AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ತಾಲೂಕಿನಲ್ಲಿ ಹಳ್ಳ ಹಿಡಿದಿದೆ ಹೈಟೆಕ್ ಖಾಸಗಿ ಬಸ್ ನಿಲ್ದಾಣ ಕಾಮಗಾರಿ

ರಾಮನಗರ: ಸಾರ್ವಜನಿಕರಿಗೆ ಅನುಕೂಲವಾಗಲಿ ಅಂತಾ ಆ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. ಆದ್ರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದು ಸಾರ್ವಜನಿಕರ ಕೋಪ ನೆತ್ತಿಗೆೇರುವಂತೆ ಮಾಡಿದೆ. ಮುಂದೆ ಸಾಗದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ! ರಾಷ್ಟೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಖಾಸಗಿ ಬಸ್ ನಿಲ್ಲಿಸುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ. ಇಲ್ಲಿ ಖಾಸಗಿ ಬಸ್‌ ನಿಲ್ದಾಣ ಇಲ್ಲದೆ ಇರೋದ್ರಿಂದ ಖಾಸಗಿ ಬಸ್‌ಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು […]

ಚನ್ನಪಟ್ಟಣ ತಾಲೂಕಿನಲ್ಲಿ ಹಳ್ಳ ಹಿಡಿದಿದೆ ಹೈಟೆಕ್ ಖಾಸಗಿ ಬಸ್ ನಿಲ್ದಾಣ ಕಾಮಗಾರಿ
ಸಾಧು ಶ್ರೀನಾಥ್​
|

Updated on: Jan 09, 2020 | 3:48 PM

Share

ರಾಮನಗರ: ಸಾರ್ವಜನಿಕರಿಗೆ ಅನುಕೂಲವಾಗಲಿ ಅಂತಾ ಆ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. ಆದ್ರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದು ಸಾರ್ವಜನಿಕರ ಕೋಪ ನೆತ್ತಿಗೆೇರುವಂತೆ ಮಾಡಿದೆ.

ಮುಂದೆ ಸಾಗದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ! ರಾಷ್ಟೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಖಾಸಗಿ ಬಸ್ ನಿಲ್ಲಿಸುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ. ಇಲ್ಲಿ ಖಾಸಗಿ ಬಸ್‌ ನಿಲ್ದಾಣ ಇಲ್ಲದೆ ಇರೋದ್ರಿಂದ ಖಾಸಗಿ ಬಸ್‌ಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು 7 ವರ್ಷಗಳ ಹಿಂದೆ ಆರಂಭವಾದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಅರ್ಧಕ್ಕೆ ನಿಂತಿದೆ. ಇದರಿಂದ ಬಸ್ ನಿಲ್ಲಿಸಲು ಜಾಗವಿಲ್ಲದೆ ನೂರಾರು ಖಾಸಗಿ ಬಸ್​ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗುತ್ತಿದೆ. ಅದರಲ್ಲೂ ವೀಕೆಂಡ್ ಹಾಗೂ ರಜೆ ದಿನಗಳಲ್ಲಿ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್​ ಜಾಮ್ ಉಂಟಾಗುತ್ತಿದೆ.

ಅಂದಹಾಗೇ ಐದು ಎಕರೆ ವಿಸ್ತೀರ್ಣದಲ್ಲಿ ಸುಮಾರು 33 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ 7 ಅಂತಸ್ತಿನ ಹಡಗು ಮಾದರಿಯ ಬಸ್ ನಿಲ್ದಾಣ ನಿರ್ಮಾಣ ಮಾಡಲು ತೀರ್ಮಾನಿಸಲಾಗಿತ್ತು. ಆದ್ರೆ ಶಂಕುಸ್ಥಾಪನೆ ನಡೆದು ಏಳು ವರ್ಷಗಳೇ ಕಳೆಯುತ್ತ ಬಂದ್ರು, ಬಸ್ ನಿಲ್ದಾಣದ ಕಾಮಗಾರಿ ಮಾತ್ರ ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ. ಕೇವಲ ಬಸ್ ನಿಲ್ದಾಣದ ಜಾಗದಲ್ಲಿ ಮಣ್ಣು ತೆಗೆದು, ಗುಂಡಿ ಮಾಡಿದ್ದಾರೆ. ಅದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಹೀಗಾಗಿ ಈ ಜಾಗ ಹಾಳು ಕೊಂಪೆಯಾಗಿದೆ. ಹೀಗಾಗಿ ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕು ಅನ್ನೋದು ಜನರ ಒತ್ತಾಯವಾಗಿದೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ