AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರ ಬಂಧನ; ಅಕ್ಕೂರು ಪೊಲೀಸರಿಂದ 4 ಬಂದೂಕು, 1 ಬೈಕ್ ಜಪ್ತಿ

ಚನ್ನಪಟ್ಟಣ ‌ತಾಲೂಕಿನ ಅಕ್ಕೂರು ಪೊಲೀಸರ ಕಾರ್ಯಾಚರಣೆ ವೇಳೆ ಅಕ್ರಮ ಬೆಳಕಿಗೆ ಬಂದಿದ್ದು, ಬಂಧಿತರಿಂದ 4 ಬಂದೂಕು, ಬಂದೂಕು ತಯಾರಿಸುವ ವಸ್ತುಗಳು ಮತ್ತು ಒಂದು ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರ ಬಂಧನ; ಅಕ್ಕೂರು ಪೊಲೀಸರಿಂದ 4 ಬಂದೂಕು, 1 ಬೈಕ್ ಜಪ್ತಿ
ಬಂಧಿತ ಆರೋಪಿಗಳು
TV9 Web
| Edited By: |

Updated on:Dec 19, 2021 | 9:55 AM

Share

ರಾಮನಗರ: ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ (Arrest) ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯಲ್ಲಿ ನಡೆದಿದೆ. ಅಂಬಾಡಹಳ್ಳಿ ಗ್ರಾಮದ ಶ್ರೀಧರ್, ಮಳವಳ್ಳಿ ತಾಲೂಕಿನ ಕುಂತೂರು ಗ್ರಾಮದ ರಮೇಶ್ ಬಂಧಿತ ಆರೋಪಿಗಳು. ಚನ್ನಪಟ್ಟಣ ‌ತಾಲೂಕಿನ ಅಕ್ಕೂರು ಪೊಲೀಸರ ಕಾರ್ಯಾಚರಣೆ ವೇಳೆ (Karnataka police) ಅಕ್ರಮ ಬೆಳಕಿಗೆ ಬಂದಿದ್ದು, ಬಂಧಿತರಿಂದ 4 ಬಂದೂಕು, ಬಂದೂಕು ತಯಾರಿಸುವ ವಸ್ತುಗಳು ಮತ್ತು ಒಂದು ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೋಲಾರ: ಮಚ್ಚಿನಿಂದ ಹೊಡೆದು ವ್ಯಕ್ತಿ ಹತ್ಯೆ; ಆರೋಪಿ ಪರಾರಿ ಮಚ್ಚಿನಿಂದ ಹೊಡೆದು ವ್ಯಕ್ತಿಯೊರ್ವರನ್ನು ಕೊಲೆ ಮಾಡಿ, ಆರೋಪಿ ಪರಾರಿಯಾದ ಘಟನೆ ಕೋಲಾರ ತಾಲೂಕಿನ ವೇಮಗಲ್‌ ಗ್ರಾಮದಲ್ಲಿ ನಡೆದಿದೆ. ವೇಮಗಲ್ ಗ್ರಾಮದ ಸಿ‌ ಬ್ಲಾಕ್ ನಿವಾಸಿ ವೆಂಕಟೇಶ್ ಅಲಿಯಾಸ್ ವೆಂಕಿ(33) ಕೊಲೆಯಾದ ವ್ಯಕ್ತಿ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ವೇಮಗಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬೆಂಗಳೂರು: ಕಾಟನ್ ಪೇಟೆಯ ರಸ್ತೆಯಲ್ಲಿ ಬೈಕ್ ಕಳ್ಳರ ಕೈಚಳಕ ಹಾಡಹಗಲೇ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹ್ಯಾಂಡಲ್ ಲಾಕ್ ಮುರಿದು ಕಳ್ಳರು ಬೈಕ್​ ಕದ್ದೊಯ್ದ ಘಟನೆ ಬೆಂಗಳೂರಿನ ಕಾಟನ್ ಪೇಟೆಯ 32 ನೇ ಕ್ರಾಸ್ ಜನನಿಬಿಡ ರಸ್ತೆಯಲ್ಲಿ ನಡೆದಿದೆ. ಪಲ್ಸರ್ ಬೈಕ್​ನಲ್ಲಿ ಬಂದ ಇಬ್ಬರು ಕಳ್ಳರು ಬೈಕ್ ಕಳವು ಮಾಡಿದ್ದಾರೆ. ಓರ್ವ ಹೊಂಚುಹಾಕಿ ಬೈಕ್ ಬಳಿ ಬಂದು ಸಿಗ್ನಲ್ ಮಾಡುತ್ತಿದ್ದಂತೆ ಮತ್ತೋರ್ವ ಸ್ಥಳಕ್ಕೆ ಬಂದಿದ್ದಾನೆ. ಇಬ್ಬರು ಫುಟ್ ಪಾತ್ ಮೇಲೆ ಕೆಲ‌ನಿಮಿಷ ಹೊಂಚುಹಾಕಿ ಬೈಕ್ ಹ್ಯಾಂಡಲ್ ಲಾಕ್ ಮುರಿದು, ಬೈಕ್​ ಜತೆ ಪರಾರಿಯಾಗಿದ್ದಾರೆ. ಸದ್ಯ ಈ ಎಲ್ಲಾ ದೃಶ್ಯ ಸಿಸಿ‌ ಕ್ಯಾಮಾರದಲ್ಲಿ ಸೆರೆಯಾಗಿದೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ: ತುರುವನೂರು ಪೊಲೀಸರಿಂದ ಐವರು ಡಕಾಯಿತರ ಬಂಧನ ಬಂಗಾರಕ್ಕನಹಳ್ಳಿಯಲ್ಲಿ ನಡೆದಿದ್ದ ಡಕಾಯಿತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುರುವನೂರು ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆರೋಪಿಗಳು 1 ಲಕ್ಷ ನಗದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪಾರಿಯಾಗಿದ್ದರು. ಬೆಂಗಳೂರು ಮೂಲದ ಅಭಿಷೇಕ್, ವಿಕಾಸ್, ವಜ್ರಮಣಿ, ಚಿಕ್ಕಗೊಂಡನಹಳ್ಳಿಯ ತಿಪ್ಪೇಸ್ವಾಮಿ, ಶಿವು ಬಂಧಿತ ಆರೋಪಿಗಳು.

ನೆಲಮಂಗಲ: ಚಿಕ್ಕಬಾಣಾವರ ಬಳಿಯ ಎಜಿಬಿ ಲೇಔಟ್‌ನಲ್ಲಿ ಬೈಕ್ ಕಳ್ಳತನ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ಬಳಿಯ ಎಜಿಬಿ ಲೇಔಟ್​ನಲ್ಲಿ ರಾಯಲ್ ಎನ್ಫೀಲ್ಡ್  ಬೈಕ್​ ಕಳುವಾಗಿದೆ. ಕೇರಳ ಮೂಲದ ವಿಧ್ಯಾರ್ಥಿ ಮಹಮ್ಮದ್ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಬೈಕ್ ಕಳಕೊಂಡು ವಿದ್ಯಾರ್ಥಿ ಕಂಗಾಲಾಗಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಯಾದಗಿರಿಯಲ್ಲಿ ಅಕ್ರಮವಾಗಿ ಮಾರಲು ಮುಂದಾಗಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಜಪ್ತಿ

ಗೆಳತಿ ಮನೆಯಲ್ಲಿ ಕಳ್ಳತನ; ಬಟ್ಟೆ ಬದಲಿಸುವ ನೆಪದಲ್ಲಿ ಚಿನ್ನಾಭರಣ ಹೊತ್ತು ಪರಾರಿ

Published On - 9:35 am, Sun, 19 December 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ