AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅಖಾಡಕ್ಕೆ ಇಳಿಯೋದು ಪಕ್ಕಾ ಎನ್ನಲಾಗುತ್ತಿತ್ತು.ಆದರೆ ಇದೀಗ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದು ಅವರ ನಡೆ ಕುತೂಹಲ ಕೆರಳಿಸಿದೆ. ನಿಖಿಲ್ ಅವರು ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬಂದಿದ್ದು ಹೆಚ್​ಡಿಕೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿ ಯೋಗೇಶ್ವರ್ ಮನವೊಲಿಸಲು ಸಲಹೆ ನೀಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ
ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ
Sunil MH
| Edited By: |

Updated on: Oct 07, 2024 | 10:37 AM

Share

ರಾಮನಗರ, ಅ.07: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ (Channapatna By Election) ಕೌಂಟ್​ಡೌನ್​ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗೋಕೆ ಡಿಕೆ ಬ್ರದರ್ಸ್​, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೀತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರೋ ಇಬ್ಬರು, ನಾನಾ ತಂತ್ರಗಾರಿಕೆಯನ್ನೇ ಮಾಡ್ತಿದ್ದಾರೆ. ಇದೀಗ ಚನ್ನಪಟ್ಟಣ ಅಖಾಡಕ್ಕೆ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು ಜೆಡಿಎಸ್​ನಲ್ಲಿ ಭರ್ಜರಿ ತಯಾರಿ ಶುರುವಾಗಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸ್ಪರ್ಧೆಗೆ ಒತ್ತಡ ಹೆಚ್ಚಿದೆ.

ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಹೆಚ್​ಡಿ ಕುಮಾರಸ್ವಾಮಿಯವರು ಸಭೆ ನಡೆಸಿದ್ದು ಈ ವೇಳೆ ನಿಖಿಲ್ ಸ್ಪರ್ಧೆಗೆ ಕೂಗು ಕೇಳಿ ಬಂದಿದೆ. ನಿನ್ನೆ ಹೆಚ್​.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಿಖಿಲ್ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರು ಬಹಿರಂಗವಾಗಿ ಒತ್ತಡ ಹಾಕಿದ್ರು. ಹೀಗಾಗಿ ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಚರ್ಚೆ ಜೋರಾಗಿದೆ. ಮತ್ತೊಂದೆಡೆ HD ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಹೆಚ್​ಡಿಕೆ, ನಿಖಿಲ್​ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ರಾಧಾಮೋಹನ್​ ದಾಸ್ ಅವರು ಕ್ಷೇತ್ರದ ವಿಚಾರದಲ್ಲಿ ಗೊಂದಲವಿಲ್ಲ ಎಂದಿದ್ದಾರೆ.

ಪರಿಷತ್​ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಮನವೊಲಿಕೆ ಬಗ್ಗೆ ಚರ್ಚೆ ನಡೆದಿದೆ. JDS, ಬಿಜೆಪಿ ಒಟ್ಟಾಗಿ ಹೋದರೆ ಮಾತ್ರ ಕಾಂಗ್ರೆಸ್ ಸೋಲಿಸಬಹುದು. ಇಲ್ಲವಾದರೆ ಮತ ವಿಭಜನೆಯಾಗಿ ಕಾಂಗ್ರೆಸ್​​ ಲಾಭ ಪಡೆಯುತ್ತದೆ. ಸಿ.ಪಿ.ಯೋಗೇಶ್ವರ್​ ಮನವೊಲಿಸಲು H.D.ಕುಮಾರಸ್ವಾಮಿ ರಾಧಾಮೋಹನ್ ಅವರಿಗೆ ಸಲಹೆ ನೀಡಿದ್ದಾರೆ. ಹೀಗಾಗಿ‌‌‌ ಹೆಚ್​.ಡಿ.ಕುಮಾರಸ್ವಾಮಿ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಬಿಜೆಪಿ ಶಾಸಕರ ಬೆನ್ನು ಬಿದ್ದ ಕಾಂಗ್ರೆಸ್; ಬಿಜೆಪಿ ಶಾಸಕರ ಪ್ರಕರಣದ ಮಾಹಿತಿ ಕಲೆಹಾಕಲು ತಯಾರಿ

ಇನ್ನು ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಸಭೆ ಮಾಡಿದ ಹೆಚ್​ಡಿಕೆ, ದಲಿತಾಸ್ತ್ರವನ್ನೂ ಪ್ರಯೋಗಿಸಿದ್ರು, ದಲಿತ ಸಮುದಾಯದವರೇ ಕಾಂಗ್ರೆಸ್​ನವರನ್ನ ನಂಬಬೇಡಿ, ಮೋಸಗಾರರು ಅಂದ್ರು. ಕುಮಾರಸ್ವಾಮಿಗೆ ಎರಡೆರಡೂ ಟೆನ್ಷನ್ ಇದೆ. ಎನ್​ಡಿಎ ಅಭ್ಯರ್ಥಿಯ ಜೊತೆಗೆ ಮಗನ ರಾಜಕೀಯ ಭವಿಷ್ಯವೂ ಮುಖ್ಯ ಆಗಿದೆ. ಒಂದು ವೇಳೆ ಕ್ಷೇತ್ರ ಕೈ ತಪ್ಪಿದ್ರೆ ಚನ್ನಪಟ್ಟಣದಲ್ಲಿ ಹಿಡಿತ ಸಾಧಿಸೋಕೆ ಆಗಲ್ಲ, ಇನ್ನು ಜೆಡಿಎಸ್​ ಹಾಗೂ ಕಾಂಗ್ರೆಸ್​ಗೆ ನೇರಾ ನೇರ ಪೈಪೋಟಿ ಇರೋದ್ರಿಂದ ಸಿ.ಪಿ.ಯೋಗೇಶ್ವರ್​​ನ್ನೂ ಒಟ್ಟಾಗಿ ಕರೆದುಕೊಂಡು ಹೋಗೋದು ಸವಾಲು ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು