AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಲೀಕ್: ಪೊಲೀಸ ವಶಕ್ಕೆ ಮಾಗಡಿ ಕೆಂಪೇಗೌಡ ಖಾಸಗಿ ಪ್ರೌಢ ಶಾಲೆಯ ಗುಮಾಸ್ತ

ಪರೀಕ್ಷೆಯ ದಿನ ಬೆಳಗ್ಗೆ ಅಂದರೆ ಏಪ್ರಿಲ್ 11ರಂದು 10:30 ಗಂಟೆಗೆ ರಂಗೇಗೌಡ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಶಾಲೆಯ ವಾಟ್ಸ್ಯಾಪ್ ಗ್ರೂಪ್ ಒಂದಕ್ಕೆ ಹರಿಬಿಟ್ಟಿದ್ದಾರೆ. ಈ ಗ್ರೂಪಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೂ ಇದ್ದಾರೆ.

ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಲೀಕ್: ಪೊಲೀಸ ವಶಕ್ಕೆ ಮಾಗಡಿ ಕೆಂಪೇಗೌಡ ಖಾಸಗಿ ಪ್ರೌಢ ಶಾಲೆಯ ಗುಮಾಸ್ತ
ಮಾಗಡಿಯ ಕೆಂಪೇಗೌಡ ಪ್ರೌಢ ಶಾಲೆ
TV9 Web
| Edited By: |

Updated on: May 25, 2022 | 12:13 AM

Share

Ramanagara:  ರಾಮನಗರ ಜಿಲ್ಲೆ ಮಾಗಡಿ ಪಟ್ಟಣದಲ್ಲಿರುವ ಕೆಂಪೇಗೌಡ ಪ್ರೌಢ ಶಾಲೆಯಲ್ಲಿ (Kempegowda High School) ಈ ಬಾರಿಯ ಎಸ್ ಎಸ್ ಎಲ್ ಸಿ (SSLC) ಫಲಿತಾಂಶ ಶತ ಪ್ರತಿಶತ ಬಂದಿದೆ ಮಾರಾಯ್ರೇ. ಯಾಕೆ ಮತ್ತು ಹೇಗೆ ಗೊತ್ತಾ? ಈ ಖಾಸಗಿ ಪ್ರೌಢ ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುವ ರಂಗೇಗೌಡರು (Rangegowda) ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿದ್ದಾರೆ. ಕ್ಕರ್ಕ್ ರಂಗೇಗೌಡರನ್ನು ಮಾಗಡಿ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಸಾಯಂಕಾಲ ಬಂಧಿಸಿ ವಿಚಾರಣೆ ನಡೆಸಿದ್ದಾರೆ.  ರಾಮನಗರ ಜಿಲ್ಲೆ ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ಪ್ರಶ್ನೆ ಸೋರಿಕೆ ಬಗ್ಗೆ ಮಾಗಡಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ರಂಗೇಗೌಡರನ್ನು ಬಂಧಿಸಲಾಗಿದೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಗೌಡರು ವಿಜ್ಞಾನ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದರು.

Clerk Rangegowda

ಗುಮಾಸ್ತ ರಂಗೇಗೌಡ

ಪರೀಕ್ಷೆಯ ದಿನ ಬೆಳಗ್ಗೆ ಅಂದರೆ ಏಪ್ರಿಲ್ 11ರಂದು 10:30 ಗಂಟೆಗೆ ರಂಗೇಗೌಡ ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು ಶಾಲೆಯ ವಾಟ್ಸ್ಯಾಪ್ ಗ್ರೂಪ್ ಒಂದಕ್ಕೆ ಹರಿಬಿಟ್ಟಿದ್ದಾರೆ. ಈ ಗ್ರೂಪಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೂ ಇದ್ದಾರೆ. ಗ್ರೂಪ್ ಹೆಸರು ಎಚ್ ಎಮ್ ಮಾಗಡಿ ಅಂತೆ. ಪರೀಕ್ಷೆ ಆರಂಭ ಆಗುತ್ತಿದ್ದಂತೆ ರಂಗೇಗೌಡರು ಪ್ರಶ್ನೆ ಪತ್ರಿಕೆಯನ್ನು ವಾಟ್ಸ್ಯಾಪ್ ಗ್ರೂಪ್ ಗೆ ಹಾಕಿದ್ದಾರೆ. ಬಯಲಿಗೆ ಬಂದಿರೋದು ಬರೀ ಒಂದು ವಿಷಯದ ಪ್ರಶ್ನೆ ಪತ್ರಿಕೆ ಮಾತ್ರ. ವಿಚಾರಣೆ ವೇಳೆ ಮತ್ಯಾವ ಸಂಗತಿಗಳು ಹೊರಬಿದ್ದಿವೆಯೋ?

ರಂಗೇಗೌಡರು ಪ್ರಶ್ನೆ ಪತ್ರಿಕೆಯನ್ನು ಎಚ್ ಎಮ್ ಕೂಡ ಇರುವ ವಾಟ್ಸ್ಯಾಪ್ ಗ್ರೂಪ್ ಗೆ ಕಳಿಸಿದ್ದಾರೆಂದರೆ, ಮುಖ್ಯೋಪಾಧ್ಯಾಯರೂ ಸೇರಿದಂತೆ ಶಾಲೆಯ ಉಳಿದ ಶಿಕ್ಷಕರು ಸಹ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ.

ಕಾದು ನೋಡಬೇಕಿರುವ ವಿಷಯವೇನೆಂದರೆ ಎಚ್ ಎಮ್ ಮತ್ತು ಮಿಕ್ಕಿದ ಗುರುವೃಂದದ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆಯೇ ಅನ್ನೋದು.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ