AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂಗೂ ತಟ್ಟಿದ ಮಳೆ ಎಫೆಕ್ಟ್: ವಾಹನ ಹೋಗಲಾರದೇ ಹೆದ್ದಾರಿಯಲ್ಲೇ ನಿಂತ ಹೆಚ್​​.ಡಿ. ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಮನೆಯೊಂದರ ಮೇಲೆ 150-200 ಜನರು ಸಿಲುಕಿಕೊಂಡಿದ್ದು, ಜನರ ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ಹೆಚ್.​​ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ಮಾಜಿ ಸಿಎಂಗೂ ತಟ್ಟಿದ ಮಳೆ ಎಫೆಕ್ಟ್: ವಾಹನ ಹೋಗಲಾರದೇ ಹೆದ್ದಾರಿಯಲ್ಲೇ ನಿಂತ ಹೆಚ್​​.ಡಿ. ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ
TV9 Web
| Edited By: |

Updated on:Aug 29, 2022 | 10:46 AM

Share

ರಾಮನಗರ: ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ರಾಮನಗರ-ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿಗೂ ಮಳೆ ಅವಾಂತರ ತಟ್ಟಿದೆ. ಮಳೆಯಿಂದ ಹೆದ್ದಾರಿ ಬಂದ್‌ ಆಗಿದ ಹಿನ್ನೆಲೆ ಮೈಸೂರಿಗೆ ತೆರಳುವ ವೇಳೆ ಸಂಗಬಸವನ ದೊಡ್ಡಿ, ಬಸವನಪುರ ಮಧುರ ಗಾರ್ಮೆಂಟ್ಸ್ ಹತ್ತಿರ ರಸ್ತೆ ಮದ್ಯೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಸಿಲುಕಿಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಮನೆಯೊಂದರ ಮೇಲೆ 150-200 ಜನರು ಸಿಲುಕಿಕೊಂಡಿದ್ದು, ಜನರ ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ಹೆಚ್.​​ಡಿ. ಕುಮಾರಸ್ವಾಮಿ ಮನವಿ ಮಾಡಿದರು. 2 ಬೋಟ್​ಗಳನ್ನ ಕಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು, ತಕ್ಷಣವೇ ಎನ್​ಡಿಆರ್​ಎಫ್​ ತಂಡ ಕಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಎಂ ಪ್ರಧಾನ ಕಾರ್ಯದರ್ಶಿ ಜೊತೆ ಹೆಚ್.ಡಿ ಕುಮಾರಸ್ವಾಮಿ ಚರ್ಚೆ ಮಾಡಿದರು.

ವರುಣಾರ್ಭಟಕ್ಕೆ ಹಲವು ಪ್ರದೇಶ ಜಲಾವೃತ: ಶಾಲಾ ಕಾಲೇಜುಗಳಿಗೆ ರಜೆ

ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ರಾಮನಗರ ತಾಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಬಳಿ ಜಮೀನು, ಮನೆಗಳು ಜಲಾವೃತಗೊಂಡಿದ್ದು, ರಾಮನಗರ ಪಟ್ಟಣ, ಅರ್ಕೇಶ್ವರ ಕಾಲೋನಿ ಮುಳುಗಡೆಯಾಗಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಮನಗರ, ಚನ್ನಪಟ್ಟಣದಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆಯಾ ಬ್ಲಾಕ್ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ: ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ

ಮಳೆಯ ಆರ್ಭಟಕ್ಕೆ ರಾಮನಗರದ ಹನುಮಂತನಗರದಲ್ಲಿ ರಂಗರಾಯನದೊಡ್ಡಿ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದಲ್ಲಿ ನೀರು ಹರಗೆ ಹರಿದು ಬರುತ್ತಿದೆ. ಪರಿಣಾಮವಾಗಿ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, ಮಮತಾ, ರಾಮಣ್ಣ, ರಾಜೀವ್ ಎಂಬವರ ಮೂರು ಮನೆಗಳು ಜಲಾವೃತಗೊಂಡು ಕುಟುಂಬಸ್ಥರು ಹೊರಬರಲಾಗದೆ ಪರದಾಡುವಂತಾಗಿದೆ.

ಇನ್ನು, ಚನ್ನಪಟ್ಟಣದಲ್ಲಿ ಸುರಿದ ಮಳೆಗೆ ಎಲೆಕೇರಿ-ರಾಂಪುರ ರಸ್ತೆ ಜಲಾವೃತಗೊಂಡು 4 ಅಡಿಗೂ ಹೆಚ್ಚು ನೀರು ರಸ್ತೆ ಮೂಲಕ ಹರಿದು ಹೋಗುತ್ತಿದೆ. ಅಲ್ಲದೆ ಈ ಭಾಗದಲ್ಲಿ ಪ್ರವಾಹದಂತೆ ನೀರು ಹರಿದು ಹೋಗುತ್ತಿರುವ ಪರಿಣಾಮ ಅಕ್ಕಪಕ್ಕದ ಬಡಾವಣೆ, ಮನೆಗಳು ಸಂಪೂರ್ಣ ಜಲಾವೃತವಾಗಿ ಜನರು ಪರಿತಪಿಸುವಂತಾಗಿದೆ. ವಾಹನ ಸವಾರರಿಗೆ ವಾಹನಗಳನ್ನು ಓಡಿಸಲು ಹರಸಾಹಸ ಪಡುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:40 am, Mon, 29 August 22

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ