AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ ಕನ್ಫರ್ಮ್ ಆಗಿದೆ: ಶಾಸಕ ಜಿಟಿ ದೇವೇಗೌಡ

ರಾಮನಗರ ತಾಲೂಕಿನ ಕೇತಗಾನಹಳ್ಳಿ ಬಳಿಯಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಫಾರ್ಮ್​ಹೌಸ್​ನಲ್ಲಿ ಸ್ಥಳೀಯ ನಾಯಕರ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ ಕನ್ಫರ್ಮ್ ಆಗಿದೆ ಎಂದಿದ್ದಾರೆ. ಸುಮಲತಾರವರು ಅಧಿಕೃತ ಬಿಜೆಪಿ ಮೆಂಬರ್​ ಅಲ್ಲ. ಆದರೂ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ ಕನ್ಫರ್ಮ್ ಆಗಿದೆ: ಶಾಸಕ ಜಿಟಿ ದೇವೇಗೌಡ
ಶಾಸಕ ಜಿ.ಟಿ.ದೇವೇಗೌಡ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Feb 25, 2024 | 8:31 PM

Share

ರಾಮನಗರ, ಫೆಬ್ರವರಿ 25: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ ಕನ್ಫರ್ಮ್ ಆಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ (GT Devegowda) ಹೇಳಿದ್ದಾರೆ. ರಾಮನಗರ ತಾಲೂಕಿನ ಕೇತಗಾನಹಳ್ಳಿ ಬಳಿಯಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಫಾರ್ಮ್​ಹೌಸ್​ನಲ್ಲಿ ಸ್ಥಳೀಯ ನಾಯಕರ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಸ್ಥಳೀಯ ನಾಯಕರ ಸಭೆ ನಡೆಸಿ ಚುನಾವಣೆ ಸಿದ್ಧತೆ ಮಾಡುತ್ತಿದ್ದೇವೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭ್ಯರ್ಥಿ ಯಾರೆಂದು ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಿದ್ದಾರೆ.

ಸುಮಲತಾರವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ

ಟಿಕೆಟ್​ಗಾಗಿ ಸಂಸದೆ ಸುಮಲತಾ ಸಭೆ ವಿಚಾರವಾಗಿ ಮಾತನಾಡಿದ ಅವರು, ಸುಮಲತಾರವರು ಅಧಿಕೃತ ಬಿಜೆಪಿ ಮೆಂಬರ್​ ಅಲ್ಲ. ಆದರೂ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಮಂಡ್ಯ ಕೇಳಿದರೆ ಬೆಂಗಳೂರು ನಾರ್ತ್ ಕೊಡಬಹುದು ಎಂಬ ಲೆಕ್ಕಾಚಾರ ಇರಬಹುದು. ನನಗೆ ಕೆಲವರು ಈ ಬಗ್ಗೆ ಹೇಳುತ್ತಿದ್ದಾರೆ ಎಂದರು.

5.5 ಲಕ್ಷ ಮತಗಳು ಜೆಡಿಎಸ್ ಪರ ಇವೆ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್​ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಅಭ್ಯರ್ಥಿ ಆಯ್ಕೆ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಮಂಡ್ಯ ಜಿಲ್ಲೆಯಲ್ಲಿ 5.5 ಲಕ್ಷ ಮತಗಳು ಜೆಡಿಎಸ್ ಪರ ಇವೆ. ಹಾಗಾಗಿ ಮಂಡ್ಯ ಉಳಿಸಿಕೊಳ್ಳಬೇಕೆಂಬುದು ಮುಖಂಡರ ಒತ್ತಾಯ. ನಮ್ಮ ಅಭಿಪ್ರಾಯವನ್ನು ಬಿಜೆಪಿ ವರಿಷ್ಠರಿಗೆ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಬಲಿಗರ ಸಭೆ ಅಂತ್ಯ: ಮಂಡ್ಯದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದಿಷ್ಟು

ಬಿಜೆಪಿ ವರಿಷ್ಠರು ಯಾವ ಸೂಚನೆ ನೀಡಿದರೂ ಗೌರವ ಕೊಡುತ್ತೇವೆ. ಬೆಂಗಳೂರಿನಲ್ಲಿ ಬೆಂಬಲಿಗರ ಜೊತೆ ಸುಮಲತಾ ಸಭೆ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ನಮ್ಮ ಕೈಯಲ್ಲಿ ಏನೂ ಇಲ್ಲ. ಆರೋಗ್ಯಕರವಾದ ಬೆಳವಣಿಗೆಗಳು ಆಗುತ್ತಿವೆ. ಹಾಗಾಗಿ ಗೊಂದಲಕ್ಕೆ ಎಡೆ ಮಾಡಿಕೊಡಬಾರದು ಎಂದಿದ್ದಾರೆ.

ನಾನು ಮಂಡ್ಯ ಟಿಕೆಟ್ ಆಕಾಂಕ್ಷಿ ಅಲ್ಲ: ಪುಟ್ಟರಾಜು 

ಮಂಡ್ಯ ಕ್ಷೇತ್ರದ ಬೆಂಬಲಿಗರ ಜತೆ ಸಂಸದೆ ಸುಮಲತಾ ಸಭೆ ವಿಚಾರವಾಗಿ ಮಾಜಿ ಶಾಸಕ ಪುಟ್ಟರಾಜು ಹೇಳಿಕೆ ನೀಡಿದ್ದು, ಸಭೆ ಮಾಡಲಿ ಪಾಪ, ಅದು ಅವರ ಅಭಿಪ್ರಾಯ. ಸಭೆ ಮಾಡುವುದನ್ನು ತಪ್ಪು ಅಂತಾ ಹೇಳುವುದಕ್ಕೆ ಆಗುವುದಿಲ್ಲ. ಅಂತಿಮವಾಗಿ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ತಲೆಬಾಗುತ್ತೇವೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಮೊದಲೇ ಆತಂಕದಲ್ಲಿರುವ ಕಾಂಗ್ರೆಸ್​​ಗೆ ಮತ್ತೊಂದು ಆಘಾತ!

ನಾನು ಮಂಡ್ಯ ಟಿಕೆಟ್ ಆಕಾಂಕ್ಷಿ ಅಲ್ಲ, ಪಕ್ಷದ ತೀರ್ಮಾನಕ್ಕೆ ಬದ್ಧ. ನಾವು ಮಂಡ್ಯಕ್ಕೆ ನಿಖಿಲ್​ ಕರೆತರುವ ಎಲ್ಲಾ ಪ್ರಯತ್ನ ಮಾಡುತ್ತೇವೆ. ಇಂದಿನ ಸಭೆಯಲ್ಲಿ ನಿಖಿಲ್​ ಮನವೊಲಿಸಲು ಪ್ರಯತ್ನ ಮಾಡುತ್ತೇವೆ. ಮತಗಳ ಆಧಾರದ ಮೇಲೆ ಮಂಡ್ಯ ಮತ್ತು ಹಾಸನ ಜೆಡಿಎಸ್ ಸಿಗಲಿದೆ ಎಂದು ತಿಳಿಸಿದರು.

ಮುಂದಿನ ಲೋಕಸಭೆ ಚುನಾವಣೆ ಸಂಬಂಧ ಸಭೆ ಮಾಡುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಚುನಾವಣೆ ಬಗ್ಗೆ ಸಭೆ ಇದಾಗಿದೆ. ನೂರಕ್ಕೆ ಸಾವಿರ ಭಾಗ ಹಾಸನ ಮತ್ತು ಮಂಡ್ಯ ಮೊದಲ ಹಂತದಲ್ಲೇ ಇತ್ಯರ್ಥವಾಗಲಿದೆ. ನಮ್ಮಲ್ಲಿಯೂ ಪ್ರಭಲ ಆಕಾಂಕ್ಷಿಗಳಿದ್ದಾರೆ ಹಾಗಾಗಿ ಸಭೆ ಕರೆದಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್