AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಡಾನ್ಸ್!

Nikhil Kumaraswamy: ರಾಮನಗರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಟ ನಿಖಿಲ್ ಕುಮಾರಸ್ವಾಮಿ ಮಕ್ಕಳೊಂದಿಗೆ ನೃತ್ಯ ಮಾಡಿರುವುದು ಎಲ್ಲರ ಗಮನ ಸೆಳೆದಿದೆ.

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಡಾನ್ಸ್!
ನೃತ್ಯ ಮಾಡುತ್ತಿರುವ ನಿಖಿಲ್ ಕುಮಾರಸ್ವಾಮಿ
TV9 Web
| Edited By: |

Updated on: Jul 23, 2021 | 10:32 AM

Share

ರಾಮನಗರ: ಚಂದನವನದ ಭರವಸೆಯ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ವಿಭಿನ್ನ ವ್ಯಕ್ತಿತ್ವದಿಂದಾಗಿ ಹೆಸರಾದವರು. ಜನರೊಂದಿಗೆ ಬೆರೆತು ಸಂತಸವನ್ನು ಹಂಚಿಕೊಳ್ಳುವುದರಿಂದ ಅವರು ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಅದೇ ರೀತಿ ಇತ್ತೀಚೆಗೆ ಅವರು ಮಕ್ಕಳೊಂದಿಗೆ ಸ್ಟೆಪ್ ಹಾಕಿದ್ದು ಎಲ್ಲರ ಗಮನ ಸೆಳೆದಿದೆ. ಪ್ರಸ್ತುತ ರಾಮನಗರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಎ.ಆರ್​.ಕೆ.ಡಾನ್ಸ್ ಕ್ಲಾಸ್​ಗೆ ಭೇಟಿ ನೀಡಿದ್ದರು. ಆಗ ಅಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳ ಒತ್ತಾಯಕ್ಕೆ ಮಣಿದು ಭರ್ಜರಿ ಸ್ಟೆಪ್ ಹಾಕಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಹಾಗೂ ರಚಿತಾ ರಾಮ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ‘ನಿನ್ನ ರಾಜ ನಾನು, ನನ್ನ ರಾಣಿ ನೀನು’ ಹಾಡಿಗೆ ಮಕ್ಕಳನ್ನೂ ಸೇರಿಸಿಕೊಂಡು ನಿಖಿಲ್ ಕುಮಾರಸ್ವಾಮಿ ನೃತ್ಯ ಮಾಡಿದ್ದಾರೆ. ನಿಖಿಲ್​ಗೆ ಸಂತಸದಿಂದ ಸಾಥ್ ನೀಡಿರುವ ಮಕ್ಕಳು ತಾವೂ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ನಿಖಿಲ್ ಡಾನ್ಸ್​ಗೆ ನೆರೆದಿರುವವರಿಂದ ಭರ್ಜರಿ ಸಿಳ್ಳೆ, ಚಪ್ಪಾಳೆಗಳು ಬಿದ್ದಿವೆ. ನಟನೊಂದಿಗೆ ಹೆಜ್ಜೆ ಹಾಕಿರುವುದಕ್ಕೆ ಮಕ್ಕಳಿಗೂ ಬಹಳ ಖುಷಿಯಾಗಿದೆ.

ನಿಖಿಲ್ ನೃತ್ಯ ಮಾಡುತ್ತಿರುವ ಚಿತ್ರಗಳು ಇಲ್ಲಿವೆ:

Nikhil Kumaraswami

ಮಕ್ಕಳೊಂದಿಗೆ ‘ನಿನ್ನ ರಾಜ ನಾನು’ ಹಾಡಿಗೆ ಭರ್ಜರಿ ನೃತ್ಯ ಮಾಡುತ್ತಿರುವ ನಿಖಿಲ್

Nikhil Kumaraswamy

ನೃತ್ಯಕ್ಕೆ ಪ್ರೇಕ್ಷಕರಿಂದ ಬಹುಪರಾಕ್!

ಇದನ್ನೂ ಓದಿ: ವಿಲನ್​ ಆದ ಬಾಲಿವುಡ್​ ಹೀರೋ; ಒಂದೇ ದೃಶ್ಯಕ್ಕೆ 10 ಕೋಟಿ ರೂ. ಸುರಿಯಲಿರುವ ನಿರ್ಮಾಪಕರು

ಇದನ್ನೂ ಓದಿ: ‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು

(Nikhil Kumaraswamy dance with students in Ramanagara)

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?