ರಾಮನಗರ: ದರ್ಗಾದಲ್ಲಿ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ

ದರ್ಗಾದಲ್ಲಿ ಪ್ರಸಾದ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ. ಪೀರನ್ ಷಾ ವಲಿ ದರ್ಗಾ ಉರುಸ್ ಪ್ರಯುಕ್ತ ಪ್ರಸಾದ ನೀಡಲಾಗಿತ್ತು. ಬಳಿಕ ವಾಂತಿ ಭೇದಿ ಶುರುವಾಗಿ ಅಸ್ವಸ್ಥರಾಗಿದ್ದಾರೆ.

ರಾಮನಗರ: ದರ್ಗಾದಲ್ಲಿ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ
ರಾಮನಗರದ ಯಾರಬ್ ನಗರದಲ್ಲಿರುವ ದರ್ಗಾದಲ್ಲಿ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ
Follow us
| Edited By: Rakesh Nayak Manchi

Updated on:Nov 19, 2023 | 7:09 PM

ರಾಮನಗರ, ನ.19: ದರ್ಗಾದಲ್ಲಿ ಪ್ರಸಾದ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ರಾಮನಗರದ (Ramanagara) ಯಾರಬ್ ನಗರದಲ್ಲಿ ನಡೆದಿದೆ. ಪೀರನ್ ಷಾ ವಲಿ ದರ್ಗಾ ಉರುಸ್ ಪ್ರಯುಕ್ತ ಪ್ರಸಾದ ನೀಡಲಾಗಿತ್ತು. ಬಳಿಕ 50ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಶುರುವಾಗಿ ಅಸ್ವಸ್ಥರಾಗಿದ್ದಾರೆ.

ದರ್ಗಾದಲ್ಲಿ ಮಧ್ಯಾಹ್ನ ಮಲಿದಾ ಎಂಬ ಸಿಹಿ ಪದಾರ್ಥವನ್ನು ನೀಡಲಾಗಿತ್ತು. ಇದನ್ನು ಸೇವಿಸಿದ ಬಳಿಕ ಭಕ್ತರಿಗೆ ವಾಂತಿ, ಭೇದಿಯಾಗಲು ಶುರುವಾಗಿದೆ. ಸಿಹಿ ತಿಂಡಿಯಲ್ಲಿ ವಿಷಕಾರಿ ಅಂಶ ಇರುವ ಬಗ್ಗೆ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಥುರಾದ ಜಿಲ್ಲಾಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ, 10ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ

ಸದ್ಯ, ಅಸ್ವಸ್ಥಗೊಂಡ ಜನರಿಗೆ ವೈದ್ಯರು ಗ್ಲೂಕೋಸ್ ನೀಡಿ ಚಿಕಿತ್ಸೆ ನೀಡುತ್ತಿದ್ದಾರೆ. ಪ್ರಸಾದ ತಿಂದವರಲ್ಲಿ ಕೆಲವರು ನಿತ್ರಾಣಗೊಂಡಿದ್ದಾರೆ. ಅಲ್ಲದೆ, ವೈದ್ಯರ ಅನುಮಾನ ಹಿನ್ನೆಲೆ ರಾಮನಗರ ಪೊಲೀಸರು ಮಲಿದಾ ಸಿಹಿ ತಿಂಡಿಯ ಮಾದರಿಯನ್ನು ಪರೀಕ್ಷೆಗಾಗಿ ಪಡೆದಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಇಕ್ಬಾಲ್

ಜನರು ಅಸ್ವಸ್ಥಗೊಂಡ ಹಿನ್ನೆಲೆ ಶಾಸಕ‌ ಇಕ್ಬಾಲ್ ಹುಸೇನ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸದ್ಯ ಅಸ್ವಸ್ಥರ ಆರೋಗ್ಯ ವಿಚಾರಣೆ ಮಾಡಿದ ಶಾಸಕರು ವೈದರ ಬಳಿ‌ ಮಾಹಿತಿ ಪಡೆದು, ಕೂಡಲೇ ಇನ್ನಷ್ಟು ಬೆಡ್ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Sun, 19 November 23

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ