ಆಪರೇಷನ್​ ಕಾಡಾನೆ ಸಕ್ಸಸ್​​, ಸಾಕಾನೆಗಳ ಸಹಾಯದಿಂದ ಒಂಟಿ ಸಲಗ ಸೆರೆ: ಲಾರಿಗೆ ಹತ್ತಿಸುವ ವೇಳೆ ಮುರಿದ ದಂತ

ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಅಮಾಯಕರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸಾಕಾನೆಗಳ ಸಹಾಯದಿಂದ ತೆಂಗಿನಕಲ್ಲು ಅರಣ್ಯ ‌ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಸೆರೆ ಹಿಡಿಯುವಲ್ಲಿ ಇಂದು ಯಶಸ್ವಿಯಾಗಿದ್ದಾರೆ.

Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 08, 2023 | 4:46 PM

ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ (Wild Elephant) ಹಾವಳಿ ಮಿತಿ ಮೀರಿದೆ. ಅದರಲ್ಲೂ ಚನ್ನಪಟ್ಟಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಬ್ಬರು ಅಮಾಯಕರನ್ನ ಕಾಡಾನೆಯೊಂದು ಬಲಿ ಪಡೆದಿತ್ತು. ಹಾಗಾಗಿ ಈ ಕಾಡಾನೆಯನ್ನು ಹಿಡಿಯಲೇಬೇಕು ಎಂದು ನಿರ್ಧರಿಸಿ, ಸಾಕಾನೆಗಳ ನೆರವಿನಿಂದ ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲಾಗಿದೆ. ಸೆರೆ ಹಿಡಿದ 40 ವರ್ಷದ ಗಂಡಾನೆಯನ್ನ ಲಾರಿಗೆ ಹತ್ತಿಸುವ ವೇಳೆ ಅದರ ದಂತ ಮುರಿದಿದೆ. ಕೋಪದಲ್ಲಿ ಕ್ರೇನ್​ಗೆ ಕಾಡಾನೆ ಗುದ್ದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ ತೆಂಗಿನಕಲ್ಲು ಅರಣ್ಯ ‌ಪ್ರದೇಶದಲ್ಲಿ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಇಂದು ಯಶಸ್ವಿಯಾಗಿದ್ದಾರೆ. ಸಾಕಾನೆಗಳಾದ ಅಭಿಮನ್ಯು, ಅರ್ಜುನ, ಭೀಮ, ಶ್ರೀಕಂಠ, ಮಹೇಂದ್ರ ಸಹಾಯದಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ಓದಿ: Ramanagara News: ಅಕಾಲಿಕ ಮಳೆಯಿಂದ ಮಾವು ಬೆಳೆ ನಾಶ; ಸಂಕಷ್ಟದಲ್ಲಿ ಬೆಳೆಗಾರರು

ಇಂದು ಬೆಳಗ್ಗೆ ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಕಾಡಾನೆ ಪತ್ತೆಯಾಗಿತ್ತು. ಹೀಗಾಗಿ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಲಾಯಿತು. ಆನಂತರ ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನ ಕ್ರೇನ್ ಸಹಾಯದಿಂದ ಲಾರಿಗೆ ಹತ್ತಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮುಂದಾಗಿದ್ರು. ಆದರೆ ಈ ವೇಳೆ ಸಾಕಷ್ಟು ವಿರೋಧ ವ್ಯಕ್ತಪಡಿಸಿತ್ತು.

ಅಲ್ಲದೆ ಇದರಿಂದ ಕೋಪಗೊಂಡ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿತ್ತು. ಅಲ್ದದೆ ಸಿಟ್ಟಿನಲ್ಲಿ ಕ್ರೇನ್​ಗೆ ಗುದ್ದಿತ್ತು. ಇದರಿಂದ ಆನೆಯ ದಂತವೇ ಮುರಿದು ಬಿದ್ದಿತ್ತು. ಆದರೂ ಸಹ ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನ ಲಾರಿಗೆ ಹತ್ತಿಸಲಾಯಿತು.

ಇದನ್ನೂ ಓದಿ: Storm Effect: ರಾಮನಗರದಲ್ಲಿ ಬಿರುಗಾಳಿ ಸಹಿತ‌ ಮಳೆಗೆ ಬೆಚ್ಚಿ ಬಿದ್ದ ಜನ; ವಿಡಿಯೋ ವೈರಲ್​

ಅಂದಹಾಗೆ ಕಾಡಾನೆ ದಾಳಿಗೆ ಐದು ದಿನಗಳ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದರು. ಮೇ 30ರಂದು ಕನಕಪುರ ತಾಲೂಕಿನ ಹೊಸಕಬ್ಬಾಳು ಗ್ರಾಮದ ಬಳಿ ಜಮೀನಿಗೆ ತೆರಳುತ್ತಿದ್ದ ಕಬ್ಬಾಳು ಗ್ರಾಮದ ಕಾಳಯ್ಯ(60) ಎಂಬಾತ ಬಲಿಯಾಗಿದ್ರೆ, ಜೂನ್ 3ರಂದು ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದ ಬಳಿ ಮಾವಿನ ತೋಟ ಕಾವಲು ಕಾಯುತ್ತಿದ್ದ, ಕನಕಪುರ ಮೂಲದ ವೀರಭದ್ರಯ್ಯ(56) ಎಂಬಾತನನ್ನು ಕಾಡಾನೆ ಬಲಿ ಪಡೆದಿತ್ತು.

ಹೀಗಾಗಿ ಐದು ಆನೆಗಳನ್ನ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ರು. ಒಂದು ಕಾಡಾನೆ ಸೆರೆಗೆ ಅನುಮತಿ ಸಿಕ್ಕಿತ್ತು. ಅದರಂತೆ ಇದೀಗ ಇಬ್ಬರನ್ನ ಬಲಿ ಪಡೆದ ಪುಂಡಾನೆ ಸೆರೆಯಾಗಿದ್ದು, ಉಳಿದ ನಾಲ್ಕು ಕಾಡಾನೆಗಳನ್ನ ಮತ್ತೆ ಎರಡು ದಿನಗಳ ನಂತರ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಪ್ಲಾನ್ ಮಾಡಿಕೊಂಡಿದ್ದಾರೆ.

ಇದೀಗ ಸೆರೆ ಸಿಕ್ಕಿರುವ ಕಾಡಾನೆಗೆ ರೇಡಿಯೋ ಕಾಲರ್ ಕೂಡ ಅಳವಡಿಸಿದ್ದು, ಅದರ ಚಲನ-ವಲನದ ಬಗ್ಗೆಯೂ ಕೂಡ ನಿಗಾ ಹಿಡಲು ಪ್ಲಾನ್ ಮಾಡಲಾಗಿದೆ. ಸದ್ಯ ಎಲ್ಲರ ನಿದ್ದೆಗೆಡಿಸಿದ ಕಾಡಾನೆಯ ಸೆರೆಯಿಂದ ಹತ್ತಾರು ಹಳ್ಳಿಯ ರೈತರು ಸದ್ಯದ ಮಟ್ಟಿಗೆ ನಿಟ್ಟಿಸಿರು ಬಿಟ್ಟಿದ್ದಾರೆ. ಉಳಿದ ಆನೆಗಳನ್ನು ಕೂಡ ಸೆರೆ ಹಿಡಿಯುವಂತೆ ಒತ್ತಾಯ ಮಾಡಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9 ರಾಮನಗರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:42 pm, Thu, 8 June 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ