AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಡಾನ್ಸ್!

Nikhil Kumaraswamy: ರಾಮನಗರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಟ ನಿಖಿಲ್ ಕುಮಾರಸ್ವಾಮಿ ಮಕ್ಕಳೊಂದಿಗೆ ನೃತ್ಯ ಮಾಡಿರುವುದು ಎಲ್ಲರ ಗಮನ ಸೆಳೆದಿದೆ.

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಡಾನ್ಸ್!
ನೃತ್ಯ ಮಾಡುತ್ತಿರುವ ನಿಖಿಲ್ ಕುಮಾರಸ್ವಾಮಿ
TV9 Web
| Updated By: shivaprasad.hs|

Updated on: Jul 23, 2021 | 10:32 AM

Share

ರಾಮನಗರ: ಚಂದನವನದ ಭರವಸೆಯ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ವಿಭಿನ್ನ ವ್ಯಕ್ತಿತ್ವದಿಂದಾಗಿ ಹೆಸರಾದವರು. ಜನರೊಂದಿಗೆ ಬೆರೆತು ಸಂತಸವನ್ನು ಹಂಚಿಕೊಳ್ಳುವುದರಿಂದ ಅವರು ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಅದೇ ರೀತಿ ಇತ್ತೀಚೆಗೆ ಅವರು ಮಕ್ಕಳೊಂದಿಗೆ ಸ್ಟೆಪ್ ಹಾಕಿದ್ದು ಎಲ್ಲರ ಗಮನ ಸೆಳೆದಿದೆ. ಪ್ರಸ್ತುತ ರಾಮನಗರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಎ.ಆರ್​.ಕೆ.ಡಾನ್ಸ್ ಕ್ಲಾಸ್​ಗೆ ಭೇಟಿ ನೀಡಿದ್ದರು. ಆಗ ಅಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳ ಒತ್ತಾಯಕ್ಕೆ ಮಣಿದು ಭರ್ಜರಿ ಸ್ಟೆಪ್ ಹಾಕಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಹಾಗೂ ರಚಿತಾ ರಾಮ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ‘ನಿನ್ನ ರಾಜ ನಾನು, ನನ್ನ ರಾಣಿ ನೀನು’ ಹಾಡಿಗೆ ಮಕ್ಕಳನ್ನೂ ಸೇರಿಸಿಕೊಂಡು ನಿಖಿಲ್ ಕುಮಾರಸ್ವಾಮಿ ನೃತ್ಯ ಮಾಡಿದ್ದಾರೆ. ನಿಖಿಲ್​ಗೆ ಸಂತಸದಿಂದ ಸಾಥ್ ನೀಡಿರುವ ಮಕ್ಕಳು ತಾವೂ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ನಿಖಿಲ್ ಡಾನ್ಸ್​ಗೆ ನೆರೆದಿರುವವರಿಂದ ಭರ್ಜರಿ ಸಿಳ್ಳೆ, ಚಪ್ಪಾಳೆಗಳು ಬಿದ್ದಿವೆ. ನಟನೊಂದಿಗೆ ಹೆಜ್ಜೆ ಹಾಕಿರುವುದಕ್ಕೆ ಮಕ್ಕಳಿಗೂ ಬಹಳ ಖುಷಿಯಾಗಿದೆ.

ನಿಖಿಲ್ ನೃತ್ಯ ಮಾಡುತ್ತಿರುವ ಚಿತ್ರಗಳು ಇಲ್ಲಿವೆ:

Nikhil Kumaraswami

ಮಕ್ಕಳೊಂದಿಗೆ ‘ನಿನ್ನ ರಾಜ ನಾನು’ ಹಾಡಿಗೆ ಭರ್ಜರಿ ನೃತ್ಯ ಮಾಡುತ್ತಿರುವ ನಿಖಿಲ್

Nikhil Kumaraswamy

ನೃತ್ಯಕ್ಕೆ ಪ್ರೇಕ್ಷಕರಿಂದ ಬಹುಪರಾಕ್!

ಇದನ್ನೂ ಓದಿ: ವಿಲನ್​ ಆದ ಬಾಲಿವುಡ್​ ಹೀರೋ; ಒಂದೇ ದೃಶ್ಯಕ್ಕೆ 10 ಕೋಟಿ ರೂ. ಸುರಿಯಲಿರುವ ನಿರ್ಮಾಪಕರು

ಇದನ್ನೂ ಓದಿ: ‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು

(Nikhil Kumaraswamy dance with students in Ramanagara)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ