ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ

| Updated By: ಆಯೇಷಾ ಬಾನು

Updated on: Oct 07, 2024 | 10:37 AM

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅಖಾಡಕ್ಕೆ ಇಳಿಯೋದು ಪಕ್ಕಾ ಎನ್ನಲಾಗುತ್ತಿತ್ತು.ಆದರೆ ಇದೀಗ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದು ಅವರ ನಡೆ ಕುತೂಹಲ ಕೆರಳಿಸಿದೆ. ನಿಖಿಲ್ ಅವರು ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬಂದಿದ್ದು ಹೆಚ್​ಡಿಕೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿ ಯೋಗೇಶ್ವರ್ ಮನವೊಲಿಸಲು ಸಲಹೆ ನೀಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ? ಕುತೂಹಲ ಕೆರಳಿಸಿದ ಹೆಚ್​ಡಿ ಕುಮಾರಸ್ವಾಮಿ ನಡೆ
ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ
Follow us on

ರಾಮನಗರ, ಅ.07: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ (Channapatna By Election) ಕೌಂಟ್​ಡೌನ್​ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗೋಕೆ ಡಿಕೆ ಬ್ರದರ್ಸ್​, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೀತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರೋ ಇಬ್ಬರು, ನಾನಾ ತಂತ್ರಗಾರಿಕೆಯನ್ನೇ ಮಾಡ್ತಿದ್ದಾರೆ. ಇದೀಗ ಚನ್ನಪಟ್ಟಣ ಅಖಾಡಕ್ಕೆ ಹೆಚ್​ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು ಜೆಡಿಎಸ್​ನಲ್ಲಿ ಭರ್ಜರಿ ತಯಾರಿ ಶುರುವಾಗಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸ್ಪರ್ಧೆಗೆ ಒತ್ತಡ ಹೆಚ್ಚಿದೆ.

ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಹೆಚ್​ಡಿ ಕುಮಾರಸ್ವಾಮಿಯವರು ಸಭೆ ನಡೆಸಿದ್ದು ಈ ವೇಳೆ ನಿಖಿಲ್ ಸ್ಪರ್ಧೆಗೆ ಕೂಗು ಕೇಳಿ ಬಂದಿದೆ. ನಿನ್ನೆ ಹೆಚ್​.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಿಖಿಲ್ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರು ಬಹಿರಂಗವಾಗಿ ಒತ್ತಡ ಹಾಕಿದ್ರು. ಹೀಗಾಗಿ ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಚರ್ಚೆ ಜೋರಾಗಿದೆ. ಮತ್ತೊಂದೆಡೆ HD ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್​ ದಾಸ್​ ಅಗರ್ವಾಲ್ ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಹೆಚ್​ಡಿಕೆ, ನಿಖಿಲ್​ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ರಾಧಾಮೋಹನ್​ ದಾಸ್ ಅವರು ಕ್ಷೇತ್ರದ ವಿಚಾರದಲ್ಲಿ ಗೊಂದಲವಿಲ್ಲ ಎಂದಿದ್ದಾರೆ.

ಪರಿಷತ್​ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಮನವೊಲಿಕೆ ಬಗ್ಗೆ ಚರ್ಚೆ ನಡೆದಿದೆ. JDS, ಬಿಜೆಪಿ ಒಟ್ಟಾಗಿ ಹೋದರೆ ಮಾತ್ರ ಕಾಂಗ್ರೆಸ್ ಸೋಲಿಸಬಹುದು. ಇಲ್ಲವಾದರೆ ಮತ ವಿಭಜನೆಯಾಗಿ ಕಾಂಗ್ರೆಸ್​​ ಲಾಭ ಪಡೆಯುತ್ತದೆ. ಸಿ.ಪಿ.ಯೋಗೇಶ್ವರ್​ ಮನವೊಲಿಸಲು H.D.ಕುಮಾರಸ್ವಾಮಿ ರಾಧಾಮೋಹನ್ ಅವರಿಗೆ ಸಲಹೆ ನೀಡಿದ್ದಾರೆ. ಹೀಗಾಗಿ‌‌‌ ಹೆಚ್​.ಡಿ.ಕುಮಾರಸ್ವಾಮಿ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಬಿಜೆಪಿ ಶಾಸಕರ ಬೆನ್ನು ಬಿದ್ದ ಕಾಂಗ್ರೆಸ್; ಬಿಜೆಪಿ ಶಾಸಕರ ಪ್ರಕರಣದ ಮಾಹಿತಿ ಕಲೆಹಾಕಲು ತಯಾರಿ

ಇನ್ನು ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಸಭೆ ಮಾಡಿದ ಹೆಚ್​ಡಿಕೆ, ದಲಿತಾಸ್ತ್ರವನ್ನೂ ಪ್ರಯೋಗಿಸಿದ್ರು, ದಲಿತ ಸಮುದಾಯದವರೇ ಕಾಂಗ್ರೆಸ್​ನವರನ್ನ ನಂಬಬೇಡಿ, ಮೋಸಗಾರರು ಅಂದ್ರು. ಕುಮಾರಸ್ವಾಮಿಗೆ ಎರಡೆರಡೂ ಟೆನ್ಷನ್ ಇದೆ. ಎನ್​ಡಿಎ ಅಭ್ಯರ್ಥಿಯ ಜೊತೆಗೆ ಮಗನ ರಾಜಕೀಯ ಭವಿಷ್ಯವೂ ಮುಖ್ಯ ಆಗಿದೆ. ಒಂದು ವೇಳೆ ಕ್ಷೇತ್ರ ಕೈ ತಪ್ಪಿದ್ರೆ ಚನ್ನಪಟ್ಟಣದಲ್ಲಿ ಹಿಡಿತ ಸಾಧಿಸೋಕೆ ಆಗಲ್ಲ, ಇನ್ನು ಜೆಡಿಎಸ್​ ಹಾಗೂ ಕಾಂಗ್ರೆಸ್​ಗೆ ನೇರಾ ನೇರ ಪೈಪೋಟಿ ಇರೋದ್ರಿಂದ ಸಿ.ಪಿ.ಯೋಗೇಶ್ವರ್​​ನ್ನೂ ಒಟ್ಟಾಗಿ ಕರೆದುಕೊಂಡು ಹೋಗೋದು ಸವಾಲು ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ