AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಚಾಮುಂಡೇಶ್ವರಿ ಕರಗಕ್ಕೆ ಸಿದ್ಧತೆ; ಡಿಸಿಎಂ ಸಿಎಂ ಆಗಲಿ ಎಂದು ಶಕ್ತಿ ದೇವತೆಗೆ ಶಾಸಕನ ಹರಕೆ

ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನಾಡಹಬ್ಬದಂತೆ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಾಡಲು ಮುಂದಾಗಿದ್ದು ಭರ್ಜರಿ ಸಿದ್ಧತೆ ನಡೆದಿದೆ. ಇನ್ನು ಡಿಸಿಎಂ ಸಾಹೇಬ್ರು ಆದಷ್ಟು ಬೇಗ ಸಿಎಂ ಆಗಲಿ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಶಕ್ತಿ ದೇವತೆಗೆ ಹರಕೆ ಕಟ್ಟಿದ್ದಾರೆ.

ರಾಮನಗರ ಚಾಮುಂಡೇಶ್ವರಿ ಕರಗಕ್ಕೆ ಸಿದ್ಧತೆ; ಡಿಸಿಎಂ ಸಿಎಂ ಆಗಲಿ ಎಂದು ಶಕ್ತಿ ದೇವತೆಗೆ ಶಾಸಕನ ಹರಕೆ
12 ದೇವಸ್ಥಾನಕ್ಕೆ ಶಾಸಕ ಇಕ್ಬಾಲ್ ಹುಸೇನ್ ಮಡಿಲಕ್ಕಿ ಸಮರ್ಪಣೆ
ಪ್ರಶಾಂತ್​ ಬಿ.
| Edited By: |

Updated on: Jul 22, 2024 | 10:14 AM

Share

ರಾಮನಗರ, ಜುಲೈ.22: ಕಾಂಗ್ರೆಸ್ ಮುಸ್ಲಿಂ ಶಾಸಕ ಇಕ್ಬಾಲ್ ಹುಸೇನ್ (H. A. Iqbal Hussain) ಅವರಿಂದ ರಾಮನಗರದಲ್ಲಿ ಅದ್ದೂರಿ ಚಾಮುಂಡೇಶ್ವರಿ ಕರಗ (Ramanagara Chamundeshwari Karaga) ಮಹೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಇಡೀ ರಾಮನಗರ ಮದುವಣಗಿತ್ತಿಯಂತೆ‌ ಸಿಂಗಾರಗೊಂಡಿದೆ. 12 ದೇವಸ್ಥಾನಕ್ಕೆ ಶಾಸಕ ಇಕ್ಬಾಲ್ ಹುಸೇನ್ ಮಡಿಲಕ್ಕಿ ಸಮರ್ಪಣೆ ಮಾಡುವ ಮುಖಾಂತರ ಕರಗಕ್ಕೆ ಚಾಲನೆ ನೀಡಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಬಹುಬೇಗ ಸಿಎಂ ಆಗುವಂತೆ ಶಕ್ತಿ ದೇವತೆ ಬಳಿ ಶಾಸಕ ಇಕ್ಬಾಲ್ ಹುಸೇನ್ ಹರಕೆಯೂ ಹೊತ್ತಿದ್ದಾರೆ.

ಇನ್ನು ಈ ವೇಳೆ ಮಾತನಾಡಿದ ಇಕ್ಬಾಲ್ ಹುಸೇನ್, ರಾಮನಗರದಲ್ಲಿ ಶಕ್ತಿದೇವತೆಯ ಆರಾಧನೆ ನಡೆದಿದೆ. ಇದು ಎಲ್ಲಾ ಧರ್ಮಗಳಿಗೂ ಶಾಂತಿ ಸಂದೇಶ ಸಾರುವ ಹಬ್ಬ. ಸರ್ವ ಧರ್ಮದವರು ಸೇರಿ ಕರಗ ಮಹೋತ್ಸವವನ್ನು ಮಾಡ್ತೇವೆ. ಈ ಮೂಲಕ ನಾವು ಒಂದೇ ಎಂದು ಸಂದೇಶ ಕೊಟ್ಟಿದ್ದೇವೆ. ಇಲ್ಲಿ ಹಿಂದೂ ಮುಸ್ಲಿಂ ಅನ್ನೋದೇ ಇಲ್ಲ ಎಂದರು.

ಮತ್ತೊಂದೆಡೆ ರಾಮನಗರ ಕರಗಕ್ಕೆ ಕೋಟ್ಯಾಂತರ ಖರ್ಚು ಮಾಡಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಶಾಸಕ ಇಕ್ಬಾಲ್ ಹುಸೇನ್, ಬೇರೆಯವರ ರೀತಿ ಮಾಡೋದಕ್ಕೆ ಆಗಲ್ಲ. ಭಗವಂತ‌ ನನಗೆ ಅವಕಾಶ ಕೊಟ್ಟಿದ್ದಾನೆ. ಅದಕ್ಕೆ ಭಕ್ತಿ ಪೂರ್ವಕ ಕೆಲಸ ಮಾಡ್ತೇನೆ. ಪೂಜೆ, ಅಲಂಕಾರ, ಸಂಪ್ರದಾಯದಂತೆ ಎಲ್ಲವನ್ನೂ ಪಾಲನೆ ಮಾಡ್ತೇನೆ ಎಂದರು.

ಹಾಗೂ ಡಿಸಿಎಂ ಸಾಹೇಬ್ರು ಬಹುಬೇಗ ಸಿಎಂ‌ ಆಗುವ ಕೋರಿಕೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಶಾಸಕರು, ಅವರು ಪಕ್ಷ ಕಟ್ಟಿದ್ದಾರೆ, ಸಂಘಟನೆ ಮಾಡಿದ್ದಾರೆ. ಹೋರಾಟ ಮಾಡಿದ್ದಾರೆ, ಆ ನಿಟ್ಟಿನಲ್ಲಿ ನನಗೆ ಆಸೆ ಇರಲ್ವಾ? ಆಸೆ ಇದೆ ನನಗೆ, ನಾನು ದೇವರ ಬಳಿ ಕೋರಿಕೆ ಇಟ್ಟಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru Karaga 2024: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಸಂಪನ್ನ, ಫೋಟೋಸ್​ ಇಲ್ಲಿವೆ

ಮೈಸೂರಿಗೆ ದಸರಾ ಹಬ್ಬವಿದ್ದಂತೆ, ರಾಮನಗರಕ್ಕೆ ಚಾಮುಂಡೇಶ್ವರಿ ಅಮ್ಮನವರ ಕರಗ ಹೆಚ್ಚು ಪ್ರಸಿದ್ಧಿ. ಭಕ್ತರ ಸಂರಕ್ಷಣಾರ್ಥ ನಗರದಲ್ಲಿ ನೆಲೆಸಿರುವ ಶಕ್ತಿದೇವತೆ ಚಾಮುಂಡೇಶ್ವರಿ ಅಮ್ಮನವರ ಕರಗ ಸೇರಿದಂತೆ ಅಷ್ಟ ನಾಡದೇವತೆಗಳ ಕರಗ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ನಾಳೆಯಿಂದ ಚಾಮುಂಡೇಶ್ವರಿ ಕರಗ ಮಹೋತ್ಸವ ಆರಂಭವಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ