AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಪೋಷಕರು ಕೆಲಸಕ್ಕೆ ಬಾರದಿದ್ದಕ್ಕೆ ಮಗಳಿಗೆ ನಾಯಿ ಛೂ ಬಿಟ್ಟ ಮಾಲೀಕ, ಯುವತಿ ಗುಪ್ತಾಂಗಕ್ಕೆ ಗಾಯ

ಪೋಷಕರು ಮನೆಗೆ ಕೆಲಸಕ್ಕೆ ಬರುತ್ತಿಲ್ಲವೆಂಬ ಕೋಪಕ್ಕೆ ಅವರ ಮಗಳ ಮೇಲೆ ನಾಯಿ ಛೂ ಬಿಟ್ಟ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕ ಸೋಲೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಯುವತಿಯ ಗುಪ್ತಾಂಗ ಹಾಗೂ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನಗರ: ಪೋಷಕರು ಕೆಲಸಕ್ಕೆ ಬಾರದಿದ್ದಕ್ಕೆ ಮಗಳಿಗೆ ನಾಯಿ ಛೂ ಬಿಟ್ಟ ಮಾಲೀಕ, ಯುವತಿ ಗುಪ್ತಾಂಗಕ್ಕೆ ಗಾಯ
ರಾಮನಗರದಲ್ಲಿ ಯುವತಿ ಮೇಲೆ ನಾಯಿ ದಾಳಿ ನಡೆಸಿದ ಮಾಲೀಕ ಪೊಲೀಸರ ವಶಕ್ಕೆ (ಸಾಂದರ್ಭಿಕ ಚಿತ್ರ)Image Credit source: hawklawfirm
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: Rakesh Nayak Manchi|

Updated on: Oct 15, 2023 | 1:28 PM

Share

ರಾಮನಗರ, ಅ.15: ಪೋಷಕರು ಮನೆಗೆ ಕೆಲಸಕ್ಕೆ ಬರುತ್ತಿಲ್ಲವೆಂಬ ಕೋಪಕ್ಕೆ ಅವರ ಮಗಳ ಮೇಲೆ ನಾಯಿ ಛೂ ಬಿಟ್ಟ ಘಟನೆ ರಾಮನಗರ (Ramanagara) ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕ ಸೋಲೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಯುವತಿಯ ಗುಪ್ತಾಂಗ ಹಾಗೂ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಳಿ ಫಾರ್ಮ್ ಮಾಲಿಕ ನಾಗರಾಜು ಎಂಬಾತನ ಮೆನೆಗೆ ಸುರೇಶ್ ಹಾಗೂ ಲೀಲಾವತಿ ದಂಪತಿ ಕೆಲಸಕ್ಕೆ ಹೋಗುತ್ತಿದ್ದರು. ಕೆಲ ದಿನಗಳಿಂದ ಕೆಲಸಕ್ಕೆ ಬಾರದೆ ಬೇರೆಡೆ ಕೆಲಸಕ್ಕೆ ತೆರಳುತ್ತಿದ್ದರು. ಕೆಲಸಕ್ಕೆ ಬರುವಂತೆ ಕೇಳಿಕೊಂಡರೂ ದಂಪತಿ ಬರುತ್ತಿರಲಿಲ್ಲ. ಇದು ನಾಗರಾಜು ಕೋಪಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ರಾಮನಗರ: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ, ತಪ್ಪಿಸಿಕೊಳ್ಳುವ ಭರದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ದಂಪತಿ ಮೇಲಿನ ಕೋಪವನ್ನು ಅವರ ಮಗಳ ಮೇಲೆ ನಾಗರಾಜ್ ತೀರಿಸಿದ ಆರೋಪ ಕೇಳಿಬಂದಿದೆ. ಶಾಲೆಯಿಂದ ಬರುತ್ತಿದ್ದ ವೀಣಾ ಮೇಲೆ ನಾಯಿ ಛೂ ಬಿಟ್ಟಿದ್ದು, ಈ ವೇಳೆ ವೀಣಾ ಚೀರಿಕೊಂಡಿದ್ದಾಳೆ. ಕೂಡಲೇ ದಾವಿಸಿದ ಪೋಷಕರು ವೀಣಾಳನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಾಯಿ ದಾಳಿಯಿಂದ ಯುವತಿಯ ಗುಪ್ತಾಂಗ ಹಾಗೂ ಕಾಲಿನ ಭಾಗಕ್ಕೆ ಗಾಯಗಳಾಗಿವೆ. ಕೆಲಸಕ್ಕೆ ಬಾರದಿದ್ದಕ್ಕೆ ಕೃತ್ಯ ಮಾಡಿದ್ದಾಗಿ ನಾಗರಾಜು ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಅ.6 ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಯುವತಿಯ ತಂದೆ ಆನಂದ್ ಕುಮಾರ್ ಕುದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನಾಗರಾಜುನನ್ನು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ