AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ, ಕನಕಪುರದಲ್ಲಿ ಮೆಡಿಕಲ್ ಕಾಲೇಜಿಗೆ ಅರ್ಜಿ ಹಾಕಿರೋದೇ ತಪ್ಪೆಂದ ಡಾ. ಮಂಜುನಾಥ್: ಕೊಟ್ಟ ಕಾರಣ ಇಲ್ಲಿದೆ

ರಾಮನಗರ, ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಪ್ರಸ್ತಾವನೆಯನ್ನು ಎನ್​ಎಂಸಿ ತಿರಸ್ಕರಿಸಿರುವುದು ಮತ್ತು ರಾಮನಗರ ಜಿಲ್ಲೆಯ ಮರುನಾಮಕರಣ ವಿಚಾರವಾಗಿ ತಮ್ಮ ವಿರುದ್ಧ ಟೀಕೆ ಮಾಡಿದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಟಾಂಗ್ ಕೊಟ್ಟಿದ್ದಾರೆ. ಮಂಜುನಾಥ್ ಹೇಳಿದ್ದೇನೆಂಬುದನ್ನು ತಿಳಿಯಲು ಮುಂದೆ ಓದಿ.

ರಾಮನಗರ, ಕನಕಪುರದಲ್ಲಿ ಮೆಡಿಕಲ್ ಕಾಲೇಜಿಗೆ ಅರ್ಜಿ ಹಾಕಿರೋದೇ ತಪ್ಪೆಂದ ಡಾ. ಮಂಜುನಾಥ್: ಕೊಟ್ಟ ಕಾರಣ ಇಲ್ಲಿದೆ
ಡಾ. ಸಿಎನ್ ಮಂಜುನಾಥ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Jul 13, 2024 | 3:43 PM

Share

ರಾಮನಗರ, ಜುಲೈ 13: ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿರಸ್ಕರಿಸಿರುವುದನ್ನು ಬಿಜೆಪಿ ಸಂಸದ, ಡಾ. ಸಿಎನ್ ಮಂಜುನಾಥ್ ಸಮರ್ಥಿಸಿಕೊಂಡಿದ್ದಾರೆ. ಈ ವಿಚಾರವಾಗಿ ರಾಮನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಡಿಕಲ್ ಕಾಲೇಜಿಗೆ ಅರ್ಜಿ ಸಲ್ಲಿಸಿರುವುದೇ ತಪ್ಪು. ಅಲ್ಲಿಗೆ 600 ಹಾಸಿಗೆಗಳ ಆಸ್ಪತ್ರೆ ಬೇಕಿತ್ತು. ಆಸ್ಪತ್ರೆಯನ್ನು ಕಟ್ಟಿಯೇ ಇಲ್ಲ. ಬೋಧಕರನ್ನು ನೇಮಕ ಮಾಡಬೇಕು. ಅದನ್ನೂ ಮಾಡಿಲ್ಲ. ಇಷ್ಟು ಮಾಡದೆ ಅರ್ಜಿ ಹಾಕುವುದೇ ತಪ್ಪು ಎಂದು ಹೇಳಿದರು.

ಮೂಲ ಸೌಕರ್ಯ ಯಾವುದೂ ಇಲ್ಲ. ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸದೇ ನಾವು ಲೋಕಸಭೆಯಲ್ಲಿ ಮಾತನಾಡಿದರೆ ಆಗುವುದಿಲ್ಲ. ಸುಮ್ಮನೇ, ‘ಇವರು ವೈದ್ಯರಾಗಿ ವಂಚಿಸುತ್ತಿದ್ದಾರೆ’ ಎಂದು ಆರೋಪಿಸುವುದರಲ್ಲಿ ಅರ್ಥವಿಲ್ಲ. ಇದು ರಾಜ್ಯ ಸರ್ಕಾರ ಪ್ರಮಾದ ಎಂದು ಮಂಜುನಾಥ್ ಸ್ಪಷ್ಟಪಡಿಸಿದರು.

ರಾಮನಗರಕ್ಕೆ ಮರು ನಾಮಕರಣ ಮಾಡುವ ಬಗ್ಗೆ ಹಾಸನದವರು ಮಾತ್ರ ವಿರೋಧ ಮಾಡುತ್ತಿದ್ದಾರೆ ಎಂಬ ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು 40 ವರ್ಷಗಳಿಂದ ಬೆಂಗಳೂರಿನಲ್ಲೇ ಇದ್ದೇವೆ. ಆಗ ಅವರೇ (ಬಾಲಕೃಷ್ಣ) ಬೆಂಗಳೂರಿನಲ್ಲಿ ಇರಲಿಲ್ಲ. ಹಿಂದೆ ರಾಮನಗರ ಜಿಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯೇ ಆಗಿತ್ತು ಅಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಒಂದು ಸರಿಯಾದ ಮೆಡಿಕಲ್ ಕಾಲೇಜು ಮಾಡಲು ಇವರಿಂದ ಆಗಿಲ್ಲ. ವೈದ್ಯರನ್ನು ನೇಮಕ ಮಾಡಲೂ ಆಗಿಲ್ಲ. ಮೊದಲು ಅದನ್ನ ಮಾಡಲಿ ಎಂದು ಬಾಲಕೃಷ್ಣಗೆ ಟಾಂಗ್ ನೀಡಿದರು.

ಇದನ್ನೂ ಓದಿ: ಕನಕಪುರ, ರಾಮನಗರಕ್ಕೆ ಇಲ್ಲ ಮೆಡಿಕಲ್‌ ಕಾಲೇಜು: ಪ್ರಸ್ತಾವನೆ ತಿರಸ್ಕರಿಸಿದ ಎನ್‌ಎಂಸಿ

ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ವಿಚಾರವಾಗಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ಇತ್ತೀಚೆಗೆ ತಿರಸ್ಕರಿಸಿತ್ತು. ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿತ್ತು. ಇದು ಡಿಸಿಎಂ ಡಿಕೆ ಶಿವಕುಮಾರ್​​ಗೆ ಹಿನ್ನಡೆ ಎಂದೇ ವಿಶ್ಲೇಷಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ