ಚನ್ನಪಟ್ಟಣ ತಾಲೂಕಿನಲ್ಲಿ ಹಳ್ಳ ಹಿಡಿದಿದೆ ಹೈಟೆಕ್ ಖಾಸಗಿ ಬಸ್ ನಿಲ್ದಾಣ ಕಾಮಗಾರಿ

ರಾಮನಗರ: ಸಾರ್ವಜನಿಕರಿಗೆ ಅನುಕೂಲವಾಗಲಿ ಅಂತಾ ಆ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. ಆದ್ರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದು ಸಾರ್ವಜನಿಕರ ಕೋಪ ನೆತ್ತಿಗೆೇರುವಂತೆ ಮಾಡಿದೆ. ಮುಂದೆ ಸಾಗದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ! ರಾಷ್ಟೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಖಾಸಗಿ ಬಸ್ ನಿಲ್ಲಿಸುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ. ಇಲ್ಲಿ ಖಾಸಗಿ ಬಸ್‌ ನಿಲ್ದಾಣ ಇಲ್ಲದೆ ಇರೋದ್ರಿಂದ ಖಾಸಗಿ ಬಸ್‌ಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು […]

ಚನ್ನಪಟ್ಟಣ ತಾಲೂಕಿನಲ್ಲಿ ಹಳ್ಳ ಹಿಡಿದಿದೆ ಹೈಟೆಕ್ ಖಾಸಗಿ ಬಸ್ ನಿಲ್ದಾಣ ಕಾಮಗಾರಿ
ಸಾಧು ಶ್ರೀನಾಥ್​

Updated on: Jan 09, 2020 | 3:48 PM

ರಾಮನಗರ: ಸಾರ್ವಜನಿಕರಿಗೆ ಅನುಕೂಲವಾಗಲಿ ಅಂತಾ ಆ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. ಆದ್ರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವರ್ಷಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದು ಸಾರ್ವಜನಿಕರ ಕೋಪ ನೆತ್ತಿಗೆೇರುವಂತೆ ಮಾಡಿದೆ.

ಮುಂದೆ ಸಾಗದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ!
ರಾಷ್ಟೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಖಾಸಗಿ ಬಸ್ ನಿಲ್ಲಿಸುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ. ಇಲ್ಲಿ ಖಾಸಗಿ ಬಸ್‌ ನಿಲ್ದಾಣ ಇಲ್ಲದೆ ಇರೋದ್ರಿಂದ ಖಾಸಗಿ ಬಸ್‌ಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು 7 ವರ್ಷಗಳ ಹಿಂದೆ ಆರಂಭವಾದ ಖಾಸಗಿ ಬಸ್ ನಿಲ್ದಾಣದ ಕಾಮಗಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಅರ್ಧಕ್ಕೆ ನಿಂತಿದೆ. ಇದರಿಂದ ಬಸ್ ನಿಲ್ಲಿಸಲು ಜಾಗವಿಲ್ಲದೆ ನೂರಾರು ಖಾಸಗಿ ಬಸ್​ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗುತ್ತಿದೆ. ಅದರಲ್ಲೂ ವೀಕೆಂಡ್ ಹಾಗೂ ರಜೆ ದಿನಗಳಲ್ಲಿ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್​ ಜಾಮ್ ಉಂಟಾಗುತ್ತಿದೆ.

ಅಂದಹಾಗೇ ಐದು ಎಕರೆ ವಿಸ್ತೀರ್ಣದಲ್ಲಿ ಸುಮಾರು 33 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ 7 ಅಂತಸ್ತಿನ ಹಡಗು ಮಾದರಿಯ ಬಸ್ ನಿಲ್ದಾಣ ನಿರ್ಮಾಣ ಮಾಡಲು ತೀರ್ಮಾನಿಸಲಾಗಿತ್ತು. ಆದ್ರೆ ಶಂಕುಸ್ಥಾಪನೆ ನಡೆದು ಏಳು ವರ್ಷಗಳೇ ಕಳೆಯುತ್ತ ಬಂದ್ರು, ಬಸ್ ನಿಲ್ದಾಣದ ಕಾಮಗಾರಿ ಮಾತ್ರ ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ. ಕೇವಲ ಬಸ್ ನಿಲ್ದಾಣದ ಜಾಗದಲ್ಲಿ ಮಣ್ಣು ತೆಗೆದು, ಗುಂಡಿ ಮಾಡಿದ್ದಾರೆ. ಅದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಹೀಗಾಗಿ ಈ ಜಾಗ ಹಾಳು ಕೊಂಪೆಯಾಗಿದೆ. ಹೀಗಾಗಿ ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕು ಅನ್ನೋದು ಜನರ ಒತ್ತಾಯವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us