AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ಆಯೋಗಕ್ಕೆ ದೂರು ನೀಡಿದ ಜೆಡಿಎಸ್​ ವಿರುದ್ಧ ಗುಡುಗಿದ ಶಾಸಕ ಬಾಲಕೃಷ್ಣ

ರಾಮನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಶಾಸಕ ಹೆಚ್.ಸಿ.ಬಾಲಕೃಷ್ಣ, ಶಾಸಕ, ನಿಗಮ ಮಂಡಳಿ ಅಧ್ಯಕ್ಷನಾಗಿದ್ದಕ್ಕೆ ತಡೆದುಕೊಳ್ಳಲು ಆಗುತ್ತಿಲ್ಲ. ದೂರಿನ ಬಗ್ಗೆ ಕಾನೂನು ರೀತಿಯಲ್ಲಿ ತನಿಖೆಯಾಗಿ ಸತ್ಯ ಹೊರಬರಲಿ‌ ಎಂದು ಹೇಳಿದ್ದಾರೆ. ನಾವು ಅಧಿಕಾರದಲ್ಲಿದ್ದನ್ನು ತಡೆದುಕೊಳ್ಳಲು ಹೆಚ್​ಡಿ ಕುಮಾರಸ್ವಾಮಿ ಕುಟುಂಬಕ್ಕೆ ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ. 

ತಮ್ಮ ವಿರುದ್ಧ ಆಯೋಗಕ್ಕೆ ದೂರು ನೀಡಿದ ಜೆಡಿಎಸ್​ ವಿರುದ್ಧ ಗುಡುಗಿದ ಶಾಸಕ ಬಾಲಕೃಷ್ಣ
ಶಾಸಕ ಹೆಚ್​.ಸಿ.ಬಾಲಕೃಷ್ಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Feb 02, 2024 | 8:37 PM

Share

ರಾಮನಗರ, ಫೆಬ್ರುವರಿ 2: ಶಾಸಕ, ನಿಗಮ ಮಂಡಳಿ ಅಧ್ಯಕ್ಷನಾಗಿದ್ದಕ್ಕೆ ತಡೆದುಕೊಳ್ಳಲು ಆಗುತ್ತಿಲ್ಲ. ದೂರಿನ ಬಗ್ಗೆ ಕಾನೂನು ರೀತಿಯಲ್ಲಿ ತನಿಖೆಯಾಗಿ ಸತ್ಯ ಹೊರಬರಲಿ‌ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ (MLA Balakrishna) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಜನರಿಗೆ ಅಕ್ಷತೆ ಬೇಕಾ.. ಗ್ಯಾರಂಟಿ ಬೇಕಾ ಅಂತಾ ನಾನು ಕೇಳಿದ್ದು. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕುಟುಂಬಕ್ಕೆ ನಾವು ಅಧಿಕಾರದಲ್ಲಿದ್ದನ್ನು ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಯಾರಿಗೆ ಬ್ಲ್ಯಾಕ್‌ ಮೇಲ್ ಮಾಡುತ್ತಿದ್ದೇವೆ? ಯಾರಾದರೂ ಓಡಿಸಿಕೊಂಡು ಹೋಗುತ್ತಿದ್ದೇವಾ? ಎಂದು ಪ್ರಶ್ನೆ ಮಾಡಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಶಾಸಕ ಹೆಚ್​ಸಿ ಬಾಲಕೃಷ್ಣ ತಿರುಗೇಟು

ಸರ್ಕಾರ ಒತ್ತಡ ಹಾಕಿ ಹೇಳಿಕೆ ಬಗ್ಗೆ ಬಾಲಕೃಷ್ಣ ಯೂಟರ್ನ್ ಹೇಳಿಕೆ ಕೊಟ್ಟಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥ ಇಲ್ಲ. ಒಂದೊಂದು ದಿನ ಒಂದೊಂದು ಹೇಳಿಕೆ ನೀಡುತ್ತಾರೆ. ಹಿಂದೆ ಬಿಜೆಪಿಗೆ ವೋಟ್​ ಹಾಕಿದರೆ ದೇಶ ದಿವಾಳಿ ಆಗುತ್ತೆ ಎಂದಿದ್ದರು. ನಾಳೆ ದಿನ ಶ್ರೀಲಂಕಾ ರೀತಿಯಲ್ಲಿ ದೇಶ ದಿವಾಳಿಯಾಗುತ್ತೆ ಎಂದಿದ್ದರು. ಅವರ ಹೇಳಿಕೆಗಳಿಗೆ ಮಹತ್ವ ಕೊಡುವುದು ಬೇಡ ಎಂದು ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಹೆಚ್​ಸಿ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಏನಿದು ಪ್ರಕರಣ?

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ರೆ ಗ್ಯಾರಂಟಿಗಳು ಇರುತ್ತೆ. ಇಲ್ಲದಿದ್ದರೆ ಇಲ್ಲ ಎನ್ನುವ ಅರ್ಥದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದರು. ಸದ್ಯ ಈ ವಿಚಾರವಾಗಿಯೇ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಚ್.ಸಿ.ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸರ್ಮರ್ಥಿಸಿಕೊಂಡಿದ್ದ ಬಾಲಕೃಷ್ಣ

ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳಿಗೆ ಮತ ನೀಡಬೇಕೇ ಹೊರತು ಬಿಜೆಪಿಯವರ ಅಕ್ಷತೆಗಲ್ಲ ಎಂಬುದಷ್ಟೇ ನಮ್ಮ ಉದ್ದೇಶ. ಮತ ಹಾಕಲೇಬೇಕು, ಗ್ಯಾರಂಟಿ ಯೋಜನೆ ರದ್ದುಮಾಡಿಯೇ ಬಿಡುತ್ತೇವೆ ಎಂದು ಹೇಳಿಲ್ಲ. ನಮ್ಮದು ಬ್ಲ್ಯಾಕ್​​ಮೇಲ್ ಸಂಸ್ಕೃತಿ ಅಲ್ಲ. ನಾವು ಕೆಲಸ ಮಾಡಿದ್ದೇವೆ, ನಮಗೆ ಮತ ನೀಡಿ ಎಂದು ಕೇಳುತ್ತಿದ್ದೇವಷ್ಟೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಕಾಂಗ್ರೆಸ್​ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ದೂರು ಬಳಿಕ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಗ್ಯಾರಂಟಿ ಮುಂದಿಟ್ಟುಕೊಂಡು ಬ್ಲ್ಯಾಕ್​ಮೇಲ್ ಸಂಸ್ಕೃತಿ ಅನುಸರಿಸುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮಾಡಿತ್ತು.

ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ

ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದರು. ಗ್ಯಾರಂಟಿ ಸಂಬಂಧ ಕಾಂಗ್ರೆಸ್ಸಿಗರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಮತ ಹಾಕದಿದ್ದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಹೆದರಿಸುತ್ತಿದ್ದಾರೆ. ಈಬಗ್ಗೆ ಕ್ರಮಕೈಗೊಳ್ಳಲು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ