AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ಸಾಲ‌ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್​ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಬಿಜೆಪಿ ಮುಖಂಡನ ವಿರುದ್ಧ ಕೇಳಿಬಂದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು, ಬಿಜೆಪಿ ಮುಖಂಡನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹಾಗಾದ್ರೆ, ಮಹಿಳೆ ನೀಡಿದ ದೂರಿನಲ್ಲೇನಿದೆ ಎನ್ನುವ ವಿವರ ಇಲ್ಲಿದೆ .

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್
ಬಿಜೆಪಿ ಮುಖಂಡ ಚಲುವರಾಮು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Dec 27, 2024 | 7:26 PM

Share

ರಾಮನಗರ, (ಡಿಸೆಂಬರ್ 27): ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ತನ್ನ ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇತ್ತು. ಆಗ ಸಾಲ‌ ಕೊಡಿಸುವುದಾಗಿ ಚಲುವರಾಮು ಭರವಸೆ ನೀಡಿದ್ದರು. ಬಳಿಕ ಸಾಲ ಕೊಡುವವರು ಬರುತ್ತಿದ್ದಾರೆ ಬನ್ನಿ ಎಂದು ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದು, ಸಾಲ ಕೊಡುವವರ ಕಚೇರಿ ಇಲ್ಲೇ ಇದೆ ಎಂದು ಹೇಳಿದ್ದ. ಬಳಿಕ ಮತ್ತು ಬರಿಸಿ ಲಾಡ್ಜ್​ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ತಡೆಯೊಡ್ಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾಗಿ ಮಹಿಳೆ ದೂರಿದ್ದಾಳೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಅದಲು ಬದಲು: ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ..!

ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ, ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್