AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ದಿನದಲ್ಲಿ 10 ಲಕ್ಷ ಕುಕ್ಕರ್ ಆರ್ಡರ್, 4ರಿಂದ 5 ಲಕ್ಷ ಕುಕ್ಕರ್ ಹಂಚಿದ್ದಾರೆ: ಡಿಕೆ ಬ್ರದರ್ಸ್ ವಿರುದ್ಧ ನಿಖಿಲ್ ಆರೋಪ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾವು ಜೋರಾಗಿದೆ. ಈ ಮಧ್ಯೆ ಕಳೆದ 20 ದಿನಗಳಲ್ಲಿ ಸುಮಾರು 10 ಲಕ್ಷ ಕುಕ್ಕರ್ ಆರ್ಡ್ ಮಾಡಿದ್ದಾರೆ. ಈಗಾಗಲೇ 4 ರಿಂದ 5 ಲಕ್ಷ ಕುಕ್ಕರ್ ಯಶಸ್ವಿಯಾಗಿ ಹಂಚಿದ್ದಾರೆ ಎಂದು ಡಿಕೆ ಸಹೋದರರ ವಿರುದ್ದ ನಿಖಿಲ್ ಕುಮಾರಸ್ವಾಮಿ (Nikhil Kumaraswamy)  ಆರೋಪಿಸಿದ್ದಾರೆ.

20 ದಿನದಲ್ಲಿ 10 ಲಕ್ಷ ಕುಕ್ಕರ್ ಆರ್ಡರ್, 4ರಿಂದ 5 ಲಕ್ಷ ಕುಕ್ಕರ್ ಹಂಚಿದ್ದಾರೆ: ಡಿಕೆ ಬ್ರದರ್ಸ್ ವಿರುದ್ಧ ನಿಖಿಲ್ ಆರೋಪ
ನಿಖಿಲ್​ ಕುಮಾರಸ್ವಾಮಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 22, 2024 | 7:54 PM

ರಾಮನಗರ, ಮಾ.22: ಕಳೆದ 20 ದಿನಗಳಲ್ಲಿ ಸುಮಾರು 10 ಲಕ್ಷ ಕುಕ್ಕರ್ ಆರ್ಡ್ ಮಾಡಿದ್ದಾರೆ. ಈಗಾಗಲೇ 4 ರಿಂದ 5 ಲಕ್ಷ ಕುಕ್ಕರ್ ಯಶಸ್ವಿಯಾಗಿ ಹಂಚಿದ್ದಾರೆ ಎಂದು ಡಿಕೆ ಸಹೋದರರ ವಿರುದ್ದ ನಿಖಿಲ್ ಕುಮಾರಸ್ವಾಮಿ (Nikhil Kumaraswamy)  ಆರೋಪಿಸಿದ್ದಾರೆ. ಇಂದು (ಮಾ.22) ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಆಮಿಷಗಳನ್ನ ಒಡ್ಡಿ ಚುನಾವಣೆ ನಡೆಸುತ್ತಿದೆ. ಮೊನ್ನೆಯಷ್ಟೇ ಸೀರೆ, ತವಾಗಳನ್ನು ಕೂಡ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪ್ರಜ್ಞಾವಂತ ಮತದಾರರು ಈ ಬಗ್ಗೆ ಯೋಚನೆ ಮಾಡಿ ಮತಹಾಕಲಿದ್ದಾರೆ. ಈ ಮೂಲಕ ಕಾಂಗ್ರೆಸ್ ಗಿಫ್ಟ್ ಪಾಲಿಟಿಕ್ಸ್​ಗೆ ನಿಖಿಲ್ ಕುಮಾರಸ್ವಾಮಿ ಟಕ್ಕರ್ ಕೊಟ್ಟಿದ್ದಾರೆ.

ಇನ್ನು ಕಾಂಗ್ರೆಸ್​ನಿಂದ ಆಪರೇಷನ್ ಹಸ್ತ ವಿಚಾರ, ‘ನಮ್ಮ ಪಕ್ಷದ ಕಾರ್ಯಕರ್ತರು ಯಾರೂ ವೀಕ್ ಮೈಂಡೆಡ್ ಅಲ್ಲ, ಒಂದಷ್ಟು ಜನ ನಮ್ಮ ಚುನಾವಣೆಯಲ್ಲಿ ಜೆಡಿಎಸ್ ಸವಲತ್ತು ಪಡೆದು ಅನ್ಯಾಯ ಮಾಡಿದರು. ಇದು ಚುನಾವಣೆಗಳಲ್ಲಿ ಸಹಜ, ಒಂದು ಐದತ್ತು ಪರ್ಸೆಂಟ್ ಜೊತೆಯಲ್ಲೇ ಇದ್ದು ಮೋಸ ಮಾಡುತ್ತಾರೆ. ಇವರು, ‘ನನ್ನ ಚುನಾವಣೆಯಲ್ಲೇ ಕಾಂಗ್ರೆಸ್​ಗೆ ಒಂದು ಹೆಜ್ಜೆ ಇಟ್ಟಿದ್ರು, ಇದೀಗ ಎರಡೂ ಕಾಲುಗಳನ್ನು ಕಾಂಗ್ರೆಸ್​ಗೆ ಇಟ್ಟಿದ್ದಾರೆ. ಆದರೆ, ಪಕ್ಷ ಕಟ್ಟಿ ಬೆಳೆಸಿರುವ ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಜೊತೆಯಲ್ಲೇ ಇದ್ದಾರೆ. ಕಾಂಗ್ರೆಸ್ ಲಕ್ಷ ಲಕ್ಷ ಕೊಟ್ಟರೂ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿದಿದ್ದ ನಿಖಿಲ್ ಕುಮಾರಸ್ವಾಮಿ ಯೂಟರ್ನ್​

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥರವರ ಗೆಲುವು ನಿಶ್ಚಿತ

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಏ.26, ಮೇ 7ರಂದು ಮತದಾನ ನಡೆಯಲಿದೆ. ಹಾಗಾಗಿ ಇಂದು ಕಾರ್ಯಕರ್ತರನ್ನ ಸಜ್ಜುಗೊಳಿಸಿ ಮೈತ್ರಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡ್ತಿದ್ದೇವೆ. ಇನ್ನು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್​ ಅವರು ಸರಳ ಸಜ್ಜನಿಕೆ ವ್ಯಕ್ತಿ, ಸುಮಾರು 8 ಲಕ್ಷ ಜನಕ್ಕೆ ಹೃದಯ ಆಪರೇಷನ್ ಮಾಡಿದ್ದಾರೆ. ಅವರ ಸೇವೆ ಬಗ್ಗೆ ಜನ ಮಾತನಾಡ್ತಿದ್ದಾರೆ. ಅವರು ಗೆಲುವು ನಿಶ್ಚಿತ ಎಂದರು.

ಇದೇ ವೇಳೆ ಮಾಜಿ ಸಿಎಂ ಹೆಚ್ಡಿಕೆ ಆರೋಗ್ಯದ ಬಗ್ಗೆ ಮಾತನಾಡಿ, ‘ನಿನ್ನೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಸ್ವತಃ ಡಾ.ಮಂಜುನಾಥ್ ಹಾಗೂ ಹಿರಿಯ ವೈದ್ಯ ಸಾಯಿ ಸತೀಶ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ. ಮೂರುವರೆ ಗಂಟೆಗಳ ಕಾಲ ಆಪರೇಷನ್ ನಡೆದಿದೆ. ರಾಜ್ಯದ ಜನರ ಆಶೀರ್ವಾದದಿಂದ ಗುಣಮುಖರಾಗಿದ್ದಾರೆ. ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಅಗಲಿದ್ದಾರೆ. ಮುಂದಿನ ತಿಂಗಳು 1ತಾರೀಖಿನ ಒಳಗೆ ಚುನಾವಣಾ ಕಾರ್ಯಕ್ರಮಗಳಲ್ಲಿ ಕುಮಾರಣ್ಣ ಭಾಗಿಯಾಗ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ