AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಚುನಾವಣಾಧಿಕಾರಿ ಕಾರು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ದೋಚಿದ ದುಷ್ಕರ್ಮಿಗಳು

ದುಷ್ಕರ್ಮಿಗಳು ಚುನಾವಣಾಧಿಕಾರಿ ಕಾರನ್ನು ಅಡ್ಡಿಗಟ್ಟಿ ಬ್ಯಾಲೆಟ್ ಪೇಪರ್ ಹಾಗೂ ಲ್ಯಾಪ್‌ಟಾಪ್ ದೋಚಿಕೊಂಡು ಪರಾರಿಯಾಗಿದ್ದಾರೆ. ರಾಮನಗರ ಜಿಲ್ಲೆಯ ಗ್ರಾಮವೊಂದಕ್ಕೆ ಹಾಲು ಉತ್ಪಾದಕ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಮನಗರ: ಚುನಾವಣಾಧಿಕಾರಿ ಕಾರು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ದೋಚಿದ ದುಷ್ಕರ್ಮಿಗಳು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Sep 27, 2023 | 1:15 PM

Share

ರಾಮನಗರ, (ಸೆಪ್ಟೆಂಬರ್ 27): ಚುನಾವಣಾಧಿಕಾರಿ (Election Officer) ಕಾರು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ದೋಚಿ ಪರಾರಿಯಾಗಿರುವ ಘಟನೆ ರಾಮನಗರ(Ramanagara) ಜಿಲ್ಲೆಯ ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ. ಹುಳ್ಳೇನಹಳ್ಳಿ ಹಾಲು ಉತ್ಪಾದಕ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಉಮೇಶ್ ಅವರು ಇಂದು (ಸೆ.27) ಗ್ರಾಮಕ್ಕೆ ತೆರಳುವಾಗ ರಸ್ತೆ ಮಧ್ಯೆ ನಾಲ್ಕು ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ ದರೋಡೆ ಮಾಡಿದ್ದಾರೆ. ಚುನಾವಣಾಧಿಕಾರಿ ಉಮೇಶ್ ಹಾಗೂ ಉಷಾಗೆ ಮಾರಕಾಸ್ತ್ರ ತೋರಿಸಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ದರೋಡೆ ಮಾಡಿದ್ದಾರೆ.

ಕೃತ್ಯ ನಡೆದ ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಪರಿಶೀನಲೆ ಮಾಡಿದರು. ಇನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ದೆಹಲಿಯ ಉಮ್ರಾವ್ ಜ್ಯುವೆಲ್ಲರಿಯಲ್ಲಿ 20-25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು 

ರಾಮನಗರ ಎಸ್​ಪಿ ಪ್ತತಿಕ್ರಿಯೆ

ಚುನಾವಣಾ ಅಧಿಕಾರಿ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಹುಲ್ಲೇನಹಳ್ಳಿ ಕೋ ಆಪರೇಟ್ ಸೊಸೈಟಿ ಎಲೆಕ್ಷನ್ ಇತ್ತು. ಅಧಿಕಾರಿಗಳು ಚುನಾವಣೆ ನಡೆಸಲು ಬರುತ್ತಿದ್ದರು. ಈ ವೇಳೆ ಅಧಿಕಾರಿಗಳ ಮೇಲೆ ನಾಲ್ಕು ಜನ ಅಪರಿಚಿತರು ಹಲ್ಲೆ ಮಾಡಿದ್ದಾರೆ. 250 ಬ್ಯಾಲೆಟ್ ಪೇಪರ್,‌ 2 ಲ್ಯಾಪಟ್ಯಾಪ್ ದರೋಡೆ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾದ 4ರ ಜನ ಪತ್ತೆ ಹಚ್ಚಲಾಗಿದ್ದು, ಸರಕಾರಿ ಕೆಲಸಕ್ಕೆ ಅಡಚಣೆ, ಕೊಲೆ ಯತ್ನ, ಕೇಸ್ ಹಾಕಿದ್ದೇವೆ ಎಂದು ಮಾಹಿತಿ ನೀಡಿದರು.

ಮಗಳ ಮದ್ವೆಗೆಂದು ಮಾಡಿಸಿಟ್ಟಿದ್ದ ಚಿನ್ನ, ನಗದು ಕಳ್ಳತನ

ಬೆಂಗಳೂರಿನ(Bengaluru) ತಿಲಕ್ ನಗರದ ಎಸ್​ಆರ್​ಕೆ ಗಾರ್ಡನ್​ನಲ್ಲಿ ಮನೆ ಲಾಕ್ ಮುರಿದು 3.5 ಕೆ.ಜಿ ಚಿನ್ನ ಹಾಗೂ 10 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್​ ಆಗಿದ್ದಾನೆ. ಹೌದು, ಮನೆಯವರೆಲ್ಲ ರಾಮನಗರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಖತರ್ನಾಕ್​ ಕಳ್ಳ ಮನೆಯಲ್ಲಿಯೇ ಯಾರು ಇಲ್ಲದಿರುವುದು ಗಮನಿಸಿಯೇ ಈ ಕೃತ್ಯ ಎಸಗಿದ್ದಾನೆ.

ಮಗಳ ಮದುವೆ ಕೂಡ ಫಿಕ್ಸ್ ಅಗಿತ್ತು. ಹಾಗಾಗಿ ಆಭರಣ ಎಲ್ಲವನ್ನು ಮಾಡಿಸಿ, ಮನೆಯಲ್ಲಿಟ್ಟಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ತಿಲಕ್ ನಗರ ಪೊಲೀಸರು ಮನೆಗೆ ಭೇಟಿ ನೀಡಿ, ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸಿದ್ದಾರೆ. ಮನೆಯವರು ಯಾರು ಇಲ್ಲದಿರವುದನ್ನ ಗಮನಿಸಿಯೇ ಕಳ್ಳ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಇನ್ನು ಸಿಸಿಟಿವಿ ಪರಿಶೀಲನೆ ನಡೆಸಿರುವ ತಿಲಕ್ ನಗರ ಪೊಲೀಸರಿಗೆ, ಮನೆಗೆ ಓರ್ವ ಬಂದಿರುವುದು ಗೊತ್ತಾಗಿದೆ. ಇದೀಗ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು, ಕಳ್ಳನಿಗಾಗಿ ಬಲೆ ಬೀಸಿದ್ದಾರೆ.

ರಾಮನಗರಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:00 pm, Wed, 27 September 23

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ