AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಂತೆ ರಾಮನಗರದ ರಾಮದೇವರ ಬೆಟ್ಟ ಕೂಡ ಅಭಿವೃದ್ಧಿ ಮಾಡಿ: ಸಿಎಂ ಬೊಮ್ಮಾಯಿಗೆ ಅಶ್ವತ್ಥ್​ ನಾರಾಯಣ ಪತ್ರ

ಅಯೋಧ್ಯೆ ಮಾದರಿಯಲ್ಲೇ ರಾಮದೇವರ ಬೆಟ್ಟ ಕೂಡ ಅಭಿವೃದ್ಧಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್​ ನಾರಾಯಣ ಪತ್ರ ಬರೆದಿದ್ದಾರೆ.

ಅಯೋಧ್ಯೆಯಂತೆ ರಾಮನಗರದ ರಾಮದೇವರ ಬೆಟ್ಟ ಕೂಡ ಅಭಿವೃದ್ಧಿ ಮಾಡಿ: ಸಿಎಂ ಬೊಮ್ಮಾಯಿಗೆ ಅಶ್ವತ್ಥ್​ ನಾರಾಯಣ ಪತ್ರ
ಅಶ್ವಥ್​ ನಾರಾಯಣ
TV9 Web
| Edited By: |

Updated on:Dec 21, 2022 | 7:10 PM

Share

ರಾಮನಗರ: ಅಯೋಧ್ಯೆ (Ayodhya) ಮಾದರಿಯಲ್ಲೇ ರಾಮದೇವರ ಬೆಟ್ಟ ಕೂಡ ಅಭಿವೃದ್ಧಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್​ ನಾರಾಯಣ (Ashwath Narayan) ಪತ್ರ ಬರೆದಿದ್ದಾರೆ.ರಾಮದೇವರ ಬೆಟ್ಟ ಮುಜರಾಯಿ ಇಲಾಖೆ ಅಧೀನದಲ್ಲಿದೆ. ಹೀಗಾಗಿ 19 ಎಕರೆ ಪ್ರದೇಶದಲ್ಲಿ ಅಯೋಧ್ಯೆಯ ರಾಮ ಮಂದಿರದಂತೆಯೇ, ರಾಮದೇವರ ಬೆಟ್ಟದಲ್ಲಿ ದೇವಸ್ಥಾನ ನಿರ್ಮಿಸಲು ತ್ವರಿತವಾಗಿ ಅಭಿವೃದ್ಧಿ ಸಮಿತಿ ರಚಿಸಬೇಕು ಎಂದು ಸಿಎಂ ಬೊಮ್ಮಾಯಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ರಾಮದೇವರ ಬೆಟ್ಟದಲ್ಲಿ ಕಾಕಾಸುರ ವಿಗ್ರಹ ಇರೋದು ಏಕೆ?

ರಾಮನಗರ ಜಿಲ್ಲೆಯಲ್ಲಿರುವ ರಾಮದೇವರ ಬೆಟ್ಟದಲ್ಲಿ ಶ್ರೀರಾಮನ ದೇವಸ್ಥಾನವಿದೆ. ವನವಾಸದ ಸಮಯದಲ್ಲಿ ರಾಮ, ಸೀತೆ ಜೊತೆ ಈ ಬೆಟ್ಟಕ್ಕೆ ಬಂದು, 14 ದಿನಗಳ ಕಾಲ ತಂಗಿದ್ದರಂತೆ. ಈ ವೇಳೆ ಕಾಕಾಸುರ ಎಂಬ ರಾಕ್ಷಸ, ಸೀತೆಯನ್ನ ಕೆಣಿಕಿದ್ದನಂತೆ. ಹೀಗಾಗಿ ಶ್ರೀರಾಮ ಕಾಕಾಸುರನ ಒಂದು ಕಣ್ಣಿಗೆ ಬಾಣ ಬಿಟ್ಟು, ಕಣ್ಣು ಕಿತ್ತು ಹಾಕಿದ್ದ ಎಂಬ ಪ್ರತೀತಿ ಇದೆ.

ಹೀಗಾಗಿಯೇ ಬೆಟ್ಟದಲ್ಲಿರೋ ರಾಮನ ದೇವಸ್ಥಾನದ ಮುಂಭಾಗ ಕಾಕಾಸುರ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ . ವಿಶೇಷ ಅಂದ್ರೆ ಕಾಕಾಸುರನ ಸಂಹಾರ ಆದ ನಂತರ ಈ ರಾಮದೇವರ ಬೆಟ್ಟದ ಮೇಲೆ ಕಾಗೆಗಳ ಹಾರಾಟ ಮಾಡುವುದಿಲ್ಲವಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:01 pm, Wed, 21 December 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್