಟಿಓ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jun 28, 2024 | 5:49 PM

Share

ರಾಮನಗರ, (ಜೂನ್ 28): ರಾಮನಗರ ಆರ್ ಟಿಓ ಆಗಿರುವ ಶಿವಕುಮಾರ್ ಅವರದ್ದು ಇಂದು (ಜೂನ್ 28) ಕೆಲಸದ ಕೊನೆ ದಿನ. ಅವರು ಇಂದು ನಿವೃತ್ತಿಯಾಗುವವರು ಇದ್ದರು. ಆದ್ರೆ, ಕೊನೆಯ ದಿನವೇ ಆರ್ ಟಿಓ ಶಿವಕುಮಾರ್ ಅವರಿಗೆ ಲೋಕಾಯುಕ್ತ ಬಿಗ್ ಶಾಕ್ ಕೊಟ್ಟಿದೆ. ಹೌದು…ರಾಮನಗರ ಆರ್ ಟಿಓ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎನ್ನುವ ದೂರುಗಳ ಮೇರೆಗೆ ಇಂದು (ಜೂನ್ 28) ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇನ್ನೇನು ಕೊನೆ ದಿನ ಕೆಲಸ ಮುಗಿಸಿ ಮನೆಗೆ ಹೊರಡಬೇಕೆಂದಿದ್ದ ಶಿವಕುಮಾರ್​ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು, ರಾಮನಗರ RTO ಅಧಿಕಾರಿ ಶಿವಕುಮಾರ್, ಎಸ್​ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ಅವರನ್ನು ಬಂಧಿಸಿದ್ದಾರೆ. ಅಲ್ಲದೇ ಇದೀಗ ರಾಮನಗರ ಆರ್​ಟಿಓ ಕಚೇರಿ, ಎಸ್​ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಸೀಜ್ ಮಾಡಿರುವ ವಾಹನಗಳ ದಾಖಲೆಯನ್ನು ನೀಡಿ ಮಾರಾಟ, ಹಳೇ ಟ್ರ್ಯಾಕ್ಟರ್​​ಗಳಿಗೆ ಹೊಸ ದಾಖಲೆ ಸೃಷ್ಟಿ ಮಾಡಿದ್ದಾರೆ. ಒಟ್ಟು 2 ಸಾವಿರ ಟ್ರ್ಯಾಕ್ಟರ್​ಗಳಿಗೆ ಹೊಸ ದಾಖಲೆ ನೀಡಿರುವುದು ಬೆಳಕಿಗೆ ಬಂದಿದೆ. ತಪ್ಪು ಮಾಡಿದವರನ್ನು ಕಾಲ ಯಾರನ್ನು ಬಿಡುವುದಿಲ್ಲ ಅಂತಾರೆ ಅಲ್ವಾ ಅದರಂತೆ ಇನ್ನೇನು ಇಂದು ಕೊನೆ ದಿನ ಕೆಲಸ ಮುಗಿಸಿ ನಿವೃತ್ತಿ ಜೀವನ ಕಳೆಯಬೇಕಿದ್ದ ಆರ್​ಟಿಓ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ