ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಲಕ್ಷ ಲಕ್ಷ ಹಣ ದರೋಡೆ!

ರಾಮನಗರ: ಕಾರಿನ ಗಾಜು ಒಡೆದು 3 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಬಸವರಾಜೇ ಅರಸ್ ಎಂಬುವರು ಮನೆಯ ಮುಂದೆಯೇ ಕಾರು ನಿಲ್ಲಿಸಿ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ. ಕಾರನ್ನು ಬಸವರಾಜೇ ಅರಸ್ ಮನೆಯ ಮುಂದೆಯೇ ನಿಲ್ಲಿಸಿದ್ದರು. ಎರಡು ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ ಲಕ್ಷ ಲಕ್ಷ ಹಣ ದರೋಡೆ!

Updated on: Jan 08, 2020 | 3:32 PM

ರಾಮನಗರ: ಕಾರಿನ ಗಾಜು ಒಡೆದು 3 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ. ಬಸವರಾಜೇ ಅರಸ್ ಎಂಬುವರು ಮನೆಯ ಮುಂದೆಯೇ ಕಾರು ನಿಲ್ಲಿಸಿ ಮನೆಯೊಳಗೆ ಹೋಗಿ ಬರುವಷ್ಟರಲ್ಲಿ ಘಟನೆ ನಡೆದಿದೆ.

ಕಾರನ್ನು ಬಸವರಾಜೇ ಅರಸ್ ಮನೆಯ ಮುಂದೆಯೇ ನಿಲ್ಲಿಸಿದ್ದರು. ಎರಡು ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಖದೀಮರು ಕಾರಿನ ಗ್ಲಾಸ್ ಒಡೆದು ಹಣ ಎಗರಿಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.