ಕೌಟುಂಬಿಕ ಕಲಹ, ಮಕ್ಕಳಿಗೆ ವಿಷ ಉಣಿಸಿದ ತಂದೆ: ಜೀವನ್ಮರಣ ಹೋರಾಟ ನಡೆಸುತ್ತಿರುವ ಪುಟ್ಟ ಕಂದಮ್ಮಗಳು

ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೋರ್ವ ತನ್ನೆರಡೂ ಪುಟ್ಟ ಕಂದಮ್ಮಗಳಿಗೆ ಉಷ ಉಣಿಸಿರುವ ಘಟನೆ ರಾಮನಗರದ ಜಿಲ್ಲೆಯಲ್ಲಿ ನಡೆದಿದೆ. ತಂದೆ ಕೊಟ್ಟ ವಿಷಭರಿತ ಜಾಮೂನು ಸೇವಿಸಿದ ಪುಟ್ಟ ಜೀವಗಳು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸೋಣ.

ಕೌಟುಂಬಿಕ ಕಲಹ, ಮಕ್ಕಳಿಗೆ ವಿಷ ಉಣಿಸಿದ ತಂದೆ: ಜೀವನ್ಮರಣ ಹೋರಾಟ ನಡೆಸುತ್ತಿರುವ ಪುಟ್ಟ ಕಂದಮ್ಮಗಳು
ಸಾಂದರ್ಭಿಕ ಚಿತ್ರ
Edited By:

Updated on: Aug 11, 2023 | 2:13 PM

ರಾಮನಗರ, (ಆಗಸ್ಟ್ 11): ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮನನೊಂದು ತಾಯಿಯೊಬ್ಬಳು(Mother)  ಹೆತ್ತ ಮಕ್ಕಳನ್ನೇ ಬಾವಿಗೆ ನೂಕಿ ಬಳಿಕ ತಾನೂ ಬಾವಿಗೆ ಹಾರಿ ಸಾವನ್ನಪ್ಪಿರುವ ದುರ್ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಇದೀಗ ರಾಮನಗರದಲ್ಲಿ(Ramanagara) ವ್ಯಕ್ತಿಯೋರ್ವ ತನ್ನ ಹೆಂಡತಿ(Wife) ಮೇಲಿನ ಸಿಟ್ಟಿಗೆ ಮಕ್ಕಳಿಗೆ ವಿಷ(poison) ಉಣಿಸಿರುವ ಘಟನೆ ನಡೆದಿದೆ. ನಾಗಿರೋ‌ಕುಮಾರ್ (35) ಎನ್ನುವಾತ ಜಾಮೂನಿನಲ್ಲಿ‌ ವಿಷಬೆರಸಿ ಮಕ್ಕಳಿಗೆ ತಿನ್ನಿಸಿದ್ದಾನೆ. ಬಳಿಕ ತಾನೂ ಸಹ ವಿಷ ಕುಡಿದಿದ್ದಾನೆ. ಏನು ತಿಳಿದು ವಂದನಾ (4) ತನುಶ್ರೀ (3) ಎನ್ನುವ ಪುಟ್ಟ ಜೀವಗಳು ತಂದೆ ಉಣಿಸಿದ ವಿಷ ಸೇವಿಸಿ ಅಸ್ವಸ್ಥಗೊಂಡಿವೆ. ಇದೀಗ ಕಂದಮ್ಮಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದಬಂದಿದೆ.

ಇದನ್ನೂ ಓದಿ: ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಪತ್ನಿ ಬಿಟ್ಟು ಹೋಗಿದ್ದಳು. ಹೀಗಾಗಿ ತಾಯಿ ಇಲ್ಲದೆ ಮಕ್ಕಳು ತಂದೆಯ ಬಳಿ ಇದ್ದವು. ಇದರಿಂದ ಮನನೊಂದ ಕುಮಾರ್, ಜಾಮೂನ್‌‌ನಲ್ಲಿ ಮಕ್ಕಳಿಗೆ ವಿಷ ಕುಡಿಸಿ ತಾನೂ ಸೇವಿಸಿದ್ದಾನೆ. ಈ ಬಗ್ಗೆ ಚನ್ನಪಟ್ಟಣ ತಾಲೂಕಿನ ಎಂ.ಕೆ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿರುವ ಕಂದಮ್ಮಗಳು ಬೇಗ ಗುಣಮುಖರಾಗಲಿದೆ ಎಂದು ಪ್ರಾರ್ಥಿಸೋಣ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us