AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಜಿಲ್ಲಾಸ್ಪತ್ರೆಯಲ್ಲಿ ಕೈಕೊಟ್ಟ ಡಯಾಲಿಸಿಸ್‌ ಯಂತ್ರಗಳು; ಚಿಕಿತ್ಸೆಗಾಗಿ ರೋಗಿಗಳ ಪರದಾಟ

ಆರು ಯಂತ್ರಗಳ ಪೈಕಿ ಮೂರ್ನಾಲ್ಕು ಯಂತ್ರಗಳು ತಿಂಗಳ ಹಿಂದೆ ಕೆಟ್ಟು ನಿಂತಿದ್ದು, ಅವುಗಳನ್ನು ದುರಸ್ತಿ ಮಾಡಿಸಲಾಗಿತ್ತು. ಕಳೆದ ತಿಂಗಳಷ್ಟೇ ಒಬ್ಬ ತಾಂತ್ರಿಕ ಸಿಬ್ಬಂದಿಯನ್ನು ಇಲಾಖೆ ಒದಗಿಸಿದೆ. ಆದರೆ ಅವರಿಗೆ ಈ ಯಂತ್ರಗಳ ನಿರ್ವಹಣೆ ಬಗ್ಗೆ ಗೊತ್ತಿಲ್ಲ.

ರಾಮನಗರ: ಜಿಲ್ಲಾಸ್ಪತ್ರೆಯಲ್ಲಿ ಕೈಕೊಟ್ಟ ಡಯಾಲಿಸಿಸ್‌ ಯಂತ್ರಗಳು; ಚಿಕಿತ್ಸೆಗಾಗಿ ರೋಗಿಗಳ ಪರದಾಟ
ರಾಮನಗರ ಜಿಲ್ಲಾಸ್ಪತ್ರೆ
TV9 Web
| Updated By: preethi shettigar|

Updated on: Aug 28, 2021 | 3:01 PM

Share

ರಾಮನಗರ: ಜಿಲ್ಲಾ ಆಸ್ಪತ್ರೆಯಲ್ಲಿರುವ ಡಯಾಲಿಸಿಸ್‌ ಯಂತ್ರಗಳು ಸಂಪೂರ್ಣ ಬಂದ್ ಆಗಿದ್ದು, ಇದನ್ನೇ ನಂಬಿಕೊಂಡ ರೋಗಿಗಳು ಪರದಾಡುವಂತ ಸ್ಥಿತಿ ರಾಮನಗರ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 6 ಡಯಾಲಿಸಿಸ್ ಯಂತ್ರಗಳಿವೆ. ರಾಮನಗರ ಜಿಲ್ಲೆಯ ವಿವಿಧ ಕಡೆಗಳಿಂದ ನಿರಂತರವಾಗಿ ಡಯಾಲಿಸಿಸ್‌ ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ಬಡ ರೋಗಿಗಳಿಗೆ ಈ ಯಂತ್ರಗಳೇ ಆರೋಗ್ಯ ಸಂಜೀವಿನಿಯಂತೆ ಕೆಲಸ ಮಾಡುತ್ತಿವೆ. ಹೀಗಿರುವಾಗ ಈ ಯಂತ್ರಗಳೆಲ್ಲ ಕಾರ್ಯ ಚಟುವಟಿಕೆ ನಿಲ್ಲಿಸಿದ್ದು ರೋಗಿಗಳ ಜೀವಕ್ಕೆ ಸಂಚಕಾರ ತಂದೊಡ್ಡಿದೆ.

ಸಮಸ್ಯೆ ಏನು? ಡಯಾಲಿಸಿಸ್‌ ಯಂತ್ರಗಳ ನಿರ್ವಹಣೆಗೆ ನುರಿತ ಸಿಬ್ಬಂದಿ ಇಲ್ಲದಿರುವುದೇ ಸಮಸ್ಯೆಗೆ ಪ್ರಮುಖ ಕಾರಣ. ರಾಜ್ಯದಾದ್ಯಂತ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಇರುವ ಯಂತ್ರಗಳ ನಿರ್ವಹಣೆಗೆ ರಾಜ್ಯ ಮಟ್ಟದಲ್ಲಿ ಟೆಂಡರ್‌ ಆಗಿತ್ತು. ಆದರೆ ಕೊವಿಡ್ ಹಿನ್ನೆಲೆಯಲ್ಲಿ ಸರ್ಕಾರ ಗುತ್ತಿಗೆದಾರರಿಗೆ ನೀಡಬೇಕಾದ 25 ರಿಂದ 30 ಕೋಟಿಯಷ್ಟು ಹಣವನ್ನು ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಈ ಯಂತ್ರಗಳ ನಿರ್ವಹಣೆಯನ್ನು ನಿಲ್ಲಿಸಿದ್ದಾರೆ. ಅಗತ್ಯ ತಾಂತ್ರಿಕ ಸಿಬ್ಬಂದಿಯ ಸೇವೆಯೂ ಕೂಡ ಈಗ ಬಂದ್‌ ಆಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ಆರು ಯಂತ್ರಗಳ ಪೈಕಿ ಮೂರ್ನಾಲ್ಕು ಯಂತ್ರಗಳು ತಿಂಗಳ ಹಿಂದೆ ಕೆಟ್ಟು ನಿಂತಿದ್ದು, ಅವುಗಳನ್ನು ದುರಸ್ತಿ ಮಾಡಿಸಲಾಗಿತ್ತು. ಕಳೆದ ತಿಂಗಳಷ್ಟೇ ಒಬ್ಬ ತಾಂತ್ರಿಕ ಸಿಬ್ಬಂದಿಯನ್ನು ಇಲಾಖೆ ಒದಗಿಸಿದೆ. ಆದರೆ ಅವರಿಗೆ ಈ ಯಂತ್ರಗಳ ನಿರ್ವಹಣೆ ಬಗ್ಗೆ ಗೊತ್ತಿಲ್ಲ. ಹೀಗಾಗಿ ಪದೇ ಪದೇ ಯಂತ್ರ ಕೈಕೊಡುತ್ತಿದೆ. ಈ ಡಯಾಲಿಸಿಸ್ ಯಂತ್ರಗಳನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಲಾಗಿದ್ದು, ಪ್ರತಿ 2 ರಿಂದ 3 ತಿಂಗಳಿಗೆ ಒಮ್ಮೆ ಸರ್ವಿಸ್ ಮಾಡುವುದು ಅತ್ಯಗತ್ಯವಾಗಿದೆ. ಇವುಗಳ ದುರಸ್ತಿಗೆ ಇದೀಗ 1.83 ಲಕ್ಷ ರೂ. ಮೊತ್ತದ ಪ್ರಸ್ತಾವ ಸಹ ಸಿದ್ಧಪಡಿಸಿ ಅಧಿಕಾರಿಗಳು ಕುಳಿತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ರಾಮನಗರ ಜಿಲ್ಲಾಸ್ಪತ್ರೆಗೆ ನಿತ್ಯ ಡಯಾಲಿಸಿಸ್‌ಗೆಂದು ಬಡ ರೋಗಿಗಳು ಬರುತ್ತಿದ್ದಾರೆ. ಆದರೆ ಕೆಲ ದಿನಗಳಿಂದ ಈ ಸೇವೆ ಸಂಪೂರ್ಣ ಬಂದ್ ಆಗಿದ್ದು, ಸಾಮಾನ್ಯ ಜನರು ಪರದಾಡುವಂತೆ ಆಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ, ಬಡರೋಗಿಗಳ ನೆರವಿಗೆ ಧಾವಿಸಬೇಕು ಎಂದು ರಾಮನಗರ ನಿವಾಸಿ ಸಿದ್ದರಾಜು ಒತ್ತಾಯಿಸಿದ್ದಾರೆ.

ರೋಗಿಗಳಿಗೆ ತೊಂದರೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದಲ್ಲಿ ನಿತ್ಯ ಸರಾಸರಿ 20 ರಿಂದ 25 ರೋಗಿಗಳಿಗೆ ಡಯಾಲಿಸಿಸ್ ಮಾಡಬಹುದಾಗಿದೆ. ಒಂದು ಯಂತ್ರದಲ್ಲಿ ಒಬ್ಬರಿಗೆ ಡಯಾಲಿಸಿಸ್ ಮಾಡಲು 4 ಗಂಟೆ ತಗುಲುತ್ತದೆ. ಈ ಲೆಕ್ಕದಲ್ಲಿ ಒಂದು ಯಂತ್ರದಲ್ಲಿ ನಿತ್ಯ ಮೂವರು ರೋಗಿಗಳಿಗೆ ಈ ಸೇವೆ ನೀಡಬಹುದಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಇಂತಹ ಆರು ಯಂತ್ರಗಳಿವೆ. ಸದ್ಯ ಈ ಯಂತ್ರಗಳು ಕೆಟ್ಟಿರುವ ಕಾರಣ ಚನ್ನಪಟ್ಟಣ, ಮಾಗಡಿ ತಾಲ್ಲೂಕು ಆಸ್ಪತ್ರೆಗಳಲ್ಲಿನ ಯಂತ್ರಗಳನ್ನು ತುರ್ತು ಬಳಕೆಗೆ ಬಳಸಿಕೊಳ್ಳಲಾಗುತ್ತದೆ.

ತಾಂತ್ರಿಕ ಕಾರಣಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆಯು ಸದ್ಯ ಸ್ಥಗಿತಗೊಂಡಿದೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಇನ್ನೆರಡು ದಿನದಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ಜಿಲ್ಲಾ ಸರ್ಜನ್ ಶಶಿಧರ್ ಮಾಹಿತಿ ನೀಡಿದ್ದಾರೆ.

ವರದಿ: ಪ್ರಶಾಂತ್ ಹುಲಿಕೆರೆ

ಇದನ್ನೂ ಓದಿ: 11 ತಿಂಗಳ ಮಗು ಮತ್ತು 11 ವರ್ಷದ ಬಾಲಕಿಗೆ ಕಂಡುಬಂದಿದ್ದ 2 ಅನ್ನನಾಳದ ಸಮಸ್ಯೆ; ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ, ಗುಣಮುಖ

ಕರ್ನಾಟಕಕ್ಕೆ ಹೆಚ್ಚು ಕೊವಿಡ್ ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಮನವಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?