AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ರಾಮನಗರ ತಾಲೂಕಿನ ಬಿಡದಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮನೆ ಮುಂದೆ ಕೆಮ್ಮಿದ ವಿಚಾರಕ್ಕೆ ಪಕ್ಕದ ಮನೆಯವರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದರು. ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
ಪ್ರಶಾಂತ್​ ಬಿ.
| Edited By: |

Updated on:Feb 11, 2026 | 12:47 PM

Share

ರಾಮನಗರ, ಫೆಬ್ರವರಿ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ವ್ಯಕ್ತಿಯೊಬ್ಬ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (Ramnagar) ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ.

ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು

ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಕಳೆದ 11 ವರ್ಷಗಳಿಂದ ಬಿಡದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಮನೆ ಪಕ್ಕದಲ್ಲಿದ್ದ ಸಂಜಯ್ ಅವರೊಂದಿಗೆ ಮಾತಿನ ಚಕಮಕಿ ಉಂಟಾಗಿದ್ದು, ಕೆಮ್ಮಿದ ವಿಚಾರಕ್ಕೆ ಜಗಳ ತೀವ್ರಗೊಂಡಿದೆ ಎನ್ನಲಾಗಿದೆ. ಈ ವೇಳೆ ಸಂಜಯ್, ಹೊಂಬಯ್ಯ (ಹೊಂಬೆಗೌಡ), ವಿಜಯ್ ಸೇರಿದಂತೆ ಇತರರು ಸೇರಿ ವಿನೋದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ತಕ್ಷಣ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:21 pm, Wed, 11 February 26

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ