AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್

ಸಾಲ‌ ಕೊಡಿಸುವುದಾಗಿ ಮಹಿಳೆಯನ್ನು ಲಾಡ್ಜ್​ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಬಿಜೆಪಿ ಮುಖಂಡನ ವಿರುದ್ಧ ಕೇಳಿಬಂದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು, ಬಿಜೆಪಿ ಮುಖಂಡನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹಾಗಾದ್ರೆ, ಮಹಿಳೆ ನೀಡಿದ ದೂರಿನಲ್ಲೇನಿದೆ ಎನ್ನುವ ವಿವರ ಇಲ್ಲಿದೆ .

ಸಾಲ ಕೊಡಿಸುವುದಾಗಿ ಮಹಿಳೆಯನ್ನ ಲಾಡ್ಜ್​ಗೆ ಕರೆದೊಯ್ದ, ಬಿಜೆಪಿ ಮುಖಂಡ ಅರೆಸ್ಟ್
ಬಿಜೆಪಿ ಮುಖಂಡ ಚಲುವರಾಮು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Dec 27, 2024 | 7:26 PM

Share

ರಾಮನಗರ, (ಡಿಸೆಂಬರ್ 27): ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ತನ್ನ ಗಂಡನ ಕಾಗದ ಪತ್ರ ಸರಿಪಡಿಸಲು ಹಣದ ಅವಶ್ಯಕತೆ ಇತ್ತು. ಆಗ ಸಾಲ‌ ಕೊಡಿಸುವುದಾಗಿ ಚಲುವರಾಮು ಭರವಸೆ ನೀಡಿದ್ದರು. ಬಳಿಕ ಸಾಲ ಕೊಡುವವರು ಬರುತ್ತಿದ್ದಾರೆ ಬನ್ನಿ ಎಂದು ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದು, ಸಾಲ ಕೊಡುವವರ ಕಚೇರಿ ಇಲ್ಲೇ ಇದೆ ಎಂದು ಹೇಳಿದ್ದ. ಬಳಿಕ ಮತ್ತು ಬರಿಸಿ ಲಾಡ್ಜ್​ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ತಡೆಯೊಡ್ಡಿದ್ದಕ್ಕೆ ಕಪಾಳಕ್ಕೆ ಹೊಡೆದಿದ್ದಾಗಿ ಮಹಿಳೆ ದೂರಿದ್ದಾಳೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಅದಲು ಬದಲು: ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ..!

ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ, ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ