AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ಸಾಲ‌ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್​ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಬಿಜೆಪಿ ಮುಖಂಡನ ವಿರುದ್ಧ ಕೇಳಿಬಂದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು, ಬಿಜೆಪಿ ಮುಖಂಡನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹಾಗಾದ್ರೆ, ಮಹಿಳೆ ನೀಡಿದ ದೂರಿನಲ್ಲೇನಿದೆ ಎನ್ನುವ ವಿವರ ಇಲ್ಲಿದೆ .

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್
ಬಿಜೆಪಿ ಮುಖಂಡ ಚಲುವರಾಮು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ರಮೇಶ್ ಬಿ. ಜವಳಗೇರಾ|

Updated on: Dec 27, 2024 | 7:26 PM

Share

ರಾಮನಗರ, (ಡಿಸೆಂಬರ್ 27): ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ತನ್ನ ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇತ್ತು. ಆಗ ಸಾಲ‌ ಕೊಡಿಸುವುದಾಗಿ ಚಲುವರಾಮು ಭರವಸೆ ನೀಡಿದ್ದರು. ಬಳಿಕ ಸಾಲ ಕೊಡುವವರು ಬರುತ್ತಿದ್ದಾರೆ ಬನ್ನಿ ಎಂದು ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದು, ಸಾಲ ಕೊಡುವವರ ಕಚೇರಿ ಇಲ್ಲೇ ಇದೆ ಎಂದು ಹೇಳಿದ್ದ. ಬಳಿಕ ಮತ್ತು ಬರಿಸಿ ಲಾಡ್ಜ್​ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ತಡೆಯೊಡ್ಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾಗಿ ಮಹಿಳೆ ದೂರಿದ್ದಾಳೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಅದಲು ಬದಲು: ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ..!

ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ, ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!