AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿ ಪ್ಲ್ಯಾನಿಂಗ್ ಅಥಾರಿಟಿ ತೆಗೆದು, ಗ್ರೇಟರ್ ಬೆಂಗಳೂರು ಅಥಾರಿಟಿ ಅಂತ ಹೊಸ ರೂಪ‌ ಕೊಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ. ಬಿಡದಿ ಪ್ಲಾನಿಂಗ್ ಅಥಾರಿಟಿ ಇನ್ಮುಂದೆ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ (ಎಡಚಿತ್ರ) ಮೆಟ್ರೋ (ಬಲಚಿತ್ರ)
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ವಿವೇಕ ಬಿರಾದಾರ|

Updated on: Nov 10, 2023 | 2:55 PM

Share

ರಾಮನಗರ ನ.10: ಬಿಡದಿ ಭಾಗಕ್ಕೆ ಮೆಟ್ರೋ (Metro) ತರಲು ಪ್ರಯತ್ನ ಮಾಡುತ್ತೇನೆ. ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನ ಮಾಡುತ್ತಿದ್ದೇವೆ. ಅದೇ ರೀತಿ ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ಹೇಳಿದರು.

ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಬಾಲಕೃಷ್ಣ ಹಾಗೂ ಸುರೇಶ್​​ರವರು ಬೆನ್ನು ಬಿದ್ದಿದ್ದಾರೆ. ಲಕ್ಷಾಂತರ ಮಂದಿ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಅದೇ ತರ ಬಿಡದಿವರೆಗೂ ಮೆಟ್ರೋ ತರಲು ಯೋಚಿಸಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ನಮ್ಮ ಮೆಟ್ರೋ ಮಾರ್ಗ ವಿಸ್ತರಣೆಯಿಂದ ಬಿಎಂಟಿಸಿ ಕಲೆಕ್ಷನ್​​ಗೆ ಹೊಡೆತ

ಬಿಡದಿ ಪ್ಲ್ಯಾನಿಂಗ್ ಅಥಾರಿಟಿ ತೆಗೆದು, ಗ್ರೇಟರ್ ಬೆಂಗಳೂರು ಅಥಾರಿಟಿ ಅಂತ ಹೊಸ ರೂಪ‌ ಕೊಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ. ಬಿಡದಿ ಪ್ಲಾನಿಂಗ್ ಅಥಾರಿಟಿ ಇನ್ಮುಂದೆ ಇರುವುದಿಲ್ಲ. ವಿದ್ಯಾಸಂಸ್ಥೆ, ಆಸ್ಪತ್ರೆ, ಫ್ಯಾಕ್ಟರಿ ಕಾರ್ಮಿಕರಿಗೆ ಹೊಸ ಶಕ್ತಿ ತುಂಬಲು ಸರ್ಕಾರ ತೀರ್ಮಾನ ಮಾಡಿದೆ. ರೈತರಿಗೆ ಕೆಲಸ ಆಗಬೇಕು, ಅವರ ಭೂಮಿಗೆ ಬೆಲೆ ಸಿಗಬೇಕು, ಅದಕ್ಕೆ ಎರಡು ದೊಡ್ಡ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. ನಾವು ಫ್ರೀ ಬಸ್ ಮಾಡಿದ್ದೇವೆ. ಹೆಣ್ಣು ಕುಟುಂಬಂದ ಕಣ್ಣು, ಅವರಿಗೆ ಶಕ್ತಿ ಕೊಡಲು ಮುಂದಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ