AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿದಿದ್ದ ನಿಖಿಲ್ ಕುಮಾರಸ್ವಾಮಿ ಯೂಟರ್ನ್​

ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್​ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ಮಂಡ್ಯದಿಂದ ಸ್ಪರ್ಧೆ ಮಾಡಬೇಕು ಎನ್ನುವ ಭಾವನೆಯನ್ನು ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 5 ಲಕ್ಷಕ್ಕಿಂತ ಅಧಿಕ ಮತಗಳನ್ನ ಕೊಟ್ಟಿದ್ದರು. ಹಾಗಾಗಿ ಮಂಡ್ಯದ ಜನತೆಗೆ ನಾನು ಚಿರರುಣಿ. ಆದರೆ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿ ಮಾಡಲು ಹೋರಾಟ ಮಾಡಬೇಕಿದೆ ಎಂದು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿದಿದ್ದ ನಿಖಿಲ್ ಕುಮಾರಸ್ವಾಮಿ ಯೂಟರ್ನ್​
ನಿಖಿಲ್ ಕುಮಾರಸ್ವಾಮಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 16, 2024 | 4:32 PM

Share

ರಾಮನಗರ, ಫೆಬ್ರವರಿ 16: ಪ್ರತಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ (Mandya LokaSaba) ಇಂಡಿಯಾದಲ್ಲೇ ಅತೀ ಹೆಚ್ಚು ಹೈಪ್​ ಪಡೆದುಕೊಳ್ಳುತ್ತದೆ. ಈ ಬಾರಿ ಕೂಡ ಮತ್ತೆ ದೊಡ್ಡ ಮಟ್ಟದಲ್ಲಿ ಮಂಡ್ಯ ಕ್ಷೇತ್ರ ಚರ್ಚೆ ಆಗುತ್ತಿದೆ. ಹೀಗಾಗಿ ಮಂಡ್ಯ ಕ್ಷೇತ್ರದಿಂದ ಯಾರು ಕಣಕ್ಕಿಯುತ್ತಾರೆ ಎಂಬುವುದು ಕುತೂಹಲ ಮೂಡಿಸಿದೆ. ಸದ್ಯ ಈ ವಿಚಾರವಾಗಿ ಇತ್ತೀಚೆಗೆ ಜೆಡಿಎಸ್​ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾನು ಸ್ಪರ್ಧಿಸುವುದಿಲ್ಲ  ಎಂದು ಹೇಳಿದ್ದರು. ಆದರೆ ಇದೀಗ ನಾನು ಮಂಡ್ಯದಿಂದ ಸ್ಪರ್ಧಿಸಬೇಕೆಂದು ಒತ್ತಡ ಇದೆ. ನಮ್ಮ ಕಾರ್ಯಕರ್ತರು ತಮ್ಮ ಆಸೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ 5 ಲಕ್ಷಕ್ಕಿಂತ ಅಧಿಕ ಮತಗಳನ್ನ ಕೊಟ್ಟಿದ್ದರು. ಹಾಗಾಗಿ ಮಂಡ್ಯದ ಜನತೆಗೆ ನಾನು ಚಿರರುಣಿ. ನನ್ನ ಸ್ಪರ್ಧೆ ಬಗ್ಗೆ ಮುಂದೆ ಚರ್ಚೆ ಮಾಡೋಣ. ಮೋದಿ ಮತ್ತೊಮ್ಮೆ ಪ್ರಧಾನಿ ಮಾಡಲು ಹೋರಾಟ ಮಾಡಬೇಕಿದೆ. 28 ಕ್ಷೇತ್ರ ಗೆದ್ದು ಮೋದಿಗೆ ಉಡುಗೊರೆ ನೀಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಪಟ್ಟಿ ಬಿಡುಗಡೆ ಸಂಬಂಧ ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ. ನಾನೂ ಕೂಡ ದೆಹಲಿಗೆ ಹೋಗುತ್ತಿದ್ದೇನೆ. ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡುತ್ತೇವೆ.

ಇದನ್ನೂ ಓದಿ: ದೇವೇಗೌಡ್ರ ಸಭೆ ಅಂತ್ಯ: ಮಂಡ್ಯ ಜಿಡಿಎಸ್​ ಪಾಲು, ಅಭ್ಯರ್ಥಿ ಸಹ ಬಹುತೇಕ ಫೈನಲ್​!

ಹಳೇ ಮೈಸೂರು ಭಾಗದ ಎಲ್ಲಾ ಮುಖಂಡರನ್ನ ಕರೆದು ಸಭೆ ಮಾಡಿದ್ದೇನೆ. ಶೀಘ್ರದಲ್ಲೇ ಹಳೇ ಮೈಸೂರು ಭಾಗದ ಎಲ್ಲಾ ತಾಲೂಕುಗಳಿಗೂ ಪ್ರವಾಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ತಂತ್ರಗಾರಿಕೆ ಮಾಡುತ್ತೇವೆ ಎಂದಿದ್ದಾರೆ.

ಬಜೆಟ್ ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ ಎಂದ ನಿಖಿಲ್ 

ಸಿದ್ದರಾಮಯ್ಯ ಬಜೆಟ್​ನಲ್ಲಿ ರಾಮನಗರ ಜಿಲ್ಲೆ ಅಭಿವೃದ್ಧಿಗೆ‌ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡದ ವಿಚಾರವಾಗಿ ಮಾತನಾಡಿದ್ದು, ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರ ಖಜಾನೆಯಲ್ಲಿ ಹಣ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಸಿಲುಕಿಸಿದೆ. ಹಾಗಾಗಿ ಬಜೆಟ್ ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಅಭ್ಯರ್ಥಿ ಆಯ್ಕೆ ಕಸರತ್ತು: ನಿಖಿಲ್ ಮನವೋಲಿಸುವಂತೆ ನಾಯಕರ ಒತ್ತಾಯ

ರಾಮನಗರದಲ್ಲಿ ಹಿಂದಿನ ಶಾಸಕರು ನೀಡಿದ್ದ ಅನುದಾನವನ್ನೇ ಇಟ್ಟಕೊಂಡು ಈಗಿನ ಶಾಸಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಹೋರಾಟ ಮಾಡಿ ಯಾವುದೇ ಅನುದಾನ ತಂದಿಲ್ಲ. ರಾಮನಗರ ಜಿಲ್ಲೆ ಹಾಗು ತಾಲೂಕು ಅಭಿವೃದ್ಧಿ ಪೂರಕವಾಗಿ ಇಲ್ಲಿನ ಶಾಸಕರಾಗಲಿ ಕಾಂಗ್ರೆಸ್ ಪಕ್ಷವಾಗಲಿ ಇಲ್ಲ ಎಂಬುದು ಜನರ ಅಭಿಪ್ರಾಯವಾಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ