AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿ ಪ್ಲ್ಯಾನಿಂಗ್ ಅಥಾರಿಟಿ ತೆಗೆದು, ಗ್ರೇಟರ್ ಬೆಂಗಳೂರು ಅಥಾರಿಟಿ ಅಂತ ಹೊಸ ರೂಪ‌ ಕೊಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ. ಬಿಡದಿ ಪ್ಲಾನಿಂಗ್ ಅಥಾರಿಟಿ ಇನ್ಮುಂದೆ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ (ಎಡಚಿತ್ರ) ಮೆಟ್ರೋ (ಬಲಚಿತ್ರ)
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Nov 10, 2023 | 2:55 PM

Share

ರಾಮನಗರ ನ.10: ಬಿಡದಿ ಭಾಗಕ್ಕೆ ಮೆಟ್ರೋ (Metro) ತರಲು ಪ್ರಯತ್ನ ಮಾಡುತ್ತೇನೆ. ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನ ಮಾಡುತ್ತಿದ್ದೇವೆ. ಅದೇ ರೀತಿ ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ಹೇಳಿದರು.

ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಬಾಲಕೃಷ್ಣ ಹಾಗೂ ಸುರೇಶ್​​ರವರು ಬೆನ್ನು ಬಿದ್ದಿದ್ದಾರೆ. ಲಕ್ಷಾಂತರ ಮಂದಿ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಅದೇ ತರ ಬಿಡದಿವರೆಗೂ ಮೆಟ್ರೋ ತರಲು ಯೋಚಿಸಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ನಮ್ಮ ಮೆಟ್ರೋ ಮಾರ್ಗ ವಿಸ್ತರಣೆಯಿಂದ ಬಿಎಂಟಿಸಿ ಕಲೆಕ್ಷನ್​​ಗೆ ಹೊಡೆತ

ಬಿಡದಿ ಪ್ಲ್ಯಾನಿಂಗ್ ಅಥಾರಿಟಿ ತೆಗೆದು, ಗ್ರೇಟರ್ ಬೆಂಗಳೂರು ಅಥಾರಿಟಿ ಅಂತ ಹೊಸ ರೂಪ‌ ಕೊಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ. ಬಿಡದಿ ಪ್ಲಾನಿಂಗ್ ಅಥಾರಿಟಿ ಇನ್ಮುಂದೆ ಇರುವುದಿಲ್ಲ. ವಿದ್ಯಾಸಂಸ್ಥೆ, ಆಸ್ಪತ್ರೆ, ಫ್ಯಾಕ್ಟರಿ ಕಾರ್ಮಿಕರಿಗೆ ಹೊಸ ಶಕ್ತಿ ತುಂಬಲು ಸರ್ಕಾರ ತೀರ್ಮಾನ ಮಾಡಿದೆ. ರೈತರಿಗೆ ಕೆಲಸ ಆಗಬೇಕು, ಅವರ ಭೂಮಿಗೆ ಬೆಲೆ ಸಿಗಬೇಕು, ಅದಕ್ಕೆ ಎರಡು ದೊಡ್ಡ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. ನಾವು ಫ್ರೀ ಬಸ್ ಮಾಡಿದ್ದೇವೆ. ಹೆಣ್ಣು ಕುಟುಂಬಂದ ಕಣ್ಣು, ಅವರಿಗೆ ಶಕ್ತಿ ಕೊಡಲು ಮುಂದಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು