AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ದರ್ಗಾದಲ್ಲಿ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ

ದರ್ಗಾದಲ್ಲಿ ಪ್ರಸಾದ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ. ಪೀರನ್ ಷಾ ವಲಿ ದರ್ಗಾ ಉರುಸ್ ಪ್ರಯುಕ್ತ ಪ್ರಸಾದ ನೀಡಲಾಗಿತ್ತು. ಬಳಿಕ ವಾಂತಿ ಭೇದಿ ಶುರುವಾಗಿ ಅಸ್ವಸ್ಥರಾಗಿದ್ದಾರೆ.

ರಾಮನಗರ: ದರ್ಗಾದಲ್ಲಿ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ
ರಾಮನಗರದ ಯಾರಬ್ ನಗರದಲ್ಲಿರುವ ದರ್ಗಾದಲ್ಲಿ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: Rakesh Nayak Manchi|

Updated on:Nov 19, 2023 | 7:09 PM

Share

ರಾಮನಗರ, ನ.19: ದರ್ಗಾದಲ್ಲಿ ಪ್ರಸಾದ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ರಾಮನಗರದ (Ramanagara) ಯಾರಬ್ ನಗರದಲ್ಲಿ ನಡೆದಿದೆ. ಪೀರನ್ ಷಾ ವಲಿ ದರ್ಗಾ ಉರುಸ್ ಪ್ರಯುಕ್ತ ಪ್ರಸಾದ ನೀಡಲಾಗಿತ್ತು. ಬಳಿಕ 50ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಶುರುವಾಗಿ ಅಸ್ವಸ್ಥರಾಗಿದ್ದಾರೆ.

ದರ್ಗಾದಲ್ಲಿ ಮಧ್ಯಾಹ್ನ ಮಲಿದಾ ಎಂಬ ಸಿಹಿ ಪದಾರ್ಥವನ್ನು ನೀಡಲಾಗಿತ್ತು. ಇದನ್ನು ಸೇವಿಸಿದ ಬಳಿಕ ಭಕ್ತರಿಗೆ ವಾಂತಿ, ಭೇದಿಯಾಗಲು ಶುರುವಾಗಿದೆ. ಸಿಹಿ ತಿಂಡಿಯಲ್ಲಿ ವಿಷಕಾರಿ ಅಂಶ ಇರುವ ಬಗ್ಗೆ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಥುರಾದ ಜಿಲ್ಲಾಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ, 10ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ

ಸದ್ಯ, ಅಸ್ವಸ್ಥಗೊಂಡ ಜನರಿಗೆ ವೈದ್ಯರು ಗ್ಲೂಕೋಸ್ ನೀಡಿ ಚಿಕಿತ್ಸೆ ನೀಡುತ್ತಿದ್ದಾರೆ. ಪ್ರಸಾದ ತಿಂದವರಲ್ಲಿ ಕೆಲವರು ನಿತ್ರಾಣಗೊಂಡಿದ್ದಾರೆ. ಅಲ್ಲದೆ, ವೈದ್ಯರ ಅನುಮಾನ ಹಿನ್ನೆಲೆ ರಾಮನಗರ ಪೊಲೀಸರು ಮಲಿದಾ ಸಿಹಿ ತಿಂಡಿಯ ಮಾದರಿಯನ್ನು ಪರೀಕ್ಷೆಗಾಗಿ ಪಡೆದಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಇಕ್ಬಾಲ್

ಜನರು ಅಸ್ವಸ್ಥಗೊಂಡ ಹಿನ್ನೆಲೆ ಶಾಸಕ‌ ಇಕ್ಬಾಲ್ ಹುಸೇನ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸದ್ಯ ಅಸ್ವಸ್ಥರ ಆರೋಗ್ಯ ವಿಚಾರಣೆ ಮಾಡಿದ ಶಾಸಕರು ವೈದರ ಬಳಿ‌ ಮಾಹಿತಿ ಪಡೆದು, ಕೂಡಲೇ ಇನ್ನಷ್ಟು ಬೆಡ್ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Sun, 19 November 23

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More