ಟೀ ಕುಡಿಸಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್

ಟೀ ಕುಡಿಸಿಕೊಂಡು ಬರ್ತೇನೆ ಅಂತ ಅಪ್ರಾಪ್ತೆಯನ್ನು ಹಾಸ್ಟೆಲ್​ನಿಂದ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಘಟನೆ ಸಂಬಂಧ ರಾಮನಗರ ಮಹಿಳಾ‌ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ‌ ಪ್ರಕರಣ ದಾಖಲಿಸಲಾಗಿದ್ದು 36 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.

ಟೀ ಕುಡಿಸಲು ಎಂದು ಕರೆದೊಯ್ದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್
ರಾಮನಗರ ಮಹಿಳಾ‌ ಪೊಲೀಸ್ ಠಾಣೆ
Edited By: ಆಯೇಷಾ ಬಾನು

Updated on: Mar 18, 2024 | 1:45 PM

ರಾಮನಗರ, ಮಾರ್ಚ್​.18: ಹಾಸ್ಟಲ್‌ನಿಂದ ಕರೆದೊಯ್ದು 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಲಾಗಿರುವ ಘಟನೆ ನಡೆದಿದೆ. ಅಣ್ಣ ಎಂದು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು ಬರ್ತೇನೆ ಅಂತ ಅಪ್ರಾಪ್ತೆಯನ್ನು ಹಾಸ್ಟೆಲ್​ನಿಂದ ಕರೆದುಕೊಂಡು ಹೋಗಿ ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಇನ್ನು ಅಪರಿಚಿತ ವ್ಯಕ್ತಿ ಬಾಲಕಿಯನ್ನು ಕರೆದುಕೊಂಡು ಹೋಗಿ ಎರಡು ತಾಸು ಕಳೆದರೂ ಬಾರದ ಹಿನ್ನೆಲೆ‌ ಹಾಸ್ಟಲ್ ಸಿಬ್ಬಂದಿ ಕುಟುಂಬಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಲ್ಲದೆ ವ್ಯಕ್ತಿಯ ಹಾವಾಭಾವ ಕಂಡು ಸಿಬ್ಬಂದಿಗೆ ಅನುಮಾನ ಬಂದಿತ್ತು. ಸದ್ಯ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಆರೋಪಿ ಅಪ್ರಾಪ್ತಳನ್ನು ಮಾವಿನ‌ ತೋಪಿಗೆ ಕರೆದೊಯ್ದಿದ್ದ. ಕೃತ್ಯ ಸ್ಥಳಕ್ಕೆ ತೆರಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಾಲಕಿಯನ್ನು ಒಂದು ವರ್ಷದಿಂದ ಲೈಂಗಿಕ‌ವಾಗಿ ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ರಾಮನಗರ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ರಾಮನಗರ ಮಹಿಳಾ‌ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ‌ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Doctors Negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಸಾವು, ಕುಟುಂಬಸ್ಥರ ಆಕ್ರೋಶ

ಆ್ಯಪ್ ಆಧಾರಿತ ಬೈಕ್ ಚಾಲಕರನ್ನ ತಡೆದು ಕಿರುಕುಳ ಆರೋಪ

ಆ್ಯಪ್ ಆಧಾರಿತ ಬೈಕ್ ಚಾಲಕರನ್ನ ತಡೆದು ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆಟೋ ಚಾಲಕನ ವಿರುದ್ಧ ಆ್ಯಪ್ ಆಧಾರಿತ ಬೈಕ್ ಚಾಲಕರು ಆರೋಪ ಮಾಡಿದ್ದಾರೆ. ಆ್ಯಪ್​​ ಆಧಾರಿತ ಬೈಕ್, ಆಟೋ ಚಾಲಕನ ನಡುವೆ ಗಲಾಟೆ ನಡೆದಿದ್ದು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆಂದು ಬೈಕ್ ಸವಾರ ಆರೋಪ ಮಾಡಿದ್ದಾನೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆ್ಯಪ್ ಆಧಾರಿತ ಬೈಕ್ ಚಾಲಕರು, ಆಟೋ ಚಾಲಕನನ್ನ ಪ್ರಶ್ನಿಸುತ್ತಿದ್ದಾಗ ಪ್ಯಾಂಟ್ ಬಿಚ್ಚಿಸಿ ಹೈಡ್ರಾಮಾ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಬೈಕ್ ಚಾಲಕರು ದೂರು ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us