AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದಲ್ಲಿ ನೈತಿಕ ಪೊಲೀಸ್​ಗಿರಿ: ಅನ್ಯ ಧರ್ಮದ ಯುವಕ, ಯುವತಿ ಮೇಲೆ ಹಲ್ಲೆ, ತಲೆಬೋಳಿಸಿದ್ದ ಆರೋಪಿಗಳು ಅರೆಸ್ಟ್​​

ಕನಕಪುರದಲ್ಲಿ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಮೇಲೆ ನಡೆದ ನೈತಿಕ ಪೊಲೀಸ್​​ ಗಿರಿ ಪ್ರಕರಣದಲ್ಲಿ ಓರ್ವ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯ ಕುಟುಂಬಸ್ಥರು ಹಲ್ಲೆ ಮಾಡಿ ತಲೆ ಬೋಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ.

ಕನಕಪುರದಲ್ಲಿ ನೈತಿಕ ಪೊಲೀಸ್​ಗಿರಿ: ಅನ್ಯ ಧರ್ಮದ ಯುವಕ, ಯುವತಿ ಮೇಲೆ ಹಲ್ಲೆ, ತಲೆಬೋಳಿಸಿದ್ದ ಆರೋಪಿಗಳು ಅರೆಸ್ಟ್​​
ಪ್ರಾತಿನಿಧಿಕ ಚಿತ್ರ
ಪ್ರಶಾಂತ್​ ಬಿ.
| Edited By: |

Updated on: Sep 21, 2025 | 1:16 PM

Share

ರಾಮನಗರ, ಸೆಪ್ಟೆಂಬರ್​ 21: ಡಿಸಿಎಂ ಡಿಕೆ ಶಿವಕುಮಾರ್​​ ಸ್ವಕ್ಷೇತ್ರ ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ (moral policing) ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರಪುರ ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿ ಐವರು ಬಂಧಿಸಿದ್ದಾರೆ (Arrest). ನವಾಜ್, ಕಬೀರ್, ಸುಯೋಲ್, ನಯಾಜ್ ಮತ್ತು ಮಹಿಳೆ ಬಂಧಿತ ಆರೋಪಿಗಳು. ಎರಡು ಪ್ರತ್ಯೇಕ ಎಫ್​ಐಆರ್ ಮಾಡಲಾಗಿದೆ.

ನಡೆದದ್ದೇನು?

ಅಕ್ರಮ ಸಂಬಂಧ ಹಿನ್ನೆಲೆ ಹಿಂದೂ ವ್ಯಕ್ತಿ ಹಾಗೂ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಇಂದಿರಾನಗರದಲ್ಲಿ ನಡೆದಿತ್ತು. ಹಲ್ಲೆ ಮಾಡುವುದಲ್ಲದೇ ಮಹೇಶ್ ಹಾಗೂ ಹಸೀನಾ ಬಾನು ತಲೆ ಬೋಳಿಸಿ ಆರೋಪಿಗಳು ಅಟ್ಟಹಾಸ ಮೆರೆದಿದ್ದರು.

ಇದನ್ನೂ ಓದಿ: ‘ಬುರ್ಖಾ ತೆಗೆ, ನಿನ್ನ ಹೆಸರೇನು ಹೇಳು’: ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಕೃತ್ಯ

ಮಹಿಳೆಯ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೃತ್ಯವೆಸಗಲಾಗಿದೆ. ತಕ್ಷಣ ಹಲ್ಲೆಗೊಳಗಾದವರನ್ನು ರಕ್ಷಣೆ ಮಾಡಿ ಪೊಲೀಸ್ ಠಾಣೆಗೆ ಕರೆ ತರಲಾಗಿತ್ತು. ಮಹೇಶ್ ಹಾಗೂ ಹಸೀನಾ ಬಾನು ದೂರಿನ ಅನ್ವಯ ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ.

ನೈತಿಕ ಪೊಲೀಸ್ ಗಿರಿ ನಡೆದಿದೆ ಎಂದ ಎಸ್​.ಪಿ ಶ್ರೀನಿವಾಸ್ ಗೌಡ

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್​.ಪಿ ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದು, ನೊಂದಿತರಿಬ್ಬರೂ ಪರಸ್ಪರ ಪ್ರೀತಿಸುತ್ತಿರುತ್ತಾರೆ. ಇದನ್ನ ಸಹಿಸಲು ಆಗದೇ ಮಹಿಳೆ ಕಡೆಯವರು ಕರೆತಂದು ಹಲ್ಲೆ ನಡೆಸಿ ತಲೆ ಬೋಳಿಸಿದ್ದಾರೆ ಎಂದಿದ್ದಾರೆ.

ಸದ್ಯ ನೈತಿಕ ಪೊಲೀಸ್ ಗಿರಿ ನಡೆದಿದೆ. ಹೀಗಾಗಿ ತಕ್ಷಣ ಕ್ರಮ ತೆಗೆದುಕೊಂಡಿದ್ದೇವೆ. ಪ್ರಕರಣ ಸಂಬಂಧ ಐವರನ್ನ ಬಂಧಿಸಲಾಗಿದೆ. ಎರಡು ಪ್ರತ್ಯೇಕ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು

ಇತ್ತೀಚೆಗೆ ಜಿಲ್ಲೆಯ ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಹಿಂದೂ ಯುವಕ, ಮುಸ್ಲಿಂ ಯುವತಿ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಕೆಲ ಮುಸ್ಲಿಂ ಯುವಕರು ಅಡ್ಡಗಟ್ಟಿದ್ದರು. ಈ ವೇಳೆ ನೀವು ಯಾರು? ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು. ನೈತಿಕ ಪೊಲೀಸ್​ ಗಿರಿ ವಿಡಿಯೋ ವೈರಲ್​ ಆಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?