AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಲೀಕ್: ಪೊಲೀಸ ವಶಕ್ಕೆ ಮಾಗಡಿ ಕೆಂಪೇಗೌಡ ಖಾಸಗಿ ಪ್ರೌಢ ಶಾಲೆಯ ಗುಮಾಸ್ತ

ಪರೀಕ್ಷೆಯ ದಿನ ಬೆಳಗ್ಗೆ ಅಂದರೆ ಏಪ್ರಿಲ್ 11ರಂದು 10:30 ಗಂಟೆಗೆ ರಂಗೇಗೌಡ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಶಾಲೆಯ ವಾಟ್ಸ್ಯಾಪ್ ಗ್ರೂಪ್ ಒಂದಕ್ಕೆ ಹರಿಬಿಟ್ಟಿದ್ದಾರೆ. ಈ ಗ್ರೂಪಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೂ ಇದ್ದಾರೆ.

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಲೀಕ್: ಪೊಲೀಸ ವಶಕ್ಕೆ ಮಾಗಡಿ ಕೆಂಪೇಗೌಡ ಖಾಸಗಿ ಪ್ರೌಢ ಶಾಲೆಯ ಗುಮಾಸ್ತ
ಮಾಗಡಿಯ ಕೆಂಪೇಗೌಡ ಪ್ರೌಢ ಶಾಲೆ
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: May 25, 2022 | 12:13 AM

Share

Ramanagara:  ರಾಮನಗರ ಜಿಲ್ಲೆ ಮಾಗಡಿ ಪಟ್ಟಣದಲ್ಲಿರುವ ಕೆಂಪೇಗೌಡ ಪ್ರೌಢ ಶಾಲೆಯಲ್ಲಿ (Kempegowda High School) ಈ ಬಾರಿಯ ಎಸ್ ಎಸ್ ಎಲ್ ಸಿ (SSLC) ಫಲಿತಾಂಶ ಶತ ಪ್ರತಿಶತ ಬಂದಿದೆ ಮಾರಾಯ್ರೇ. ಯಾಕೆ ಮತ್ತು ಹೇಗೆ ಗೊತ್ತಾ? ಈ ಖಾಸಗಿ ಪ್ರೌಢ ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುವ ರಂಗೇಗೌಡರು (Rangegowda) ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿದ್ದಾರೆ. ಕ್ಕರ್ಕ್ ರಂಗೇಗೌಡರನ್ನು ಮಾಗಡಿ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಸಾಯಂಕಾಲ ಬಂಧಿಸಿ ವಿಚಾರಣೆ ನಡೆಸಿದ್ದಾರೆ.  ರಾಮನಗರ ಜಿಲ್ಲೆ ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ಪ್ರಶ್ನೆ ಸೋರಿಕೆ ಬಗ್ಗೆ ಮಾಗಡಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ರಂಗೇಗೌಡರನ್ನು ಬಂಧಿಸಲಾಗಿದೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಗೌಡರು ವಿಜ್ಞಾನ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದರು.

Clerk Rangegowda

ಗುಮಾಸ್ತ ರಂಗೇಗೌಡ

ಪರೀಕ್ಷೆಯ ದಿನ ಬೆಳಗ್ಗೆ ಅಂದರೆ ಏಪ್ರಿಲ್ 11ರಂದು 10:30 ಗಂಟೆಗೆ ರಂಗೇಗೌಡ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಶಾಲೆಯ ವಾಟ್ಸ್ಯಾಪ್ ಗ್ರೂಪ್ ಒಂದಕ್ಕೆ ಹರಿಬಿಟ್ಟಿದ್ದಾರೆ. ಈ ಗ್ರೂಪಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೂ ಇದ್ದಾರೆ. ಗ್ರೂಪ್ ಹೆಸರು ಎಚ್ ಎಮ್ ಮಾಗಡಿ ಅಂತೆ. ಪರೀಕ್ಷೆ ಆರಂಭ ಆಗುತ್ತಿದ್ದಂತೆ ರಂಗೇಗೌಡರು ಪ್ರಶ್ನೆ ಪತ್ರಿಕೆಯನ್ನು ವಾಟ್ಸ್ಯಾಪ್ ಗ್ರೂಪ್ ಗೆ ಹಾಕಿದ್ದಾರೆ. ಬಯಲಿಗೆ ಬಂದಿರೋದು ಬರೀ ಒಂದು ವಿಷಯದ ಪ್ರಶ್ನೆ ಪತ್ರಿಕೆ ಮಾತ್ರ. ವಿಚಾರಣೆ ವೇಳೆ ಮತ್ಯಾವ ಸಂಗತಿಗಳು ಹೊರಬಿದ್ದಿವೆಯೋ?

ರಂಗೇಗೌಡರು ಪ್ರಶ್ನೆ ಪತ್ರಿಕೆಯನ್ನು ಎಚ್ ಎಮ್ ಕೂಡ ಇರುವ ವಾಟ್ಸ್ಯಾಪ್ ಗ್ರೂಪ್ ಗೆ ಕಳಿಸಿದ್ದಾರೆಂದರೆ, ಮುಖ್ಯೋಪಾಧ್ಯಾಯರೂ ಸೇರಿದಂತೆ ಶಾಲೆಯ ಉಳಿದ ಶಿಕ್ಷಕರು ಸಹ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ.

ಕಾದು ನೋಡಬೇಕಿರುವ ವಿಷಯವೇನೆಂದರೆ ಎಚ್ ಎಮ್ ಮತ್ತು ಮಿಕ್ಕಿದ ಗುರುವೃಂದದ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆಯೇ ಅನ್ನೋದು.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ