Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Mysuru Highway: ಎಕ್ಸ್‌ಪ್ರೆಸ್‌ ವೇನಲ್ಲೂ ಶುರುವಾಯ್ತು ವ್ಹೀಲಿಂಗ್, ಪುಂಡರ ಹೆಡೆಮುರಿ ಕಟ್ಟಿದ ಪೊಲೀಸ್ರು

ಯುವಕರು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ವ್ಹೀಲಿಂಗ್ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Bengaluru Mysuru Highway: ಎಕ್ಸ್‌ಪ್ರೆಸ್‌ ವೇನಲ್ಲೂ ಶುರುವಾಯ್ತು ವ್ಹೀಲಿಂಗ್, ಪುಂಡರ ಹೆಡೆಮುರಿ ಕಟ್ಟಿದ ಪೊಲೀಸ್ರು
ವ್ಹೀಲಿಂಗ್ ಮಾಡುತ್ತಿರುವ ಬಂಧಿತ ಯುವಕ
Follow us
Jagadisha B
| Updated By: ಆಯೇಷಾ ಬಾನು

Updated on:Jul 07, 2023 | 10:16 AM

ರಾಮನಗರ: ಉದ್ಘಾಟನೆಯಾದ ಕೆಲವೇ ತಿಂಗಳಿಗೆ ಸಾವಿನ ಹೆದ್ದಾರಿ ಎಂಬ ಹಣೆಪಟ್ಟಿಯನ್ನು ಪಡೆದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ (Bengaluru-Mysuru highway) ಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚು. ಆದ್ರೆ ಇದೇ ಹೆದ್ದಾರಿಯಲ್ಲಿ ಸಾವಿನ ಜೊತೆ ಆಟ ಆಡುತ್ತ ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕರು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ವ್ಹೀಲಿಂಗ್ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೈರಲ್ ಆದ ವಿಡಿಯೋಗಳು ಸುಮಾರು 5-6 ತಿಂಗಳು ಹಳೆಯವು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಬಂಧಿತರಲ್ಲಿ ಒಬ್ಬ ಯುವಕ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ತನ್ನ ಗಾಡಿ ಮೇಲೆ ಯುವತಿಯೊಬ್ಬಳನ್ನು ಹಿಂದೆ ಕೂರಿಸಿಕೊಂಡು ವ್ಹೀಲಿಂಗ್ ಮಾಡಿದ್ದಾನೆ. ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿ, ಎಕ್ಸ್‌ಪ್ರೆಸ್‌ವೇನಲ್ಲಿ ಹುಡುಗಿಯನ್ನು ಹಿಂದೆ ಕೂಗಿಸಿಕೊಂಡು ವ್ಹೀಲಿಂಗ್ ಮಾಡುತ್ತಿದ್ದವನನ್ನು ಹಾಗೂ ಆತನ ಸ್ನೇಹಿತನನ್ನು ರಾಮನಗರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿವಿಧ ಆರೋಪಗಳಿಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ವೈರಲ್ ಆಗುತ್ತಿರುವ ವಿಡಿಯೋಗಳು 5-6 ತಿಂಗಳು ಹಳೆಯವು. ಎಸ್ಪಿ ರಾಮನಗರ ಮತ್ತು ಅವರ ತಂಡದ ಕ್ಷಿಪ್ರ ಕ್ರಮವನ್ನು ಶ್ಲಾಘಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Bengaluru-Mysore Expressway: ವಾಹನಗಳ ವೇಗಕ್ಕೆ ಬ್ರೇಕ್​​: ನಿಯಮ ಮುರಿದರೆ ದಂಡ ಅಷ್ಟೇ ಅಲ್ಲ, ಡ್ರೈವಿಂಗ್ ಲೈಸೆನ್ಸ್ ರದ್ದು

ಬುಧವಾರ 3rd eye ಎಂಬ ಚಾನೆಲ್​ನ ನಡೆಸುತ್ತಿರುವ ಯೂಟ್ಯೂಬರ್ ಕೂಡ ಬಂಧಿತನ ಸ್ಟಂಟ್‌ನ ವಿಡಿಯೋವನ್ನು ಹಂಚಿಕೊಂಡಿದ್ದು ಟ್ವೀಟ್ ಮಾಡಿದ್ದಾರೆ, ಎಕ್ಸ್‌ಪ್ರೆಸ್‌ವೇಯಲ್ಲಿ ರಾಂಗ್ ಸೈಡ್ ವೀಲಿಂಗ್ ಆಗಿದೆ. ಈ ವ್ಯಕ್ತಿ ಅನೇಕ ಬೈಕ್‌ಗಳಲ್ಲಿ ವೀಲಿಂಗ್ ಮಾಡುತ್ತಿರುವ ಹಲವಾರು ವೀಡಿಯೊಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಅವರ ವಿಡಿಯೊವೊಂದರಲ್ಲಿ, ಅವರು ಎಕ್ಸ್‌ಪ್ರೆಸ್‌ವೇಯಲ್ಲಿ ರಾಂಗ ರೋಟ್​ನಲ್ಲಿ ವೀಲಿಂಗ್‌ ಮಾಡುತ್ತಿರುವುದು ಕಂಡು ಬಂದಿದೆ. ರಾಮನಗರ ಪೊಲೀಸರು ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾದ ಬಳಿಕ ಈಗ ರಾಮನಗರ ಪೊಲೀಸರು ವೇಗ ತಪಾಸಣೆ ನಡೆಸುತ್ತಿದ್ದಾರೆ. ವೇಗದ ಲಿಮಿಟ್ ಕ್ರಾಸ್ ಮಾಡಿದ ವಾಹನ ಸವಾರರಿಗೆ 1000 ರೂ. ದಂಡ ಹಾಕುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:13 am, Fri, 7 July 23

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ