AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಡಿಕಲ್ ಕಾಲೇಜು- ನಮ್ಮ ಹಕ್ಕು ಘೋಷಣೆಯಡಿ ಪೋಸ್ಟರ್, ಸೆ.8ರಂದು ರಾಮನಗರ ಬಂದ್​ಗೆ ಕರೆ

ಶ್ರೀ ಕೆಂಗಲ್ ಹನುಮಂತಯ್ಯ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸೆ.8 ರಂದು ರಾಮನಗರ ಬಂದ್​ಗೆ ಕರೆ ಕೊಟ್ಟಿದೆ. ಮತ್ತೊಂದೆಡೆ ಇದೇ ವಿಚಾರಕ್ಕೆ ಇಂದು ರಾಮನಗರ ಪಟ್ಟಣದಲ್ಲಿ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕನ್ನಡಪರ‌ ಸಂಘಟನೆ ಮತ್ತು ಜೆಡಿಎಸ್ ಕಾರ್ಯಕರ್ತರು ನಮ್ಮ ಮೆಡಿಕಲ್ ಕಾಲೇಜು- ನಮ್ಮ ಹಕ್ಕು ಘೋಷಣೆಯಡಿ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ.

ನಮ್ಮ ಮೆಡಿಕಲ್ ಕಾಲೇಜು- ನಮ್ಮ ಹಕ್ಕು ಘೋಷಣೆಯಡಿ ಪೋಸ್ಟರ್, ಸೆ.8ರಂದು ರಾಮನಗರ ಬಂದ್​ಗೆ ಕರೆ
ನಮ್ಮ ಮೆಡಿಕಲ್ ಕಾಲೇಜು- ನಮ್ಮ ಹಕ್ಕು ಘೋಷಣೆಯಡಿ ಪೋಸ್ಟರ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಆಯೇಷಾ ಬಾನು|

Updated on: Sep 03, 2023 | 2:22 PM

Share

ರಾಮನಗರ, ಸೆ.03: ರೇಷ್ಮೆನಗರಿ ರಾಮನಗರದಲ್ಲಿ(Ramanagara) ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು(Rajiv Gandhi Medical College) ಸ್ಥಾಪನೆ ಗೊಂದಲ ಮುಂದುವರಿದಿದೆ. ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ಶಾಸಕರು, ಸಚಿವರ ನಡುವೆಯೇ ಸ್ಪಷ್ಟನೆ ಇಲ್ಲ. ರಾಜೀವ್ ಗಾಂಧಿ ಆರೋಗ್ಯ ವಿವಿಯ ಮೆಡಿಕಲ್ ಕಾಲೇಜು ಯೋಜನೆಯನ್ನು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಹಾಗೂ ಸಂಸದ ಡಿಕೆ ಸುರೇಶ್(DK Suresh) ಬಲವಂತವಾಗಿ ರಾಜೀವ್ ಗಾಂಧಿ ವಿವಿ ಅವರಣದಿಂದ ಕನಕಪುರಕ್ಕೆ(Kanakapura) ಶಿಫ್ಟ್ ಮಾಡುತ್ತಿದ್ದಾರೆ ಎಂದು‌ ಆರೋಪಿಸಿ ಶ್ರೀ ಕೆಂಗಲ್ ಹನುಮಂತಯ್ಯ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸೆ.8 ರಂದು ರಾಮನಗರ ಬಂದ್​ಗೆ ಕರೆ ಕೊಟ್ಟಿದೆ. ಮತ್ತೊಂದೆಡೆ ಇದೇ ವಿಚಾರಕ್ಕೆ ಇಂದು ರಾಮನಗರ ಪಟ್ಟಣದಲ್ಲಿ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಕನ್ನಡಪರ‌ ಸಂಘಟನೆ ಮತ್ತು ಜೆಡಿಎಸ್ ಕಾರ್ಯಕರ್ತರು ನಮ್ಮ ಮೆಡಿಕಲ್ ಕಾಲೇಜು- ನಮ್ಮ ಹಕ್ಕು ಘೋಷಣೆಯಡಿ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಮೆಡಿಕಲ್ ಕಾಲೇಜು ಸ್ಥಳಾಂತರ ವಿರೋಧಿಸಿ ಸೆಪ್ಟೆಂಬರ್ 8ರ ಬಂದ್​ಗೆ ಸಿದ್ಧತೆ ನಡೆದಿದೆ. ಸುಮಾರು 20 ವರ್ಷಗಳ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿವಿ ಮೆಡಿಕಲ್ ಕಾಲೇಜು ಮಂಜೂರಾಗಿತ್ತು. ಈ ಹಿಂದೆ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇದ್ದ ವೇಳೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರಾಗಿತ್ತು. ನಂತರ ಬಂದ ಬಿಜೆಪಿ ಸರ್ಕಾರ ಆ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಮಾಡಿತ್ತು‌. ಆದ್ರೆ ಈಗ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಬಲವಂತವಾಗಿ ರಾಜೀವ್ ಗಾಂಧಿ ವಿವಿ ಅವರಣದಿಂದ ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ರಾಮನಗರ ರಾಜೀವ್ ಗಾಂಧಿ ವಿವಿ ಸ್ಥಳಾಂತರ ಬೇಡ: ಹೆಚ್​ಡಿ ಕುಮಾರಸ್ವಾಮಿ

ಈ ಹಿಂದೆ ಈ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಅವರು ಕೂಡ ಆಕ್ರೋಶ ಹೊರ ಹಾಕಿದ್ದರು. 2006ರಲ್ಲಿ ರಾಮನಗರಕ್ಕೆ ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಬಂತು. ಜಿಲ್ಲಾ ಕೇಂದ್ರದಲ್ಲಿ ದೊಡ್ಡ ಆಸ್ಪತ್ರೆ ಬೇಕು ಅಂತ ನಾನು ಕನಸು ಕಂಡಿದ್ದೆ. 600 ಕೋಟಿ ರೂ ವೆಚ್ಚದಲ್ಲಿ ಹಿಂದಿನ ಸರ್ಕಾರ ಎರಡೂ ಸದನದಲ್ಲಿ ಅನುಮೋದನೆ ಕೊಟ್ಟಿತ್ತು. ಈಗ ಮೆಡಿಕಲ್‌ ಕಾಲೇಜು ಸ್ಥಳಾಂತರ ಮಾಡುವುದು ಎಷ್ಟುಸರಿ ಎಂದು ಪ್ರಶ್ನಿಸಿದ್ದರು.

ಮತ್ತೊಂದೆಡೆ ಡಿಕೆ ಶಿವಕುಮಾರ್ ಮಾತನಾಡಿ, ರಾಜಕಾರಣಿಯಾದ ಮೇಲೆ ಇಷ್ಟು ಇರಬಾರದಾ? ನಮ್ಮ ಕ್ಷೇತ್ರಕ್ಕೂ ಅಭಿವೃದ್ಧಿ ಬೇಡವೇ? ಹೀಗಾಗಿ ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಕೊಂಡೊಯ್ಯಲಾಗುತ್ತಿದೆ. ಕನಕಪುರ ರಾಮನಗರ ಜಿಲ್ಲೆಯಲ್ಲೇ ಇದೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಸದ್ಯ ರಾಮನಗರದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಸೆ.8 ರಂದು ರಾಮನಗರ ಬಂದ್​ಗೆ ಕರೆ ಕೊಡಲಾಗಿದೆ.

ರಾಮನಗರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ