ರಾಮನಗರ, ಕನಕಪುರದಲ್ಲಿ ಮೆಡಿಕಲ್ ಕಾಲೇಜಿಗೆ ಅರ್ಜಿ ಹಾಕಿರೋದೇ ತಪ್ಪೆಂದ ಡಾ. ಮಂಜುನಾಥ್: ಕೊಟ್ಟ ಕಾರಣ ಇಲ್ಲಿದೆ

ರಾಮನಗರ, ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಪ್ರಸ್ತಾವನೆಯನ್ನು ಎನ್​ಎಂಸಿ ತಿರಸ್ಕರಿಸಿರುವುದು ಮತ್ತು ರಾಮನಗರ ಜಿಲ್ಲೆಯ ಮರುನಾಮಕರಣ ವಿಚಾರವಾಗಿ ತಮ್ಮ ವಿರುದ್ಧ ಟೀಕೆ ಮಾಡಿದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಟಾಂಗ್ ಕೊಟ್ಟಿದ್ದಾರೆ. ಮಂಜುನಾಥ್ ಹೇಳಿದ್ದೇನೆಂಬುದನ್ನು ತಿಳಿಯಲು ಮುಂದೆ ಓದಿ.

ರಾಮನಗರ, ಕನಕಪುರದಲ್ಲಿ ಮೆಡಿಕಲ್ ಕಾಲೇಜಿಗೆ ಅರ್ಜಿ ಹಾಕಿರೋದೇ ತಪ್ಪೆಂದ ಡಾ. ಮಂಜುನಾಥ್: ಕೊಟ್ಟ ಕಾರಣ ಇಲ್ಲಿದೆ
ಡಾ. ಸಿಎನ್ ಮಂಜುನಾಥ್
Edited By:

Updated on: Jul 13, 2024 | 3:43 PM

ರಾಮನಗರ, ಜುಲೈ 13: ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿರಸ್ಕರಿಸಿರುವುದನ್ನು ಬಿಜೆಪಿ ಸಂಸದ, ಡಾ. ಸಿಎನ್ ಮಂಜುನಾಥ್ ಸಮರ್ಥಿಸಿಕೊಂಡಿದ್ದಾರೆ. ಈ ವಿಚಾರವಾಗಿ ರಾಮನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಡಿಕಲ್ ಕಾಲೇಜಿಗೆ ಅರ್ಜಿ ಸಲ್ಲಿಸಿರುವುದೇ ತಪ್ಪು. ಅಲ್ಲಿಗೆ 600 ಹಾಸಿಗೆಗಳ ಆಸ್ಪತ್ರೆ ಬೇಕಿತ್ತು. ಆಸ್ಪತ್ರೆಯನ್ನು ಕಟ್ಟಿಯೇ ಇಲ್ಲ. ಬೋಧಕರನ್ನು ನೇಮಕ ಮಾಡಬೇಕು. ಅದನ್ನೂ ಮಾಡಿಲ್ಲ. ಇಷ್ಟು ಮಾಡದೆ ಅರ್ಜಿ ಹಾಕುವುದೇ ತಪ್ಪು ಎಂದು ಹೇಳಿದರು.

ಮೂಲ ಸೌಕರ್ಯ ಯಾವುದೂ ಇಲ್ಲ. ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸದೇ ನಾವು ಲೋಕಸಭೆಯಲ್ಲಿ ಮಾತನಾಡಿದರೆ ಆಗುವುದಿಲ್ಲ. ಸುಮ್ಮನೇ, ‘ಇವರು ವೈದ್ಯರಾಗಿ ವಂಚಿಸುತ್ತಿದ್ದಾರೆ’ ಎಂದು ಆರೋಪಿಸುವುದರಲ್ಲಿ ಅರ್ಥವಿಲ್ಲ. ಇದು ರಾಜ್ಯ ಸರ್ಕಾರ ಪ್ರಮಾದ ಎಂದು ಮಂಜುನಾಥ್ ಸ್ಪಷ್ಟಪಡಿಸಿದರು.

ರಾಮನಗರಕ್ಕೆ ಮರು ನಾಮಕರಣ ಮಾಡುವ ಬಗ್ಗೆ ಹಾಸನದವರು ಮಾತ್ರ ವಿರೋಧ ಮಾಡುತ್ತಿದ್ದಾರೆ ಎಂಬ ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು 40 ವರ್ಷಗಳಿಂದ ಬೆಂಗಳೂರಿನಲ್ಲೇ ಇದ್ದೇವೆ. ಆಗ ಅವರೇ (ಬಾಲಕೃಷ್ಣ) ಬೆಂಗಳೂರಿನಲ್ಲಿ ಇರಲಿಲ್ಲ. ಹಿಂದೆ ರಾಮನಗರ ಜಿಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯೇ ಆಗಿತ್ತು ಅಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಒಂದು ಸರಿಯಾದ ಮೆಡಿಕಲ್ ಕಾಲೇಜು ಮಾಡಲು ಇವರಿಂದ ಆಗಿಲ್ಲ. ವೈದ್ಯರನ್ನು ನೇಮಕ ಮಾಡಲೂ ಆಗಿಲ್ಲ. ಮೊದಲು ಅದನ್ನ ಮಾಡಲಿ ಎಂದು ಬಾಲಕೃಷ್ಣಗೆ ಟಾಂಗ್ ನೀಡಿದರು.

ಇದನ್ನೂ ಓದಿ: ಕನಕಪುರ, ರಾಮನಗರಕ್ಕೆ ಇಲ್ಲ ಮೆಡಿಕಲ್‌ ಕಾಲೇಜು: ಪ್ರಸ್ತಾವನೆ ತಿರಸ್ಕರಿಸಿದ ಎನ್‌ಎಂಸಿ

ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ವಿಚಾರವಾಗಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ಇತ್ತೀಚೆಗೆ ತಿರಸ್ಕರಿಸಿತ್ತು. ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿತ್ತು. ಇದು ಡಿಸಿಎಂ ಡಿಕೆ ಶಿವಕುಮಾರ್​​ಗೆ ಹಿನ್ನಡೆ ಎಂದೇ ವಿಶ್ಲೇಷಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us