AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ಆಯೋಗಕ್ಕೆ ದೂರು ನೀಡಿದ ಜೆಡಿಎಸ್​ ವಿರುದ್ಧ ಗುಡುಗಿದ ಶಾಸಕ ಬಾಲಕೃಷ್ಣ

ರಾಮನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಶಾಸಕ ಹೆಚ್.ಸಿ.ಬಾಲಕೃಷ್ಣ, ಶಾಸಕ, ನಿಗಮ ಮಂಡಳಿ ಅಧ್ಯಕ್ಷನಾಗಿದ್ದಕ್ಕೆ ತಡೆದುಕೊಳ್ಳಲು ಆಗುತ್ತಿಲ್ಲ. ದೂರಿನ ಬಗ್ಗೆ ಕಾನೂನು ರೀತಿಯಲ್ಲಿ ತನಿಖೆಯಾಗಿ ಸತ್ಯ ಹೊರಬರಲಿ‌ ಎಂದು ಹೇಳಿದ್ದಾರೆ. ನಾವು ಅಧಿಕಾರದಲ್ಲಿದ್ದನ್ನು ತಡೆದುಕೊಳ್ಳಲು ಹೆಚ್​ಡಿ ಕುಮಾರಸ್ವಾಮಿ ಕುಟುಂಬಕ್ಕೆ ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. 

ತಮ್ಮ ವಿರುದ್ಧ ಆಯೋಗಕ್ಕೆ ದೂರು ನೀಡಿದ ಜೆಡಿಎಸ್​ ವಿರುದ್ಧ ಗುಡುಗಿದ ಶಾಸಕ ಬಾಲಕೃಷ್ಣ
ಶಾಸಕ ಹೆಚ್​.ಸಿ.ಬಾಲಕೃಷ್ಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Feb 02, 2024 | 8:37 PM

Share

ರಾಮನಗರ, ಫೆಬ್ರುವರಿ 2: ಶಾಸಕ, ನಿಗಮ ಮಂಡಳಿ ಅಧ್ಯಕ್ಷನಾಗಿದ್ದಕ್ಕೆ ತಡೆದುಕೊಳ್ಳಲು ಆಗುತ್ತಿಲ್ಲ. ದೂರಿನ ಬಗ್ಗೆ ಕಾನೂನು ರೀತಿಯಲ್ಲಿ ತನಿಖೆಯಾಗಿ ಸತ್ಯ ಹೊರಬರಲಿ‌ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ (MLA Balakrishna) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಜನರಿಗೆ ಅಕ್ಷತೆ ಬೇಕಾ.. ಗ್ಯಾರಂಟಿ ಬೇಕಾ ಅಂತಾ ನಾನು ಕೇಳಿದ್ದು. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕುಟುಂಬಕ್ಕೆ ನಾವು ಅಧಿಕಾರದಲ್ಲಿದ್ದನ್ನು ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಯಾರಿಗೆ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದೇವೆ? ಯಾರಾದರೂ ಓಡಿಸಿಕೊಂಡು ಹೋಗುತ್ತಿದ್ದೇವಾ? ಎಂದು ಪ್ರಶ್ನೆ ಮಾಡಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಶಾಸಕ ಹೆಚ್​ಸಿ ಬಾಲಕೃಷ್ಣ ತಿರುಗೇಟು

ಸರ್ಕಾರ ಒತ್ತಡ ಹಾಕಿ ಹೇಳಿಕೆ ಬಗ್ಗೆ ಬಾಲಕೃಷ್ಣ ಯೂಟರ್ನ್ ಹೇಳಿಕೆ ಕೊಟ್ಟಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥ ಇಲ್ಲ. ಒಂದೊಂದು ದಿನ ಒಂದೊಂದು ಹೇಳಿಕೆ ನೀಡುತ್ತಾರೆ. ಹಿಂದೆ ಬಿಜೆಪಿಗೆ ವೋಟ್​ ಹಾಕಿದರೆ ದೇಶ ದಿವಾಳಿ ಆಗುತ್ತೆ ಎಂದಿದ್ದರು. ನಾಳೆ ದಿನ ಶ್ರೀಲಂಕಾ ರೀತಿಯಲ್ಲಿ ದೇಶ ದಿವಾಳಿಯಾಗುತ್ತೆ ಎಂದಿದ್ದರು. ಅವರ ಹೇಳಿಕೆಗಳಿಗೆ ಮಹತ್ವ ಕೊಡುವುದು ಬೇಡ ಎಂದು ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಹೆಚ್​ಸಿ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಏನಿದು ಪ್ರಕರಣ?

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ರೆ ಗ್ಯಾರಂಟಿಗಳು ಇರುತ್ತೆ. ಇಲ್ಲದಿದ್ದರೆ ಇಲ್ಲ ಎನ್ನುವ ಅರ್ಥದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದರು. ಸದ್ಯ ಈ ವಿಚಾರವಾಗಿಯೇ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಚ್.ಸಿ.ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸರ್ಮರ್ಥಿಸಿಕೊಂಡಿದ್ದ ಬಾಲಕೃಷ್ಣ

ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳಿಗೆ ಮತ ನೀಡಬೇಕೇ ಹೊರತು ಬಿಜೆಪಿಯವರ ಅಕ್ಷತೆಗಲ್ಲ ಎಂಬುದಷ್ಟೇ ನಮ್ಮ ಉದ್ದೇಶ. ಮತ ಹಾಕಲೇಬೇಕು, ಗ್ಯಾರಂಟಿ ಯೋಜನೆ ರದ್ದುಮಾಡಿಯೇ ಬಿಡುತ್ತೇವೆ ಎಂದು ಹೇಳಿಲ್ಲ. ನಮ್ಮದು ಬ್ಲ್ಯಾಕ್​​ಮೇಲ್ ಸಂಸ್ಕೃತಿ ಅಲ್ಲ. ನಾವು ಕೆಲಸ ಮಾಡಿದ್ದೇವೆ, ನಮಗೆ ಮತ ನೀಡಿ ಎಂದು ಕೇಳುತ್ತಿದ್ದೇವಷ್ಟೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಕಾಂಗ್ರೆಸ್​ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ದೂರು ಬಳಿಕ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಗ್ಯಾರಂಟಿ ಮುಂದಿಟ್ಟುಕೊಂಡು ಬ್ಲ್ಯಾಕ್​ಮೇಲ್ ಸಂಸ್ಕೃತಿ ಅನುಸರಿಸುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮಾಡಿತ್ತು.

ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ

ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದರು. ಗ್ಯಾರಂಟಿ ಸಂಬಂಧ ಕಾಂಗ್ರೆಸ್ಸಿಗರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಮತ ಹಾಕದಿದ್ದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಹೆದರಿಸುತ್ತಿದ್ದಾರೆ. ಈಬಗ್ಗೆ ಕ್ರಮಕೈಗೊಳ್ಳಲು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ