Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಇನ್ನಷ್ಟು ಬ್ಲ್ಯಾಕ್​ಮೇಲ್ ವಿಡಿಯೊ ಇರಬಹುದಾದ ಶಂಕೆ, ಆರೋಪಿಗಳನ್ನು ವಶಕ್ಕೆ ಕೇಳಲು ಪೊಲೀಸರ ಸಿದ್ಧತೆ

ನೀಲಾಂಬಿಕೆ ಚಿಕ್ಕವಯಸ್ಸಿನಿಂದಲೂ ಸಿದ್ದಗಂಗಾ ಮಠದ ಜೊತೆ ಒಡನಾಟ ಇಟ್ಟುಕೊಂಡಿದ್ದರು. ಸಿದ್ದಗಂಗಾ ಮಠಕ್ಕೆ ಬರುವ ಹಲವು ಸ್ವಾಮೀಜಿಗಳನ್ನ ಪರಿಚಯ ಮಾಡಿಕೊಂಡಿದ್ದರು.

ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಇನ್ನಷ್ಟು ಬ್ಲ್ಯಾಕ್​ಮೇಲ್ ವಿಡಿಯೊ ಇರಬಹುದಾದ ಶಂಕೆ, ಆರೋಪಿಗಳನ್ನು ವಶಕ್ಕೆ ಕೇಳಲು ಪೊಲೀಸರ ಸಿದ್ಧತೆ
ಆರೋಪಿ ನೀಲಾಂಬಿಕೆ (ಎಡಚಿತ್ರ), ಮೃತ ಬಸವಲಿಂಗ ಸ್ವಾಮೀಜಿ ಮತ್ತು ಆರೋಪಿ ಮೃತ್ಯುಂಜಯ ಸ್ವಾಮೀಜಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 31, 2022 | 11:28 AM

ರಾಮನಗರ: ತಾಲ್ಲೂಕಿನ ಕಂಚುಗಲ್​ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರು ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಹನಿಟ್ರ್ಯಾಪ್ ಸಂಚು ರೂಪಿಸಿದ ಮುಖ್ಯ ಆರೋಪಿ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ, ನಿವೃತ್ತ ಶಿಕ್ಷಕ ಹಾಗೂ ವಕೀಲ ಮಹದೇವಯ್ಯ, ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಯುವತಿ ದೊಡ್ಡಬಳ್ಳಾಪುರದ ನೀಲಾಂಬಿಕೆ (ಚಂದು) ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಲು ರಾಮನಗರ ಪೊಲೀಸರು ನಿರ್ಧರಿಸಿದ್ದಾರೆ. ಮೂವರೂ ಆರೋಪಿಗಳನ್ನು ಕಸ್ಟಡಿಗೆ ಪಡೆದುಕೊಳ್ಳಲು ನ್ಯಾಯಾಧೀಶರಿಗೆ ಪೊಲೀಸರು ಮನವಿ ಮಾಡಲಿದ್ದಾರೆ.

ಪ್ರಸ್ತುತ ಈ ಮೂವರೂ ಆರೋಪಿಗಳಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಮೃತ್ಯುಂಜಯ ಸ್ವಾಮೀಜಿ ಹಾಗೂ ಮಹದೇವಯ್ಯ ಅವರನ್ನು ‌ರಾಮನಗರ ಜೈಲಿಗೆ ಸ್ಥಳಾಂತರಿಸಲಾಗಿದೆ. ನೀಲಾಂಬಿಕೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ನ್ಯಾಯಾಲಯವು ಈ ಆರೋಪಿಗಳನ್ನು ಪೊಲೀಸರ ವಶಕ್ಕೆ ಕೊಟ್ಟು, ಪೊಲೀಸ್ ವಿಚಾರಣೆ ಮುಂದುವರಿದರೆ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ನಡೆಯುತ್ತಿರುವಾಗ ಯಾವ ಕೇಸ್ ಬಗ್ಗೆಯೂ ನಾನು ಮಾತನಾಡುವುದಿಲ್ಲ. ತನಿಖೆಯ ಬಗ್ಗೆ ಗೌಪ್ಯತೆ ಏನೂ ಇಲ್ಲ’ ಎಂದರು.

ಮತ್ತಷ್ಟು ಹನಿಟ್ರ್ಯಾಪ್ ಸಾಧ್ಯತೆ

ಬಂಡೇಮಠದ ಬಸವಲಿಂಗ ‌ಸ್ವಾಮೀಜಿ‌ ಆತ್ಮಹತ್ಯೆಗೆ ಕಾರಣವಾದ ಬ್ಲ್ಯಾಕ್​ಮೇಲ್ ‌ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಆರೋಪಿಗಳು ರೂಪಿಸಿರುವ ಸಂಚಿನ ವಿವರಗಳನ್ನು ಒಂದೊಂದಾಗಿ ಅರಿಯುತ್ತಿದ್ದಾರೆ. ಈ ವೇಳೆ ನೀಲಾಂಬಿಕೆ ಮತ್ತು ಇತರರು ಇನ್ನಷ್ಟು ಸನ್ಯಾಸಿಗಳನ್ನು ಇದೇ ರೀತಿ ಹನಿಟ್ರ್ಯಾಪ್​ ಬಲೆಗೆ ಕೆಡವಿರುವ ಸಂಗತಿ ಬೆಳಕಿಗೆ ಬಂದಿದೆ. ಆರೋಪಿ ನೀಲಾಂಬಿಕೆ ಹಲವು ಸ್ವಾಮೀಜಿಗಳ ಜೊತೆ ಅನ್ಯೋನ್ಯವಾಗಿದ್ದರು. ದೊಡ್ಡಬಳ್ಳಾಪುರದ ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ನೀಲಾಂಬಿಕೆ, ಚಿಕ್ಕವಯಸ್ಸಿನಿಂದಲೂ ಸಿದ್ದಗಂಗಾ ಮಠದ ಜೊತೆ ಒಡನಾಟ ಇಟ್ಟುಕೊಂಡಿದ್ದರು. ಸಿದ್ದಗಂಗಾ ಮಠಕ್ಕೆ ಬರುವ ಹಲವು ಸ್ವಾಮೀಜಿಗಳನ್ನ ಪರಿಚಯ ಮಾಡಿಕೊಂಡಿದ್ದರು.

ನೀಲಾಂಬಿಕೆಯ ಮಾವ ಸಿದ್ದಗಂಗಾ ‌ಮಠದಲ್ಲಿ‌ ಕೆಲಸ ಮಾಡುತ್ತಿದ್ದ ಕಾರಣ ಮಠಕ್ಕೆ ಹೋಗಿ-ಬಂದು ಮಾಡುವುದು ಸುಲಭವಾಗಿತ್ತು. ತನ್ನೊಂದಿಗೆ ಸಲುಗೆಯಿಂದ ಇದ್ದ ಮತ್ತಷ್ಟು ಸ್ವಾಮೀಜಿಗಳ ವಿಡಿಯೊ ಮಾಡಿ ಕಣ್ಣೂರು ಶ್ರೀಗಳಿಗೆ ಈಕೆ ಕೊಟ್ಟಿರಬಹುದು ಎಂದು ಶಂಕಿಸಲಾಗಿದೆ. ಇದೇ ರೀತಿಯ ವಿಡಿಯೊಗಳನ್ನು ಕೈಲಿಟ್ಟುಕೊಂಡು ಇನ್ನಷ್ಟು ಸ್ವಾಮಿಗಳನ್ನು ಈ ತಂಡ ಬ್ಲ್ಯಾಕ್​ಮೇಲ್ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ನಿಟ್ಟಿನಲ್ಲಿಯೂ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಬಂಡೇಮಠ ಸ್ವಾಮೀಜಿ ಆತ್ಮಹತ್ಯೆ: ಹನಿಟ್ರ್ಯಾಪ್ ಬಲೆ ಬೀಸಿದ್ದ ಯುವತಿಯೊಂದಿಗೆ ಕಣ್ಣೂರು ಮಠದ ಸ್ವಾಮೀಜಿ, ವಕೀಲ ಬಂಧನ

Published On - 11:21 am, Mon, 31 October 22

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ