AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ ಯಾರನ್ನು ಬಿಡಲ್ಲ: ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಆರ್​ಟಿಓ!

ತಪ್ಪು ಮಾಡಿದವರನ್ನು ಕಾಲ ಯಾರನ್ನು ಬಿಡುವುದಿಲ್ಲ ಅಂತಾರೆ ಅಲ್ವಾ ಅದರಂತೆ ಇನ್ನೇನು ಇಂದು ಕೊನೆ ದಿನ ಕೆಲಸ ಮುಗಿಸಿ ನಿವೃತ್ತಿ ಜೀವನ ಕಳೆಯಬೇಕಿದ್ದ ರಾಮನಗರ ಆರ್​ಟಿಓ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತಿ ದಿನವಾದ ಇಂದೇ ಆರ್​ಟಿಓ ಶಿವಕುಮಾರ್​ನನ್ನು ಲೋಕಾಯುಕ್ತ ಬಂಧಿಸಿದೆ.

ಕಾಲ ಯಾರನ್ನು ಬಿಡಲ್ಲ: ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಆರ್​ಟಿಓ!
ರಾಮನಗರ ಆರ್ ಟಿಓ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jun 28, 2024 | 5:49 PM

Share

ರಾಮನಗರ, (ಜೂನ್ 28): ರಾಮನಗರ ಆರ್ ಟಿಓ ಆಗಿರುವ ಶಿವಕುಮಾರ್ ಅವರದ್ದು ಇಂದು (ಜೂನ್ 28) ಕೆಲಸದ ಕೊನೆ ದಿನ. ಅವರು ಇಂದು ನಿವೃತ್ತಿಯಾಗುವವರು ಇದ್ದರು. ಆದ್ರೆ, ಕೊನೆಯ ದಿನವೇ ಆರ್ ಟಿಓ ಶಿವಕುಮಾರ್ ಅವರಿಗೆ ಲೋಕಾಯುಕ್ತ ಬಿಗ್ ಶಾಕ್ ಕೊಟ್ಟಿದೆ. ಹೌದು…ರಾಮನಗರ ಆರ್ ಟಿಓ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎನ್ನುವ ದೂರುಗಳ ಮೇರೆಗೆ ಇಂದು (ಜೂನ್ 28) ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇನ್ನೇನು ಕೊನೆ ದಿನ ಕೆಲಸ ಮುಗಿಸಿ ಮನೆಗೆ ಹೊರಡಬೇಕೆಂದಿದ್ದ ಶಿವಕುಮಾರ್​ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು, ರಾಮನಗರ RTO ಅಧಿಕಾರಿ ಶಿವಕುಮಾರ್, ಎಸ್​ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ಅವರನ್ನು ಬಂಧಿಸಿದ್ದಾರೆ. ಅಲ್ಲದೇ ಇದೀಗ ರಾಮನಗರ ಆರ್​ಟಿಓ ಕಚೇರಿ, ಎಸ್​ಡಿಎ ರಚಿತ್ ರಾಜ್ ಮತ್ತು ಬ್ರೋಕರ್ ಸತೀಶ್ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಸೀಜ್ ಮಾಡಿರುವ ವಾಹನಗಳ ದಾಖಲೆಯನ್ನು ನೀಡಿ ಮಾರಾಟ, ಹಳೇ ಟ್ರ್ಯಾಕ್ಟರ್​​ಗಳಿಗೆ ಹೊಸ ದಾಖಲೆ ಸೃಷ್ಟಿ ಮಾಡಿದ್ದಾರೆ. ಒಟ್ಟು 2 ಸಾವಿರ ಟ್ರ್ಯಾಕ್ಟರ್​ಗಳಿಗೆ ಹೊಸ ದಾಖಲೆ ನೀಡಿರುವುದು ಬೆಳಕಿಗೆ ಬಂದಿದೆ. ತಪ್ಪು ಮಾಡಿದವರನ್ನು ಕಾಲ ಯಾರನ್ನು ಬಿಡುವುದಿಲ್ಲ ಅಂತಾರೆ ಅಲ್ವಾ ಅದರಂತೆ ಇನ್ನೇನು ಇಂದು ಕೊನೆ ದಿನ ಕೆಲಸ ಮುಗಿಸಿ ನಿವೃತ್ತಿ ಜೀವನ ಕಳೆಯಬೇಕಿದ್ದ ಆರ್​ಟಿಓ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ