ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್

ಬಿಡದಿ ಪ್ಲ್ಯಾನಿಂಗ್ ಅಥಾರಿಟಿ ತೆಗೆದು, ಗ್ರೇಟರ್ ಬೆಂಗಳೂರು ಅಥಾರಿಟಿ ಅಂತ ಹೊಸ ರೂಪ‌ ಕೊಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ. ಬಿಡದಿ ಪ್ಲಾನಿಂಗ್ ಅಥಾರಿಟಿ ಇನ್ಮುಂದೆ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ರೈತರು, ಕಾರ್ಮಿಕರ ಹಿತಾಸಕ್ತಿಗಾಗಿ‌ ಬಿಡದಿವರೆಗೆ ಮೆಟ್ರೋ ರೈಲು ಮಾರ್ಗ ವಿಸ್ತರಣೆ: ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ (ಎಡಚಿತ್ರ) ಮೆಟ್ರೋ (ಬಲಚಿತ್ರ)
Edited By: ವಿವೇಕ ಬಿರಾದಾರ

Updated on: Nov 10, 2023 | 2:55 PM

ರಾಮನಗರ ನ.10: ಬಿಡದಿ ಭಾಗಕ್ಕೆ ಮೆಟ್ರೋ (Metro) ತರಲು ಪ್ರಯತ್ನ ಮಾಡುತ್ತೇನೆ. ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನ ಮಾಡುತ್ತಿದ್ದೇವೆ. ಅದೇ ರೀತಿ ಬಿಡದಿವರೆಗೂ ಮೆಟ್ರೋ ವಿಸ್ತರಿಸಲು ಯೋಚಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ​ಹೇಳಿದರು.

ಬಿಡದಿಯಲ್ಲಿ ನಡೆದ ಟೊಯೋಟಾ‌ ತರಬೇತಿ ಕೇಂದ್ರ ವಿಸ್ತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಬರೀ ಉದ್ಘಾಟನೆ ಮಾಡಲಿಕ್ಕೆ ಬಂದಿಲ್ಲ. ಬಿಡದಿಗೆ ಗಿಫ್ಟ್ ಕೊಡುವ ಆಸೆಯಿಂದ ಈ ಭಾಗಕ್ಕೂ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಬಾಲಕೃಷ್ಣ ಹಾಗೂ ಸುರೇಶ್​​ರವರು ಬೆನ್ನು ಬಿದ್ದಿದ್ದಾರೆ. ಲಕ್ಷಾಂತರ ಮಂದಿ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಹೊಸೂರುವರೆಗೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಅದೇ ತರ ಬಿಡದಿವರೆಗೂ ಮೆಟ್ರೋ ತರಲು ಯೋಚಿಸಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ನಮ್ಮ ಮೆಟ್ರೋ ಮಾರ್ಗ ವಿಸ್ತರಣೆಯಿಂದ ಬಿಎಂಟಿಸಿ ಕಲೆಕ್ಷನ್​​ಗೆ ಹೊಡೆತ

ಬಿಡದಿ ಪ್ಲ್ಯಾನಿಂಗ್ ಅಥಾರಿಟಿ ತೆಗೆದು, ಗ್ರೇಟರ್ ಬೆಂಗಳೂರು ಅಥಾರಿಟಿ ಅಂತ ಹೊಸ ರೂಪ‌ ಕೊಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಲೀಗಲ್ ಪ್ರೊಸಿಜರ್ ಎಲ್ಲವೂ ಆಗುತ್ತೆ. ಬೆಂಗಳೂರಿಗೆ ಶಕ್ತಿ ತುಂಬವ ನಿಟ್ಟಿನಿಂದ ಈ ಕೆಲಸಕ್ಕೆ ಮುಂದಾಗಿದ್ದೇವೆ. ಬಿಡದಿ ಪ್ಲಾನಿಂಗ್ ಅಥಾರಿಟಿ ಇನ್ಮುಂದೆ ಇರುವುದಿಲ್ಲ. ವಿದ್ಯಾಸಂಸ್ಥೆ, ಆಸ್ಪತ್ರೆ, ಫ್ಯಾಕ್ಟರಿ ಕಾರ್ಮಿಕರಿಗೆ ಹೊಸ ಶಕ್ತಿ ತುಂಬಲು ಸರ್ಕಾರ ತೀರ್ಮಾನ ಮಾಡಿದೆ. ರೈತರಿಗೆ ಕೆಲಸ ಆಗಬೇಕು, ಅವರ ಭೂಮಿಗೆ ಬೆಲೆ ಸಿಗಬೇಕು, ಅದಕ್ಕೆ ಎರಡು ದೊಡ್ಡ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. ನಾವು ಫ್ರೀ ಬಸ್ ಮಾಡಿದ್ದೇವೆ. ಹೆಣ್ಣು ಕುಟುಂಬಂದ ಕಣ್ಣು, ಅವರಿಗೆ ಶಕ್ತಿ ಕೊಡಲು ಮುಂದಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us